ದೈವ, ದೇವರ ಹೆಸರಿನಲ್ಲಿ ಕಲಾವಿದರ ಮೇಲೆ ದಬ್ಬಾಳಿಕೆ ಸಹಿಸಲ್ಲ ; ಕರಾವಳಿ ಕಲಾವಿದರು, ತಂತ್ರಜ್ಞರಿಂದ ಎಚ್ಚರಿಕೆ 

18-03-24 10:56 pm       Mangalore Correspondent   ಕರಾವಳಿ

ದೈವ, ದೇವರ ಹೆಸರಿನಲ್ಲಿ ಕಲಾವಿದರ ಮೇಲೆ ಹಲ್ಲೆ, ದಬ್ಬಾಳಿಕೆ ನಡೆಸುವುದನ್ನು ಯಾವತ್ತೂ ಸಹಿಸಲ್ಲ. ಇದು ಇಲ್ಲಿಗೇ ಕೊನೆಯಾಗಬೇಕು. ಮುಂದೆ ಪುನರಾವರ್ತನೆ ಆದಲ್ಲಿ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಲಾಗುವುದು ಎಂದು ಕರಾವಳಿಯ ಕಲಾವಿದರು, ನಿರ್ಮಾಪಕರು ಮತ್ತು ತಂತ್ರಜ್ಷರು ಎಚ್ಚರಿಕೆ ನೀಡಿದ್ದಾರೆ.

ಮಂಗಳೂರು, ಮಾ.18: ದೈವ, ದೇವರ ಹೆಸರಿನಲ್ಲಿ ಕಲಾವಿದರ ಮೇಲೆ ಹಲ್ಲೆ, ದಬ್ಬಾಳಿಕೆ ನಡೆಸುವುದನ್ನು ಯಾವತ್ತೂ ಸಹಿಸಲ್ಲ. ಇದು ಇಲ್ಲಿಗೇ ಕೊನೆಯಾಗಬೇಕು. ಮುಂದೆ ಪುನರಾವರ್ತನೆ ಆದಲ್ಲಿ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಲಾಗುವುದು ಎಂದು ಕರಾವಳಿಯ ಕಲಾವಿದರು, ನಿರ್ಮಾಪಕರು ಮತ್ತು ತಂತ್ರಜ್ಷರು ಎಚ್ಚರಿಕೆ ನೀಡಿದ್ದಾರೆ.

ನಾಟಕ, ಯಕ್ಷಗಾನ, ಸಿನಿಮಾ ಕ್ಷೇತ್ರಗಳ ಕಲಾವಿದರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದೌರ್ಜನ್ಯವನ್ನು ಖಂಡಿಸಿ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಕಲಾವಿದರು ಡಾನ್ ಬಾಸ್ಕೋ ಹಾಲ್ ನಿಂದ ಜಿಲ್ಲಾಧಿಕಾರಿ ಕಚೇರಿಯ ವರೆಗೆ ಶಾಂತಿಯುತ ಕಾಲ್ನಡಿಗೆ ಜಾಥಾ ಆಯೋಜಿಸಿದ್ದರು. ಆದ್ರೆ ಚುನಾವಣಾ ನೀತಿಸಂಹಿತೆ ಜಾರಿ ಇರೋದರಿಂದ ಜಿಲ್ಲಾಡಳಿತದಿಂದ ಅನುಮತಿ ದೊರಕದ ಕಾರಣ ಕಲಾವಿದರು‌ ಡೋನ್ ಬೋಸ್ಕೋ ಹಾಲ್ ನಲ್ಲಿ ಎಲ್ಲಾ ಕಲಾವಿದರ ಅಭಿಪ್ರಾಯ ಸಂಗ್ರಹಿಸಿ, ಮುಂದೆ ಯಾವ ರೀತಿ ಸಮಸ್ಯೆ ಬಗೆಹರಿಸಬೇಕೆಂಬುದರ ವಿಚಾರದಲ್ಲಿ ಚರ್ಚೆ ನಡೆಸಿದರು. ಸಹಿ ಸಂಗ್ರಹ ಬಳಿಕ ಆಯ್ದ ಕಲಾವಿದರು ದ.ಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ತುಳು ನಾಟಕ ಕಲಾವಿದರ ಒಕ್ಕೂಟ, ಜಿಲ್ಲಾ ರಂಗ ಸಮ್ಮಿಲನ ವೇದಿಕೆ, ಕೋಸ್ಟಲ್ ವುಡ್ ಕಲಾವಿದರು ಮತ್ತು ತಂತ್ರಜ್ಞರ ಒಕ್ಕೂಟ ಮತ್ತು ಯಕ್ಷಗಾನ ಕಲಾವಿದರು ಸಹಯೋಗದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. 

ದೇವದಾಸ್ ಕಾಪಿಕಾಡ್, ವಿಜಯಕುಮಾರ್ ಕೊಡಿಯಾಲ್ ಬೈಲ್, ಸರಪಾಡಿ ಅಶೋಕ್ ಶೆಟ್ಟಿ , ಪ್ರಕಾಶ್ ತುಮಿನಾಡು, ಲಯನ್ ಕಿಶೋರ್ ಡಿ ಶೆಟ್ಟಿ ಮತ್ತಿತರ ಕಲಾವಿದರು ಭಾಗವಹಿಸಿದ್ದರು.

The Union of Tulu Drama Artists (R) Mangaluru, in collaboration with the District Theater Association Forum, Dakshina Kannada (DK), Udupi, and Kasargod, organized a foot-march condemning the ongoing oppression and violence against artists in the fields of drama, Yakshagana, and cinema from the artists of DK, Udupi, and Kasargod districts on Monday, March 18, at Don Bosco Hall.