ಬ್ರೇಕಿಂಗ್ ನ್ಯೂಸ್
18-03-24 05:39 pm Mangalore Correspondent ಕರಾವಳಿ
ಮಂಗಳೂರು, ಮಾ.18: ಲೋಕಸಭಾ ಚುನಾವಣೆಯನ್ನು ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ಜಿಲ್ಲಾಡಳಿತದೊಂದಿಗೆ ಕೈಜೋಡಿಸುವುದು ಪ್ರತಿ ನಾಗರಿಕನ ಆದ್ಯ ಕರ್ತವ್ಯವಾಗಿದೆ. ಆದರೆ ಚುನಾವಣಾ ಕಾರ್ಯಕ್ಕೆ ಶಿಕ್ಷಕರನ್ನು ನಿಯೋಜಿಸುವ ಸಂದರ್ಭದಲ್ಲಿ ಚುನಾವಣಾ ಆಯೋಗವು ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಚಟುವಟಿಕೆಗಳು, ಪರೀಕ್ಷಾ ಕಾರ್ಯ, ಶಿಕ್ಷಕರ ವಯೋನಿವೃತ್ತಿ, ಅನಾರೋಗ್ಯ ಇನ್ನಿತರ ಅಗತ್ಯ ಅಂಶಗಳನ್ನು ಆಧರಿಸಿಕೊಂಡು ನಿಯೋಜಿಸಬೇಕೆಂದು ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಸಿಂಡಿಕೇಟ್ ಸದಸ್ಯ ಡಾ.ಎಸ್.ಆರ್ ಹರೀಶ್ ಆಚಾರ್ಯ ಚುನಾವಣಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಶೈಕ್ಷಣಿಕ ವರ್ಷದ ಅಂತ್ಯದ ಈ ಸಂದರ್ಭದಲ್ಲಿ ಎಲ್ಲಾ ಶಿಕ್ಷಕರು ಪರೀಕ್ಷಾ ಕಾರ್ಯ ಹಾಗೂ ಅದರ ಮೌಲ್ಯಮಾಪನಾ ಕಾರ್ಯದ ಒತ್ತಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಶಿಕ್ಷಕರು ಈ ಕಾರ್ಯದಲ್ಲಿ ಸಂಪೂರ್ಣ ತೊಡಗಿಕೊಳ್ಳುವುದು ಅತ್ಯಂತ ಅವಶ್ಯಕವೂ ಆಗಿದೆ. ಆದರೆ ಶಿಕ್ಷಕರು ವಿಚಕ್ಷಣ ದಳ, ಗಡಿ ತಪಾಸಣೆ ಇನ್ನಿತರ ಚುನಾವಣಾ ಕಾರ್ಯಗಳನ್ನು ನಿರ್ವಹಿಸಬೇಕಾದ ಸಂದರ್ಭದಲ್ಲಿ ಶೈಕ್ಷಣಿಕ ಚಟುವಟಿಕೆಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಆದುದರಿಂದ ಶಿಕ್ಷಕರನ್ನು ನಿಯೋಜಿಸುವ ಸಂದರ್ಭದಲ್ಲಿ ಚುನಾವಣಾ ಆಯೋಗವು ಶೈಕ್ಷಣಿಕ ಕಾರ್ಯ ಚಟುವಟಿಕೆಗಳಿಗೆ ಹೆಚ್ಚು ಆದ್ಯತೆ ನೀಡಿ ನಿಯೋಜಿಸಬೇಕೆಂದು ಅವರು ಮನವಿ ಮಾಡಿದ್ದಾರೆ.
ಯಾವುದೇ ಸಿಬ್ಬಂದಿಯನ್ನು ನಿವೃತ್ತಿಗೆ ಆರು ತಿಂಗಳು ಅಥವಾ ಅದಕ್ಕಿಂತ ಕಡಿಮೆ ಸೇವಾವಧಿ ಇರುವವರನ್ನು ನಿಯೋಜಿಸಬಾರದೆಂದು ಚುನಾವಣಾ ಆಯೋಗದ ನಿಯಮವಿದೆ. ಆದರೆ ಅನೇಕ ನಿವೃತ್ತಿಯ ಅಂಚಿನಲ್ಲಿರುವ ಶಿಕ್ಷಕರನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಹಾಗೆಯೇ ದೈಹಿಕ ಅನಾರೋಗ್ಯದಿಂದ ಬಳಲುತ್ತಿರುವ ಶಿಕ್ಷಕರನ್ನು ಹಾಗೂ ಗರ್ಭಿಣಿ ಮಹಿಳಾ ಶಿಕ್ಷಕರನ್ನು ಮಾನವೀಯ ನೆಲೆಯಲ್ಲಿ ಪರಿಗಣಿಸಿ ಚುನಾವಣಾ ಕರ್ತವ್ಯಗಳಿಂದ ದೂರವಿಡಬೇಕೆಂದು ಒತ್ತಾಯಿಸಿ ಅವರು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ್ದಾರೆ.
Mangalore Assignment of teachers for election duty; Harish Acharya appeals to consider examination, age retirement, illness.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 02:18 pm
HK News Staffer
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm