ಬ್ರೇಕಿಂಗ್ ನ್ಯೂಸ್
27-11-20 11:58 pm Mangaluru Correspondent ಕರಾವಳಿ
ಮಂಗಳೂರು, ನ.27: ನಗರದಲ್ಲಿ ಅಪಾರ್ಟ್ಮೆಂಟ್ನ ಆವರಣಗೋಡೆಯಲ್ಲಿ ಉಗ್ರ ಸಂಘಟನೆಗಳ ಪರ ಬರಹ ಪ್ರಕರಣವನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದ ಸರ್ಕೀಟ್ ಹೌಸ್ ಮುಂಭಾಗ ಶುಕ್ರವಾರ ಸಂಜೆ ಪ್ರತಿಭಟನೆ ನಡೆಸಿದರು.
ಉಗ್ರರ ಪರ ಬರಹ ಬರೆದರವನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿದ ಕಾರ್ಯಕರ್ತರು ದೊಂದಿ ಹಿಡಿದು ದೇಶದ್ರೋಹಿಗಳ ವಿರುದ್ಧ ಘೋಷಣೆ ಕೂಗಿದರು.

ಈ ಸಂದರ್ಭ ಮಾತನಾಡಿದ ಎಬಿವಿಪಿ ನಗರ ಕಾರ್ಯದರ್ಶಿ ಮಣಿಕಂಠ ಕಳಸ, ಪಾಕಿಸ್ತಾನದ ಲಷ್ಕರ್ ಇ ತೊಯ್ಬಾ ಉಗ್ರರ ಕೃತ್ಯದಿಂದ ಮುಂಬೈ ಮಹಾನಗರದಲ್ಲಿ ಸೈನಿಕರು, ಪೊಲೀಸರು ಸೇರಿ ಹಲವಾರು ಮಂದಿ ಮೃತಪಟ್ಟ ದಿನವಾದ ನ.26ರಂದು ದೇಶದ್ರೋಹಿಗಳು ಉಗ್ರರ ಪರ ಬರಹ ಪ್ರಕಟಿಸಿರುವುದು ಖಂಡನೀಯ. ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಬೇಕಾದ ದಿನ ಉಗ್ರರ ಪರ ಗೋಡೆ ಬರಹದ ಮೂಲಕ ದೇಶದ್ರೋಹಿಗಳು ಮಂಗಳೂರಿನ ಶಾಂತಿ ಕದಡುವ ವಿಕೃತಿ ಮೆರೆದಿದ್ದಾರೆ. ಘಟನೆಯ ಹಿಂದೆ ಇರುವವರನ್ನು ತಕ್ಷಣ ಬಂಧಿಸದೇ ಇದ್ದಲ್ಲಿ ಮುಂದೆ ಇಂತಹ ಘಟನೆಗಳು ಮರುಕಳಿಸಿ ದೊಡ್ಡ ಅನಾಹುತವೇ ಸಂಭವಿಸಬಹುದು. ಈ ನಿಟ್ಟಿನಲ್ಲಿ ವಿಶೇಷ ತಂಡ ರಚಿಸಿ ಘಟನೆಗೆ ಕಾರಣರಾದವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಎಬಿವಿಪಿ ರಾಜ್ಯ ಸಹಕಾರ್ಯದರ್ಶಿ ಸಂದೇಶ್ ರೈ ಮಜಕ್ಕಾರ್, ಜಿಲ್ಲಾ ಸಂಚಾಲಕ ಹರ್ಷಿತ್ ಕೊಯ್ಲ, ನಗರ ಸಂಘಟನಾ ಕಾರ್ಯದರ್ಶಿ ಅಜಯ್ ಪ್ರಭು, ರಾಜ್ಯ ಕಾರ್ಯಕಾರಿಣಿ ಸದಸ್ಯ ನಿಷಾನ್ ಆಳ್ವ, ವಿದ್ಯಾರ್ಥಿ ನಾಯಕರಾದ ದಿನೇಶ್, ಅಖಿಲೇಶ್, ಆದಿತ್ಯ ಕೆ.ಆರ್., ಕಿರಣ್, ಸಂತೋಷ್, ಆದಿತ್ಯ ಶೆಟ್ಟಿ, ಕೀರ್ತನ್, ಆಕಾಶ್ ಮುಂತಾದವರು ಉಪಸ್ಥಿತರಿದ್ದರು.
Pro-Terror Graffiti on apartment compound wall in Kadri, ABVP Mangalore held a protest demanding for the quick arrest of the miscreants.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm