ಬ್ರೇಕಿಂಗ್ ನ್ಯೂಸ್
24-03-24 12:14 pm Mangaluru Correspondent ಕರಾವಳಿ
Photo credits : Representational Image
ಪುತ್ತೂರು, ಮಾ.24: ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮದ ಕಾಡಿನಂಚಿನ ಮನೆಗೆ ಶನಿವಾರ ಸಂಜೆ ಮೂವರು ನಕ್ಸಲರು ಆಗಮಿಸಿದ್ದು ಅಕ್ಕಿ ಕೇಳಿ ಪಡೆದು ಒಂದು ತಾಸು ಕಾಲ ಮಾತುಕತೆ ನಡೆಸಿದ್ದಾರೆ.
ನಿನ್ನೆ ಸಂಜೆ ಮಳೆಯಾಗುತ್ತಿದ್ದ ಸಂದರ್ಭ ನಕ್ಸಲರು ಅಶೋಕ್ ಎಂಬವರ ಮನೆಗೆ ಭೇಟಿ ನೀಡಿದ್ದಾರೆ. ಮನೆಯವರ ಜೊತೆ ಸುಮಾರು ಒಂದು ತಾಸಿಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದು ತಮ್ಮ ಮೊಬೈಲ್ ಚಾರ್ಜ್ ಮಾಡಿ ಅಲ್ಲಿಂದ ತೆರಳಿದ್ದಾರೆ. ಬಂದಿದ್ದ ಮೂವರ ಬಳಿಯೂ ಶಸ್ತ್ರಾಸ್ತ್ರಗಳಿದ್ದ ಬಗ್ಗೆ ಮಾಹಿತಿಯಿದ್ದು ಬಟ್ಟೆಯಿಂದ ಸುತ್ತಿಕೊಂಡಿದ್ದರು. ಮನೆಯವರ ಬಳಿ ಎರಡು ಕೇಜಿಯಷ್ಟು ಅಕ್ಕಿ, ದಿನಸಿ ಸಾಮಗ್ರಿ ಪಡೆದು ಅರಣ್ಯದತ್ತ ತೆರಳಿದ್ದಾರೆ. ಮೂವರ ತಂಡ ಮನೆಯೊಳಗೆ ಬಂದಿದೆ ಎನ್ನಲಾಗಿದ್ದರೂ ತಂಡದಲ್ಲಿ ನಾಲ್ವರು ಅಥವಾ ಐವರು ಇದ್ದಿರುವ ಶಂಕೆಯಿದೆ. ಈ ಬಗ್ಗೆ ಮಾಹಿತಿ ಪಡೆದ ಸುಬ್ರಹ್ಮಣ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ.
ವಾರದ ಹಿಂದೆ ದಕ್ಷಿಣ ಕನ್ನಡ- ಕೊಡಗು ಗಡಿಭಾಗದ ಕೂಜಿಮಲೆಯ ಎಸ್ಟೇಟ್ ಬಳಿಗೆ ಬಂದಿದ್ದ ನಾಲ್ವರು ನಕ್ಸಲರು ಅಲ್ಲಿನ ಅಂಗಡಿಯಿಂದ 25 ಕೇಜಿ ಅಕ್ಕಿ ಸೇರಿ 3500 ರೂ. ಮೌಲ್ಯದ ದಿನಸಿ ಸಾಮಗ್ರಿ ಖರೀದಿಸಿ ತೆರಳಿದ್ದರು. ಕೂಜಿಮಲೆ ಮತ್ತು ಐನೆಕಿದು ನಡುವೆ ಸುಮಾರು 25 ಕಿ.ಮೀ. ಅಂತರವಿದ್ದು ಈ ಪ್ರದೇಶದಲ್ಲಿ ನಕ್ಸಲ್ ನಿಗ್ರಹ ದಳ ನಿರಂತರ ಕೂಂಬಿಗ್ ನಡುವೆಯೂ ನಕ್ಸಲರು ಮತ್ತೆ ಪ್ರತ್ಯಕ್ಷಗೊಂಡಿದ್ದಾರೆ.
ನಕ್ಸಲರು ಭೇಟಿ ನೀಡಿದ ಪ್ರದೇಶ ಕುಮಾರಪರ್ವತ ಸಾಲಿನ ಪಾಟಿಕುಮೇರಿ ದಟ್ಟ ಕಾಡಿಗೆ ಹತ್ತಿರವಿದೆ. ಇಲ್ಲಿಂದ ಕೊಡಗಿನ ಸೋಮವಾರಪೇಟೆ ಮತ್ತು ಇನ್ನೊಂದು ದಾರಿಯಾಗಿ ಗಾಳಿಬೀಡು ಸಂಪರ್ಕಿಸಲು ದಾರಿಯಿದೆ. ಅಲ್ಲಿಂದ ಸಂಪಾಜೆ ಗಡಿ ಮೂಲಕ ಕೇರಳದ ಅರಣ್ಯದೊಳಗೆ ಸೇರಲು ಸಾಧ್ಯವಿದೆ ಎಂದು ಸ್ಥಳೀಯರು ಹೇಳುತ್ತಾರೆ. ಹೀಗಾಗಿ ನಕ್ಸಲರ ತಂಡ ಮತ್ತೆ ಕೇರಳದ ಕಡೆ ಸಾಗುತ್ತಿರುವ ಸಾಧ್ಯತೆಯಿದೆ.
Mangalore a team of three Naxals visit Inakidu village in kukke subramanya seek for rice. Following reports that Naxals were spotted in Koojumale Kadamakallu areas, the Anti-Naxal Force has arrived and has begun combing operations in three places.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm