ಬ್ರೇಕಿಂಗ್ ನ್ಯೂಸ್
22-03-24 09:57 pm Mangalore Correspondent ಕರಾವಳಿ
ಮಂಗಳೂರು, ಮಾ.22: ಗ್ಯಾರಂಟಿಗಳ ಆಸರೆಯಿಂದ ಅಧಿಕಾರಕ್ಕೇರಿದ ಕಾಂಗ್ರೆಸ್, ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾರಿ ಮಾಡದೆ ರಾಜ್ಯದ ಜನತೆಗೆ ಮಂಕುಬೂದಿ ಎರಚಿದೆ. ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿರುವ ಕಾಂಗ್ರೆಸ್ ಒಂದೇ ವರ್ಗದ ಅತಿಯಾದ ಓಲೈಕೆಯಲ್ಲಿ ತೊಡಗಿದೆ ಎಂದು ಮಂಗಳೂರು ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿ ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವಿಧಾನಸೌಧದ ಒಳಗೆ ದೇಶದ್ರೋಹಿ ಘೋಷಣೆ ಕೂಗಿದವರ ವಿರುದ್ಧ ಕ್ರಮ ಜರುಗಿಸಿಲ್ಲ. ಆದರೆ ಗೋ ಹಂತಕರ ವಿರುದ್ಧ ಹೋರಾಡುವ ಹಿಂದೂ ಕಾರ್ಯಕರ್ತರ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸು ಹಾಕುತ್ತಿದ್ದಾರೆ. ಇಡೀ ರಾಜ್ಯದಲ್ಲಿ ಬರಗಾಲ ಆವರಿಸಿದ್ದರೂ ರಾಜ್ಯ ಸರಕಾರ ಬರ ಪರಿಹಾರ ಕಾರ್ಯದಲ್ಲಿ ಸಂಪೂರ್ಣ ವಿಫಲವಾಗಿದೆ. 875ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಜನರು ವಲಸೆ ಹೋಗುತ್ತಿದ್ದಾರೆ. ಆದರೆ ಸಚಿವ ಶಿವಾನಂದ ಪಾಟೀಲ, ಸರಕಾರದ ಪರಿಹಾರದ ಆಸೆಗಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿಕೆ ನೀಡಿ ರೈತರನ್ನೇ ಅಣಕಿಸಿದ್ದಾರೆ ಎಂದು ಟೀಕಿಸಿದರು.
ಪರಿಶಿಷ್ಟ ಜಾತಿ, ವರ್ಗದವರ ಅಭಿವೃದ್ಧಿಗೆ ಸಂಬಂಧಿಸಿದ 11 ಸಾವಿರ ಕೋಟಿಗೂ ಹೆಚ್ಚು ಮೊತ್ತದ ಹಣವನ್ನು ಬೇರೆ ಉದ್ದೇಶಕ್ಕೆ ಹಾಗೂ ಗ್ಯಾರಂಟಿಗಳಿಗೆ ಸರಕಾರ ಬಳಸಿಕೊಂಡಿದೆ. ದಲಿತರು, ಶೋಷಿತ ಸಮುದಾಯದವರ ಬಗ್ಗೆ ಸಿದ್ದರಾಮಯಯ್ಯನವರ ಮೊಸಳೆ ಕಣ್ಣೀರಿಗೆ ಇದೇ ಸಾಕ್ಷಿ. ಇದು ದಲಿತ ವಿರೋಧಿ ಸರಕಾರವಾಗಿದ್ದು, ಈ ಸಮುದಾಯಗಳ ಮೇಲಿನ ಅನ್ಯಾಯ ನಿರಂತರವಾಗಿ ನಡೆಯುತ್ತಿದೆ.
ರಾಜ್ಯದ ಖಜಾನೆ ಖಾಲಿಯಾಗಿದೆ. ಹಿಂದಿನ ಯುಪಿಎ ಸರಕಾರಕ್ಕೆ ಹೋಲಿಸಿದರೆ ಕೇಂದ್ರದ ಬಿಜೆಪಿ ಸರಕಾರವು ರಾಜ್ಯಕ್ಕೆ ಶೇ 200ಕ್ಕೂ ಹೆಚ್ಚು ಮೊತ್ತವನ್ನು ಕೊಟ್ಟಿದ್ದರೂ ಕೇಂದ್ರದತ್ತ ಬೊಟ್ಟು ಮಾಡಿ ತಮ್ಮ ವೈಫಲ್ಯವನ್ನು ಮುಚ್ಚಿಹಾಕಿ ಜನರ ದಾರಿ ತಪ್ಪಿಸಲು ಸಿದ್ದರಾಮಯ್ಯ ಪ್ರಯತ್ನಿಸುತ್ತಿದ್ದಾರೆ ಎಂದು ಭರತ್ ಶೆಟ್ಟಿ ಹೇಳಿದರು. ಸಂಜಯ ಪ್ರಭು, ಪ್ರೇಮಾನಂದ ಶೆಟ್ಟಿ, ಸಂಧ್ಯಾ ವೆಂಕಟೇಶ್, ವಸಂತ ಜೆ. ಪೂಜಾರಿ ಉಪಸ್ಥಿತರಿದ್ದರು.
MLA Dr Bharath Shetty has slammed the state government over misuse of taxpayers money for its inability to provide even a single guarantee for everyone and also for Karnataka becoming a safe haven for terrorists under the Siddaramaiah's regime.
22-09-25 03:31 pm
HK News Desk
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
22-09-25 10:50 am
HK News Desk
ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್...
20-09-25 11:03 pm
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
22-09-25 04:09 pm
Mangalore Correspondent
ದೋಷಯುಕ್ತ ಇಲೆಕ್ಟ್ರಿಕ್ ವಾಹನ ; ಓಲಾ ಕಂಪನಿ ವಿರುದ್...
22-09-25 01:51 pm
ಸೆ.22ರಿಂದ ಮಂಗಳೂರು ದಸರಾ ವೈಭವ ; ಸಾಂಸ್ಕೃತಿಕ ಕಲಾವ...
20-09-25 10:39 pm
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm