ಬ್ರೇಕಿಂಗ್ ನ್ಯೂಸ್
18-03-24 10:56 pm Mangalore Correspondent ಕರಾವಳಿ
ಮಂಗಳೂರು, ಮಾ.18: ದೈವ, ದೇವರ ಹೆಸರಿನಲ್ಲಿ ಕಲಾವಿದರ ಮೇಲೆ ಹಲ್ಲೆ, ದಬ್ಬಾಳಿಕೆ ನಡೆಸುವುದನ್ನು ಯಾವತ್ತೂ ಸಹಿಸಲ್ಲ. ಇದು ಇಲ್ಲಿಗೇ ಕೊನೆಯಾಗಬೇಕು. ಮುಂದೆ ಪುನರಾವರ್ತನೆ ಆದಲ್ಲಿ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಲಾಗುವುದು ಎಂದು ಕರಾವಳಿಯ ಕಲಾವಿದರು, ನಿರ್ಮಾಪಕರು ಮತ್ತು ತಂತ್ರಜ್ಷರು ಎಚ್ಚರಿಕೆ ನೀಡಿದ್ದಾರೆ.
ನಾಟಕ, ಯಕ್ಷಗಾನ, ಸಿನಿಮಾ ಕ್ಷೇತ್ರಗಳ ಕಲಾವಿದರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದೌರ್ಜನ್ಯವನ್ನು ಖಂಡಿಸಿ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಕಲಾವಿದರು ಡಾನ್ ಬಾಸ್ಕೋ ಹಾಲ್ ನಿಂದ ಜಿಲ್ಲಾಧಿಕಾರಿ ಕಚೇರಿಯ ವರೆಗೆ ಶಾಂತಿಯುತ ಕಾಲ್ನಡಿಗೆ ಜಾಥಾ ಆಯೋಜಿಸಿದ್ದರು. ಆದ್ರೆ ಚುನಾವಣಾ ನೀತಿಸಂಹಿತೆ ಜಾರಿ ಇರೋದರಿಂದ ಜಿಲ್ಲಾಡಳಿತದಿಂದ ಅನುಮತಿ ದೊರಕದ ಕಾರಣ ಕಲಾವಿದರು ಡೋನ್ ಬೋಸ್ಕೋ ಹಾಲ್ ನಲ್ಲಿ ಎಲ್ಲಾ ಕಲಾವಿದರ ಅಭಿಪ್ರಾಯ ಸಂಗ್ರಹಿಸಿ, ಮುಂದೆ ಯಾವ ರೀತಿ ಸಮಸ್ಯೆ ಬಗೆಹರಿಸಬೇಕೆಂಬುದರ ವಿಚಾರದಲ್ಲಿ ಚರ್ಚೆ ನಡೆಸಿದರು. ಸಹಿ ಸಂಗ್ರಹ ಬಳಿಕ ಆಯ್ದ ಕಲಾವಿದರು ದ.ಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ತುಳು ನಾಟಕ ಕಲಾವಿದರ ಒಕ್ಕೂಟ, ಜಿಲ್ಲಾ ರಂಗ ಸಮ್ಮಿಲನ ವೇದಿಕೆ, ಕೋಸ್ಟಲ್ ವುಡ್ ಕಲಾವಿದರು ಮತ್ತು ತಂತ್ರಜ್ಞರ ಒಕ್ಕೂಟ ಮತ್ತು ಯಕ್ಷಗಾನ ಕಲಾವಿದರು ಸಹಯೋಗದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ದೇವದಾಸ್ ಕಾಪಿಕಾಡ್, ವಿಜಯಕುಮಾರ್ ಕೊಡಿಯಾಲ್ ಬೈಲ್, ಸರಪಾಡಿ ಅಶೋಕ್ ಶೆಟ್ಟಿ , ಪ್ರಕಾಶ್ ತುಮಿನಾಡು, ಲಯನ್ ಕಿಶೋರ್ ಡಿ ಶೆಟ್ಟಿ ಮತ್ತಿತರ ಕಲಾವಿದರು ಭಾಗವಹಿಸಿದ್ದರು.
The Union of Tulu Drama Artists (R) Mangaluru, in collaboration with the District Theater Association Forum, Dakshina Kannada (DK), Udupi, and Kasargod, organized a foot-march condemning the ongoing oppression and violence against artists in the fields of drama, Yakshagana, and cinema from the artists of DK, Udupi, and Kasargod districts on Monday, March 18, at Don Bosco Hall.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm