ಬ್ರೇಕಿಂಗ್ ನ್ಯೂಸ್
25-03-24 10:21 am Mangalore Correspondent ಕರಾವಳಿ
ಉಳ್ಳಾಲ, ಮಾ.25: ಅಸೈಗೋಳಿಯ ತಿಬ್ಲೆ ಪದವಿನ ರಾಜ್ಯ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಡಿವೈಡರ್ ನೆಗೆದ ಬೈಕಿನಿಂದ ಎಸೆಯಲ್ಪಟ್ಟ ಸಹ ಸವಾರೆ ಗೃಹಿಣಿಯೋರ್ವರು ದಾರುಣ ಮೃತಪಟ್ಟ ಘಟನೆ ಆದಿತ್ಯವಾರ ಸಂಜೆ ನಡೆದಿದೆ. ಅಪಘಾತದ ದೃಶ್ಯ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರೊಂದರ ಡ್ಯಾಷ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಬೋಂದೆಲ್ ನಿವಾಸಿ ದೀಕ್ಷಿತ್ ಎಂಬವರ ಪತ್ನಿ ನಿಧಿ(29) ಮೃತಪಟ್ಟ ಮಹಿಳೆ. ಬೈಕ್ ಸವಾರ ಯತೀಶ್ ದೇವಾಡಿಗ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿಧಿ ಆದಿತ್ಯವಾರ ಮುಡಿಪುವಿನಲ್ಲಿ ನಡೆದಿದ್ದ ಗೃಹ ಪ್ರವೇಶವೊಂದರಲ್ಲಿ ಭಾಗವಹಿಸಿ ಯತೀಶ್ ಜೊತೆ ಬೈಕಿನಲ್ಲಿ ಹಿಂತಿರುಗುತ್ತಿದ್ದ ವೇಳೆ ಸಂಜೆ 7.25 ಸಮಯದಲ್ಲಿ ತಿಬ್ಲೆ ಪದವು ಎಂಬಲ್ಲಿ ಅಪಘಾತ ನಡೆದಿದೆ. ಅತಿ ವೇಗದಿಂದ ಧಾವಿಸುತ್ತಿದ್ದ ಬೈಕ್ ಡಿವೈಡರ್ ನೆಗೆದು ಪಕ್ಕದ ರಸ್ತೆಗೆ ಬಿದ್ದಿದೆ. ಅಪಘಾತದ ತೀವ್ರತೆಗೆ ಬೈಕ್ ಚಾಲಕ ಯತೀಶ್ ಮತ್ತು ಸಹ ಸವಾರೆ ನಿಧಿ ರಸ್ತೆಗೆಸೆಯಲ್ಪಟ್ಟಿದ್ದಾರೆ.


ಅಪಘಾತ ಸಂದರ್ಭದಲ್ಲಿ ಇನ್ನೊಂದು ಬದಿಯ ರಸ್ತೆಗೆ ಮಹಿಳೆ ಮತ್ತು ಯುವಕ ಬಿದ್ದಿದ್ದು ಒಬ್ಬರ ಮೇಲಿನಿಂದಲೇ ಕಾರು ಚಲಿಸಿರುವ ಸಾಧ್ಯತೆಯಿದೆ. ಬೈಕ್ ಮತ್ತು ಸವಾರರು ರಸ್ತೆಗೆ ಎಸೆಯಲ್ಪಟ್ಟಿದ್ದರೂ ಕಾರು ಚಾಲಕ ನೇರವಾಗಿ ಚಲಿಸಿದ್ದು ಹಿಂಬದಿಯ ಕಾರಿನ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ತೀವ್ರ ಗಾಯಗೊಂಡಿದ್ದ ಮಹಿಳೆಯನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಯುವಕನೂ ಗಂಭೀರ ಸ್ಥಿತಿಯಲ್ಲಿದ್ದಾನೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Following a bike ramming on a divider in #Mangalore, the women with the pillion rider died instantly. Nidhi(29) has been identified as the dead. They were on their way back home after a house inauguration ceremony. #liveaccident #mangaloreaccident pic.twitter.com/d0gui6dfH5
— Headline Karnataka (@hknewsonline) March 25, 2024
Mangalore Asaigoli accident, pillion rider wife dies on spot after bike rams on divider. The deceased has been identified as Nidhi(29). They were returning home after a house opening ceremony in Mangalore.
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
09-01-26 11:00 pm
HK News Desk
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm