ಬ್ರೇಕಿಂಗ್ ನ್ಯೂಸ್
18-03-24 10:28 pm Mangalore Correspondent ಕರಾವಳಿ
ಮಂಗಳೂರು, ಮಾ.18: ದಕ್ಷಿಣ ಕನ್ನಡ ಜಿಲ್ಲೆಯೆಂಬ ಪ್ರತಿಷ್ಠಿತ ಲೋಕಸಭಾ ಕ್ಷೇತ್ರದಿಂದ ತುಳುನಾಡನ್ನು ಪ್ರತಿನಿಧಿಸಲು ಅವಕಾಶ ಸಿಕ್ಕಿದ್ದು ತುಳುನಾಡಿನ ದೈವ ದೇವರ ಆಶೀರ್ವಾದ. ನಮ್ಮೂರಿನ ಯುವ ಜನಾಂಗ ದೇಶ - ವಿದೇಶಗಳಿಗೆ ಉದ್ಯೋಗಕ್ಕಾಗಿ ಹೋಗುತ್ತಿದ್ದು ಅವರ ಮನೆಯಲ್ಲಿ ಪ್ರಾಯದವರು ಮಾತ್ರ ಇದ್ದಾರೆ. ಇದು ತುಂಬ ಆತಂಕಕಾರಿ ಬೆಳವಣಿಗೆ. ನಮ್ಮಲ್ಲಿ ಎಲ್ಲಾ ಸೌಲಭ್ಯ ಇದ್ದು, ಉದ್ಯೋಗ ಸೃಷ್ಟಿಸುವ ಉದ್ಯಮ ಬೆಳೆಸಿದಲ್ಲಿ ಯುವ ಜನಾಂಗ ಉದ್ಯೋಗಕ್ಕಾಗಿ ಹೊರಗೆ ಹೋಗಬೇಕಾಗಿಲ್ಲ. ನಾವೆಲ್ಲ ಸೇರಿ ಸಂಪದ್ಭರಿತ ಜಿಲ್ಲೆಯನ್ನು ಕಟ್ಟೋಣ ಎಂದು ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಕ್ಯಾ. ಬೃಜೇಶ್ ಚೌಟ ಹೇಳಿದರು.
ಪನ್ವೇಲ್ ಮಹಾನಗರ ಪಾಲಿಕೆಯ ನಗರಸೇವಕ ಹಾಗೂ ಶ್ರೀ ಕ್ಷೇತ್ರ ನಂದಾವರ ಇದರ ಬ್ರಹ್ಮಕಲಶ ಸಮಿತಿ ಅಧ್ಯಕ್ಷ ಸಂತೋಷ್ ಜಿ. ಶೆಟ್ಟಿ ದಲಂದಿಲ ಇವರ ನೇತೃತ್ವದಲ್ಲಿ ನಡೆದ ತುಳು ಕನ್ನಡಿಗ ಅಭಿಮಾನಿಗಳೊಂದಿಗೆ ಸಭೆಯಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ಪೂರ್ವ ಜನ್ಮದಲ್ಲಿ ಪುಣ್ಯ ಮಾಡಿದವರಿಗೆ ಮಾತ್ರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪುನರ್ಜನ್ಮದ ಅವಕಾಶ ಸಿಗುತ್ತದೆ. ದಕ್ಷಿಣ ಕನ್ನಡ ನಿಜವಾಗಿಯೂ ದೇವರ ಭೂಮಿಯಾಗಿದೆ. ಈ ಸಂದರ್ಭದಲ್ಲಿ ನಿಮ್ಮೆಲ್ಲರಿಗೆ ವಿನಮ್ರವಾಗಿ ಒಂದು ಭರವಸೆಯನ್ನು ನೀಡುತ್ತಿದ್ದೇನೆ. ನನಗೆ ಜವಾಬ್ದಾರಿ ಇರುವ ತನಕ ದಕ್ಷಿಣ ಕನ್ನಡ ಜಿಲ್ಲೆಯನ್ನು ರಾಷ್ಟ್ರದ ಒಂದು ಪ್ರಗತಿಶೀಲ ಜಿಲ್ಲೆಯಾಗಿ ಹಾಗೂ ಅಭಿವೃದ್ಧಿ ಶೀಲ ಜಿಲ್ಲೆಯಾಗಿ ಪರಿವರ್ತಿಸಲು ಪಣ ತೊಡುತ್ತೇನೆ ಎಂದು ಹೇಳಿದರು.
ನಗರಸೇವಕ ಸಂತೋಷ್ ಜಿ. ಶೆಟ್ಟಿ ಮಾತನಾಡಿ, ನಮ್ಮ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗಾಗಿ ಭರವಸೆಯ ವ್ಯಕ್ತಿಯೊಬ್ಬರು ಇಂದು ಪಕ್ಷದ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದು ನಮ್ಮೆಲ್ಲರ ಸೌಭಾಗ್ಯ. ಮಿಲಿಟರಿಯಲ್ಲಿ ಸೇವೆಗೈದು ರಾಜಕೀಯದ ಮೂಲಕ ದೇಶ ಸೇವೆಗಿಳಿದಿರುವ ಬ್ರಿಜೇಶ್ ಚೌಟರು, ನಮ್ಮ ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿ ಪರಿವರ್ತಿಸುವಲ್ಲಿ ಸಂದೇಹವಿಲ್ಲ. ನಾವು ನಮ್ಮ ದೇಶಕ್ಕಾಗಿ ಒಟ್ಟಾಗಿದ್ದೇವೆ, ನಮಗೆ ಜಾತಿ ಮುಖ್ಯವಲ್ಲ. ನಮ್ಮ ದೇಶ ಮುಖ್ಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಲದ ವಿವಿಧ ಸಮುದಾಯಗಳ ಅನೇಕ ಗಣ್ಯರು ಉಪಸ್ಥಿತರಿದ್ದರು. ಸ್ಥಳೀಯ ಶಾಸಕ ಪ್ರಶಾಂತ್ ಠಾಕೂರು ಮಾತನಾಡಿ, ಮುಂಬಯಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ನಾಗರಿಕರೊಂದಿಗೆ ನಾವೆಲ್ಲರಿದ್ದು ಬ್ರಿಜೇಶ್ ಚೌಟರಿಗೆ ಬೆಂಬಲ ನೀಡೋಣ ಎಂದರು.
Mangalore Mp candidate of Dakshina Kannada Brijesh Chowta attends program in Mumbai.
22-09-25 07:07 pm
Bangalore Correspondent
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
22-09-25 06:58 pm
HK News Desk
ದೇಶಾದ್ಯಂತ ಬಿಹಾರ ಮಾದರಿ ಮತದಾರ ಪಟ್ಟಿ ಪರಿಷ್ಕರಣೆ ;...
22-09-25 10:50 am
ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್...
20-09-25 11:03 pm
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
22-09-25 04:09 pm
Mangalore Correspondent
ದೋಷಯುಕ್ತ ಇಲೆಕ್ಟ್ರಿಕ್ ವಾಹನ ; ಓಲಾ ಕಂಪನಿ ವಿರುದ್...
22-09-25 01:51 pm
ಸೆ.22ರಿಂದ ಮಂಗಳೂರು ದಸರಾ ವೈಭವ ; ಸಾಂಸ್ಕೃತಿಕ ಕಲಾವ...
20-09-25 10:39 pm
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
22-09-25 08:16 pm
Mangalore Correspondent
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm