ಬ್ರೇಕಿಂಗ್ ನ್ಯೂಸ್
22-03-24 09:44 pm Udupi Correspondent ಕರಾವಳಿ
ಉಡುಪಿ, ಮಾ.22: ಎಂಪಿಯಾಗಿ ದೆಹಲಿಗೆ ಹೋಗೋರಿಗೆ ಹಿಂದಿ, ಇಂಗ್ಲಿಷ್ ಭಾಷೆ ತಿಳಿದಿರಬೇಕು. ನಮ್ಮ ಎದುರಾಳಿಗೆ ಭಾಷೆ ಗೊತ್ತಿಲ್ಲ ಎಂದು ಟಾಂಗ್ ಇಟ್ಟ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರಿಗೆ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ತಿರುಗೇಟು ನೀಡಿದ್ದಾರೆ.
ಜಯಪ್ರಕಾಶ್ ಹೆಗ್ಡೆ ಆಡಿದ್ದ ಮಾತು ಭಾರೀ ವೈರಲ್ ಆಗಿತ್ತು. ಇದಕ್ಕೆ ಉತ್ತರಿಸಿದ ಪೂಜಾರಿ, ಭಾಷೆ ನಮ್ಮ ಬದುಕಿನ ಭಾಗ ಅಷ್ಟೇ. ನನ್ನ ಮಾತೃಭಾಷೆ ಕನ್ನಡ ನನಗೆ ಚೆನ್ನಾಗಿ ಬರುತ್ತದೆ. ಜಯಪ್ರಕಾಶ್ ಹೆಗ್ಡೆ ನಾನು ಸಂಸದನಾದರೆ ಭಾಷೆ ಸಮಸ್ಯೆಯಾಗುತ್ತದೆ ಎಂದಿದ್ದಾರೆ. ಸಂಸದನಾಗಿ ಆರು ತಿಂಗಳಲ್ಲಿ ಹಿಂದಿ ಕಲಿಯುತ್ತೇನೆ. ಈ ಬಗ್ಗೆ ಉಡುಪಿ -ಚಿಕ್ಕಮಗಳೂರಿನ ಮತದಾರಿಗೆ ನಾನು ಭರವಸೆ ಕೊಡುತ್ತೇನೆ. ನನಗೆ ಭಾಷೆ ತೊಡಕಾಗುತ್ತದೆ ಎಂಬ ಆತಂಕ ನಿಮಗೆ ಬೇಡ. ಸಂಸದನಾಗಿ ಅರೇ ತಿಂಗಳಲ್ಲಿ ಹಿಂದಿಯಲ್ಲಿ ಭಾಷಣ ಮಾಡುತ್ತೇನೆ. ನನ್ನ ಬಗ್ಗೆ ಆತಂಕ ಇರುವ ಜಯಪ್ರಕಾಶ್ ಹೆಗ್ಡೆ ಅವರನ್ನೂ ಖುಷಿ ಪಡಿಸುತ್ತೇನೆ ಎಂದು ವ್ಯಂಗ್ಯವಾಗಿ ಸವಾಲು ಹಾಕಿದ್ದಾರೆ.

ಕನ್ನಡ ಮಾತ್ರ ತಿಳಿದಿರುವ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಅಣಕಿಸಿ ಜಯಪ್ರಕಾಶ್ ಹೆಗ್ಡೆ ಮಾತನಾಡಿದ್ದರು. ಹಿಂದಿ, ಇಂಗ್ಲಿಷ್ ಬರದೇ ದೆಹಲಿಯಲ್ಲಿ ವ್ಯವಹಾರ ಕಷ್ಟ ಸಾಧ್ಯ? ಭಾಷೆ ಬರದಿದ್ದರೆ ಕಚೇರಿಗಳಲ್ಲಿ ಬಹಳ ಸಮಸ್ಯೆಯಾಗುತ್ತದೆ. ಅಧಿಕಾರಿಗಳ ಬಳಿ ಹೋಗಿ ವೈಯಕ್ತಿಕವಾಗಿ ಮಾತನಾಡುವಾಗ ತೊಂದರೆ ಆಗುತ್ತದೆ. ಭಾಷೆ ಬರುವ ಬೇರೆಯವರನ್ನು ತನ್ನ ಬದಲಿಗೆ ಕಳಿಸಿ ವ್ಯವಹಾರ ಮಾಡಲು ಸಾಧ್ಯವಿಲ್ಲ. ಪಾಸ್ ಇಲ್ಲದ ವ್ಯಕ್ತಿ ಸಂಸತ್ ಒಳಗೆ ವ್ಯವಹರಿಸಲೂ ಸಾಧ್ಯವಿಲ್ಲ.
ಸ್ವತಃ ಎಂಪಿ ಮಾತ್ರ ಅಧಿಕಾರಿಗಳ ಬಳಿ ಹೋಗಿ ವ್ಯವಹರಿಸಬಹುದು. ಭಾಷೆ ಬರದಿದ್ದರೆ ಸಂಸದನಾಗಿ ಕೆಲಸ ನಿಭಾಯಿಸುವುದು ಕಷ್ಟ. ಕೆಲಸಕ್ಕೆ ಅಡ್ಡಿಯಾಗುತ್ತದೆ. ಅನುವಾದಕ ಒಬ್ಬರು ಇರುತ್ತಾರೆ.. ಕನ್ನಡದಲ್ಲಿ ಮಾತನಾಡುವ ಅವಕಾಶ ಇದೆ. ನಾನು ಸಂಸದನಾಗಿದ್ದಾಗ ಕನ್ನಡದಲ್ಲೇ ಪ್ರತಿಜ್ಞೆ ಸ್ವೀಕರಿಸಿದ್ದೆ. ಕನ್ನಡದಲ್ಲಿಯೇ ಭಾಷಣ ಮಾಡುತ್ತೇನೆ ಎಂದು ಪಾರ್ಲಿಮೆಂಟ್ ನಲ್ಲಿ ಅಧಿಕಾರಿಗಳಿಗೆ ತಿಳಿಸಿದ್ದೆ. ಅನುವಾದ ಮಾಡಿದರೆ ಯಾರು ನಿಮ್ಮ ಕನ್ನಡ ಭಾಷಣವನ್ನು ಕೇಳುವುದಿಲ್ಲ ಎಂದವರು ಹೇಳಿದ್ದರು. ಹಿಂದಿ ಅಥವಾ ಇಂಗ್ಲಿಷ್ ನಲ್ಲಿ ಮಾತನಾಡಿದರೆ ಸಂಸದರು ಕೇಳುತ್ತಾರೆ ಎಂದು ಹೇಳಿದ್ದರು. ಕನ್ನಡದಲ್ಲಿ ಮಾತನಾಡಬಾರದು ಎಂದು ಏನೂ ಇಲ್ಲ. ಆದರೆ ಸಂಸದರಾಗಿ ನಮಗೆ ರಾಷ್ಟ್ರೀಯ ಭಾಷೆಗಳ ಹಿಡಿತ ಇರಬೇಕು ಎಂದು ಉಡುಪಿಯ ಬ್ರಹ್ಮಾವರದಲ್ಲಿ ಜಯಪ್ರಕಾಶ್ ಹೆಗ್ಡೆ ಭಾಷಣ ಮಾಡಿದ್ದರು.
Udupi Kota Shrinivas Poojari slams Congress Jayaprakash Hegde. I can learn Hindi well not a big issue to learn.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am