ಬ್ರೇಕಿಂಗ್ ನ್ಯೂಸ್
24-03-24 12:14 pm Mangaluru Correspondent ಕರಾವಳಿ
Photo credits : Representational Image
ಪುತ್ತೂರು, ಮಾ.24: ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮದ ಕಾಡಿನಂಚಿನ ಮನೆಗೆ ಶನಿವಾರ ಸಂಜೆ ಮೂವರು ನಕ್ಸಲರು ಆಗಮಿಸಿದ್ದು ಅಕ್ಕಿ ಕೇಳಿ ಪಡೆದು ಒಂದು ತಾಸು ಕಾಲ ಮಾತುಕತೆ ನಡೆಸಿದ್ದಾರೆ.
ನಿನ್ನೆ ಸಂಜೆ ಮಳೆಯಾಗುತ್ತಿದ್ದ ಸಂದರ್ಭ ನಕ್ಸಲರು ಅಶೋಕ್ ಎಂಬವರ ಮನೆಗೆ ಭೇಟಿ ನೀಡಿದ್ದಾರೆ. ಮನೆಯವರ ಜೊತೆ ಸುಮಾರು ಒಂದು ತಾಸಿಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದು ತಮ್ಮ ಮೊಬೈಲ್ ಚಾರ್ಜ್ ಮಾಡಿ ಅಲ್ಲಿಂದ ತೆರಳಿದ್ದಾರೆ. ಬಂದಿದ್ದ ಮೂವರ ಬಳಿಯೂ ಶಸ್ತ್ರಾಸ್ತ್ರಗಳಿದ್ದ ಬಗ್ಗೆ ಮಾಹಿತಿಯಿದ್ದು ಬಟ್ಟೆಯಿಂದ ಸುತ್ತಿಕೊಂಡಿದ್ದರು. ಮನೆಯವರ ಬಳಿ ಎರಡು ಕೇಜಿಯಷ್ಟು ಅಕ್ಕಿ, ದಿನಸಿ ಸಾಮಗ್ರಿ ಪಡೆದು ಅರಣ್ಯದತ್ತ ತೆರಳಿದ್ದಾರೆ. ಮೂವರ ತಂಡ ಮನೆಯೊಳಗೆ ಬಂದಿದೆ ಎನ್ನಲಾಗಿದ್ದರೂ ತಂಡದಲ್ಲಿ ನಾಲ್ವರು ಅಥವಾ ಐವರು ಇದ್ದಿರುವ ಶಂಕೆಯಿದೆ. ಈ ಬಗ್ಗೆ ಮಾಹಿತಿ ಪಡೆದ ಸುಬ್ರಹ್ಮಣ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ.
ವಾರದ ಹಿಂದೆ ದಕ್ಷಿಣ ಕನ್ನಡ- ಕೊಡಗು ಗಡಿಭಾಗದ ಕೂಜಿಮಲೆಯ ಎಸ್ಟೇಟ್ ಬಳಿಗೆ ಬಂದಿದ್ದ ನಾಲ್ವರು ನಕ್ಸಲರು ಅಲ್ಲಿನ ಅಂಗಡಿಯಿಂದ 25 ಕೇಜಿ ಅಕ್ಕಿ ಸೇರಿ 3500 ರೂ. ಮೌಲ್ಯದ ದಿನಸಿ ಸಾಮಗ್ರಿ ಖರೀದಿಸಿ ತೆರಳಿದ್ದರು. ಕೂಜಿಮಲೆ ಮತ್ತು ಐನೆಕಿದು ನಡುವೆ ಸುಮಾರು 25 ಕಿ.ಮೀ. ಅಂತರವಿದ್ದು ಈ ಪ್ರದೇಶದಲ್ಲಿ ನಕ್ಸಲ್ ನಿಗ್ರಹ ದಳ ನಿರಂತರ ಕೂಂಬಿಗ್ ನಡುವೆಯೂ ನಕ್ಸಲರು ಮತ್ತೆ ಪ್ರತ್ಯಕ್ಷಗೊಂಡಿದ್ದಾರೆ.
ನಕ್ಸಲರು ಭೇಟಿ ನೀಡಿದ ಪ್ರದೇಶ ಕುಮಾರಪರ್ವತ ಸಾಲಿನ ಪಾಟಿಕುಮೇರಿ ದಟ್ಟ ಕಾಡಿಗೆ ಹತ್ತಿರವಿದೆ. ಇಲ್ಲಿಂದ ಕೊಡಗಿನ ಸೋಮವಾರಪೇಟೆ ಮತ್ತು ಇನ್ನೊಂದು ದಾರಿಯಾಗಿ ಗಾಳಿಬೀಡು ಸಂಪರ್ಕಿಸಲು ದಾರಿಯಿದೆ. ಅಲ್ಲಿಂದ ಸಂಪಾಜೆ ಗಡಿ ಮೂಲಕ ಕೇರಳದ ಅರಣ್ಯದೊಳಗೆ ಸೇರಲು ಸಾಧ್ಯವಿದೆ ಎಂದು ಸ್ಥಳೀಯರು ಹೇಳುತ್ತಾರೆ. ಹೀಗಾಗಿ ನಕ್ಸಲರ ತಂಡ ಮತ್ತೆ ಕೇರಳದ ಕಡೆ ಸಾಗುತ್ತಿರುವ ಸಾಧ್ಯತೆಯಿದೆ.
Mangalore a team of three Naxals visit Inakidu village in kukke subramanya seek for rice. Following reports that Naxals were spotted in Koojumale Kadamakallu areas, the Anti-Naxal Force has arrived and has begun combing operations in three places.
23-09-24 07:46 pm
HK News Desk
Bangalore, North Indians, Video; ನಾವಿದ್ದರೆ ಬೆ...
23-09-24 04:42 pm
Tirupati laddu: ತಿರುಪತಿ ಲಡ್ಡಿನಲ್ಲಿ ಕೊಬ್ಬಿನಂಶ...
22-09-24 07:10 pm
Chikkaballapur, Accident: ಓವರ್ಟೇಕ್ ಮಾಡಲು ಹೋಗ...
22-09-24 06:52 pm
ಪ್ಯಾಲೆಸ್ತೀನ್ ಧ್ವಜದ ಬಗ್ಗೆ ಸಚಿವ ಜಮೀರ್ ಸಮರ್ಥನೆ ಬ...
21-09-24 11:17 pm
23-09-24 07:01 pm
HK News Desk
Arjun missing truck, Shiruru: ಶಿರೂರು ಗುಡ್ಡ ಕು...
21-09-24 08:05 pm
ರಾಜಕೀಯ ಬಿರುಗಾಳಿ ಎಬ್ಬಿಸಿದ ತಿರುಪತಿ ಲಡ್ಡು ವಿವಾದ ...
21-09-24 06:36 pm
ಲೆಬನಾನಲ್ಲಿ ಪೇಜರ್ ಸ್ಫೋಟ ; ವಯನಾಡಿನಲ್ಲಿ ಸುದ್ದಿ ಸ...
21-09-24 05:49 pm
Uttar Pradesh: ಗಂಡು ಮಗುವಿಗಾಗಿ ಪತ್ನಿ ಜೊತೆ ಜಗಳ...
20-09-24 07:39 pm
22-09-24 04:55 pm
Mangalore Correspondent
Shri Ram sene, Gangadhar Kulkarni, Mangalore:...
22-09-24 01:16 pm
Dasara 2024 School holiday; ಈ ಬಾರಿ ಅ.3ರಿಂದ 20...
21-09-24 01:15 pm
Nitte Tulu Study Centre, Mangalore: ನಿಟ್ಟೆ ತು...
20-09-24 11:08 pm
Mangalore Savad Sullia, NSUI: ಎನ್ಎಸ್ ಯುಐ ರಾಷ್...
20-09-24 10:57 pm
23-09-24 11:42 am
HK News Desk
ಉಪ್ಪಳದ ಎರಡಂತಸ್ತಿನ ಮನೆಯಲ್ಲಿ ಮೂರು ಕೋಟಿ ಮೌಲ್ಯದ ಡ...
22-09-24 10:48 pm
ಪಾರ್ಟ್ ಟೈಮ್ ಉದ್ಯೋಗದ ಹೆಸರಲ್ಲಿ ಹೂಡಿಕೆ ; ಹಣ ಡಬಲ್...
22-09-24 10:40 pm
Mangalore cyber fraud, stock market: ಯೂಟ್ಯೂಬ್...
22-09-24 08:25 pm
Karwar Murder, Crime: ಕಾರವಾರದಲ್ಲಿ ಬೆಳ್ಳಂಬೆಳಗ್...
22-09-24 02:37 pm