ಬ್ರೇಕಿಂಗ್ ನ್ಯೂಸ್
27-11-20 11:58 pm Mangaluru Correspondent ಕರಾವಳಿ
ಮಂಗಳೂರು, ನ.27: ನಗರದಲ್ಲಿ ಅಪಾರ್ಟ್ಮೆಂಟ್ನ ಆವರಣಗೋಡೆಯಲ್ಲಿ ಉಗ್ರ ಸಂಘಟನೆಗಳ ಪರ ಬರಹ ಪ್ರಕರಣವನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದ ಸರ್ಕೀಟ್ ಹೌಸ್ ಮುಂಭಾಗ ಶುಕ್ರವಾರ ಸಂಜೆ ಪ್ರತಿಭಟನೆ ನಡೆಸಿದರು.
ಉಗ್ರರ ಪರ ಬರಹ ಬರೆದರವನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿದ ಕಾರ್ಯಕರ್ತರು ದೊಂದಿ ಹಿಡಿದು ದೇಶದ್ರೋಹಿಗಳ ವಿರುದ್ಧ ಘೋಷಣೆ ಕೂಗಿದರು.

ಈ ಸಂದರ್ಭ ಮಾತನಾಡಿದ ಎಬಿವಿಪಿ ನಗರ ಕಾರ್ಯದರ್ಶಿ ಮಣಿಕಂಠ ಕಳಸ, ಪಾಕಿಸ್ತಾನದ ಲಷ್ಕರ್ ಇ ತೊಯ್ಬಾ ಉಗ್ರರ ಕೃತ್ಯದಿಂದ ಮುಂಬೈ ಮಹಾನಗರದಲ್ಲಿ ಸೈನಿಕರು, ಪೊಲೀಸರು ಸೇರಿ ಹಲವಾರು ಮಂದಿ ಮೃತಪಟ್ಟ ದಿನವಾದ ನ.26ರಂದು ದೇಶದ್ರೋಹಿಗಳು ಉಗ್ರರ ಪರ ಬರಹ ಪ್ರಕಟಿಸಿರುವುದು ಖಂಡನೀಯ. ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಬೇಕಾದ ದಿನ ಉಗ್ರರ ಪರ ಗೋಡೆ ಬರಹದ ಮೂಲಕ ದೇಶದ್ರೋಹಿಗಳು ಮಂಗಳೂರಿನ ಶಾಂತಿ ಕದಡುವ ವಿಕೃತಿ ಮೆರೆದಿದ್ದಾರೆ. ಘಟನೆಯ ಹಿಂದೆ ಇರುವವರನ್ನು ತಕ್ಷಣ ಬಂಧಿಸದೇ ಇದ್ದಲ್ಲಿ ಮುಂದೆ ಇಂತಹ ಘಟನೆಗಳು ಮರುಕಳಿಸಿ ದೊಡ್ಡ ಅನಾಹುತವೇ ಸಂಭವಿಸಬಹುದು. ಈ ನಿಟ್ಟಿನಲ್ಲಿ ವಿಶೇಷ ತಂಡ ರಚಿಸಿ ಘಟನೆಗೆ ಕಾರಣರಾದವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಎಬಿವಿಪಿ ರಾಜ್ಯ ಸಹಕಾರ್ಯದರ್ಶಿ ಸಂದೇಶ್ ರೈ ಮಜಕ್ಕಾರ್, ಜಿಲ್ಲಾ ಸಂಚಾಲಕ ಹರ್ಷಿತ್ ಕೊಯ್ಲ, ನಗರ ಸಂಘಟನಾ ಕಾರ್ಯದರ್ಶಿ ಅಜಯ್ ಪ್ರಭು, ರಾಜ್ಯ ಕಾರ್ಯಕಾರಿಣಿ ಸದಸ್ಯ ನಿಷಾನ್ ಆಳ್ವ, ವಿದ್ಯಾರ್ಥಿ ನಾಯಕರಾದ ದಿನೇಶ್, ಅಖಿಲೇಶ್, ಆದಿತ್ಯ ಕೆ.ಆರ್., ಕಿರಣ್, ಸಂತೋಷ್, ಆದಿತ್ಯ ಶೆಟ್ಟಿ, ಕೀರ್ತನ್, ಆಕಾಶ್ ಮುಂತಾದವರು ಉಪಸ್ಥಿತರಿದ್ದರು.
Pro-Terror Graffiti on apartment compound wall in Kadri, ABVP Mangalore held a protest demanding for the quick arrest of the miscreants.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm