ಬ್ರೇಕಿಂಗ್ ನ್ಯೂಸ್
24-03-24 11:12 pm Mangalore Correspondent ಕರಾವಳಿ
ಮಂಗಳೂರು, ಮಾ.25: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆಯುಕ್ತ ಮನ್ಸೂರ್ ಆಲಿ ಅವರು 25 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿರುವುದು ರಾಜ್ಯದ ಕಾಂಗ್ರೆಸ್ ಸರಕಾರ ನಡೆಸುತ್ತಿರುವ ಭ್ರಷ್ಟಾಚಾರಕ್ಕೆ ಜ್ವಲಂತ ಸಾಕ್ಷಿ ಎಂದು ಮುಡಾ ಮಾಜಿ ಅಧ್ಯಕ್ಷ ರವಿಶಂಕರ ಮಿಜಾರು ಹೇಳಿದ್ದಾರೆ.
ಜಿಲ್ಲಾ ಬಿಜೆಪಿಯ ಲೋಕಸಭಾ ಚುನಾವಣಾ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಂಚಗುಳಿತನ, ಭ್ರಷ್ಟಾಚಾರದ ಮತ್ತೊಂದು ಹೆಸರೇ ಕಾಂಗ್ರೆಸ್ ಎಂದು ಟೀಕಿಸಿದರು. ಮನ್ಸೂರ್ ಆಲಿ ಅವರು ಮುಡಾ ಆಯುಕ್ತರಾಗಿ ಬಂದಾಗಲೇ ಅವರ ಬಗ್ಗೆ ಸಾಕಷ್ಟು ಆರೋಪಗಳು ಕೇಳಿಬಂದಿದ್ದವು. ಕಾಂಗ್ರೆಸ್ ಸರಕಾರ ಹಣ ಪಡೆದು ಅಧಿಕಾರಿಗಳನ್ನು ಆಯಕಟ್ಟಿನ ಜಾಗಕ್ಕೆ ನೇಮಿಸಿರುವ ಬಗ್ಗೆ ಆಗಲೇ ಅಪಸ್ವರಗಳು ಬಂದಿದ್ದವು. ಜನತೆಗೆ ಸುಲಲಿತವಾಗಿ ಸರರಕಾರಿ ಸೇವೆಗಳನ್ನು ಒದಗಿಸುವ ಬದಲು ಅಲ್ಲಲ್ಲಿ ಅಡೆತಡೆಗಳನ್ನು ಒಡ್ಡಿ ಮಧ್ಯವರ್ತಿಗಳಿಗೆ ಅವಕಾಶ ಕಲ್ಪಿಸಿ, ಆ ಮೂಲಕ ಭ್ರಷ್ಟಾಚಾರಕ್ಕೆ ಅನುವು ಮಾಡಿಕೊಡುವುದು ಕಾಂಗ್ರೆಸ್ ಆಡಳಿತದ ಕಾರ್ಯಶೈಲಿ ಎಂದು ರವಿಶಂಕರ ಮಿಜಾರು ಆಪಾದಿಸಿದರು.
ತಾವು ಮುಡಾ ಅಧ್ಯಕ್ಷರಾಗಿದ್ದಾಗ ಸಾರ್ವಜನಿಕರು ಅಧಿಕಾರಿಗಳಿಂದ ಸುಲಭವಾಗಿ ಕೆಲಸಗಳನ್ನು ಮಾಡಿಸಿಕೊಳ್ಳಲು ಅನುಕೂಲವಾಗುವಂತೆ ಹೆಲ್ಪ್ ಡೆಸ್ಕ್ ಆರಂಭಿಸಲಾಗಿತ್ತು. ಪ್ರತಿ ಸಭೆಯಲ್ಲೂ ಅಧಿಕಾರಿಗಳನ್ನು ಹದ್ದುಬಸ್ತಿನಲ್ಲಿಡುವ ಕಾರ್ಯ ಮಾಡಲಾಗುತ್ತಿತ್ತು. ಆದರೆ ಕಾಂಗ್ರೆಸ್ ಸರಕಾರ ಬಂದಾಗಿನಿಂದ ಹೆಲ್ಪ್ಡೆಸ್ಕ್ ಕಾರ್ಯ ನಿರ್ವಹಿಸುತ್ತಿಲ್ಲ, ಬದಲಾಗಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ ಎಂದು ಅವರು ಹೇಳಿದರು.
ಉದ್ಯಮಿಯೊಬ್ಬರು ತಮ್ಮ ಜಾಗವನ್ನು ಸರಕಾರಕ್ಕೆ ಬಿಟ್ಟುಕೊಟ್ಟಿದ್ದು, ಅದಕ್ಕೆ ಪ್ರತಿಯಾಗಿ ಸರಕಾರ ಕೊಡುವ ಟಿಡಿಆರ್ ಗೆ ಅನುಮೋದನೆ ಪಡೆದುಕೊಳ್ಳುವ ಪ್ರಯತ್ನದಲ್ಲಿದ್ದರು. ಇದಕ್ಕಾಗಿ ಆಯುಕ್ತ ಮನ್ಸೂರ್ ಆಲಿ 25 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಇದರ ವಿರುದ್ಧ ಉದ್ಯಮಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು ಎಂದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮಂಗಳೂರು ದಕ್ಷಿಣ ಮಂಡಲದ ಅಧ್ಯಕ್ಷ ರಮೇಶ್ ಕಂಡೆಟ್ಟು, ದಕ್ಷಿಣ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗಡೆ, ಲಲ್ಲೇಶ್, ಮಾಜಿ ಕಾರ್ಪೊರೇಟರ್ ರಾಧಾಕೃಷ್ಣ, ಜಿಲ್ಲಾ ಮಾಧ್ಯಮ ಪ್ರಮುಖ ಕದ್ರಿ ಮನೋಹರ ಶೆಟ್ಟಿ ಉಪಸ್ಥಿತರಿದ್ದರು.
Mangaluru Urban Development Authority (MUDA) Commissioner Mansoor Ali has donated Rs 25 lakh. Former MUDA Chairman Ravishankar Mijaru said that being caught red-handed by the Lokayukta police while accepting bribe is a glaring testimony to the corruption being carried out by the Congress government in the state.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm