ಬ್ರೇಕಿಂಗ್ ನ್ಯೂಸ್
25-03-24 07:06 pm HK NEWS ಕರಾವಳಿ
ಉಡುಪಿ, ಮಾ.25: ಬಾರ್ ನಲ್ಲಿ ಕುಳಿತು ಕುಡಿಯುತ್ತಿದ್ದಾಗ ಕಾಲು ತಾಗಿದೆ ಎಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬನನ್ನು ಅಟ್ಟಾಡಿಸಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮಣಿಪಾಲ ಸರಳೇಬೆಟ್ಟು ಪ್ರದೇಶದಲ್ಲಿ ನಡೆದಿದೆ.
ಮಣಿಪಾಲ ಎಂಐಟಿ ಕಾಲೇಜಿನ ವಿದ್ಯಾರ್ಥಿ, ಮುಂಬೈ ಮೂಲದ ಆರುಷ್ ಕುಮಾರ್ (21)ಹಲ್ಲೆಗೊಳಗಾದ ಯುವಕ. ಪುಂಡರ ತಂಡವು ಯುವಕನ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸುಮಾರು ಆರು ಮಂದಿ ಸ್ಥಳೀಯ ಯುವಕರು ಹಲ್ಲೆ ನಡೆಸಿದ್ದಾರೆ.

ಮದ್ಯ ಸೇವಿಸುತ್ತಿದ್ದಾಗ ಪುಂಡರ ತಂಡದ ಓರ್ವನಿಗೆ ಕಾಲು ತಾಗಿದ ಹಿನ್ನೆಲೆ ತಗಾದೆ ತೆಗೆದು ಹಲ್ಲೆ ನಡೆಸಿದ್ದಾರೆ. ಬಾರ್ ನಲ್ಲಿ ಹಲ್ಲೆ ನಡೆಸಿದ್ದು ಮಾತ್ರವಲ್ಲದೆ, ಆತನನ್ನು ವಾಸವಿದ್ದ ಅಪಾರ್ಟ್ ಮೆಂಟ್ ವರೆಗೂ ಅಟ್ಟಾಡಿಸಿ ಹಲ್ಲೆ ನಡೆಸಿದ್ದಾರೆ. ಅರುಷ್ ತನ್ನ ಅಪಾರ್ಟ್ ಮೆಂಟ್ ನಲ್ಲಿ ಒಬ್ಬನೇ ತಂಗಿದ್ದ. ಕೊಠಡಿಯ ವರೆಗೂ ಅಟ್ಟಾಡಿಸಿ ರೂಂ ಒಳಗೆ ಹೋಗಲು ಬಿಡದೆ ಎಳೆದು ಹಲ್ಲೆ ನಡೆಸಿದ್ದಾರೆ. ವಿಷಯ ತಿಳಿದು ರಕ್ಷಿಸಲು ಬಂದ ಆರುಷ್ ಸ್ನೇಹಿತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಆಬಳಿಕ ಯುವಕನ ಮೊಬೈಲ್ ಗೆ ಕರೆ ಮಾಡಿ ಮತ್ತೊಮ್ಮೆ ಹಲ್ಲೆ ನಡೆಸುವುದಾಗಿ ಬೆದರಿಕೆ ಒಡ್ಡಿದ್ದಾರೆ. ಹಲ್ಲೆ ವೀಡಿಯೋ ಆಧರಿಸಿ ಅರುಷ್ ನನ್ನ ಕರೆಸಿ ಮಣಿಪಾಲ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ಸಿಸಿಟಿವಿ ಹಾಗೂ ಯುವಕರ ಮೊಬೈಲ್ ಸಂಖ್ಯೆ ಮೇಲೆ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.
#Udupi #Manipal student thrashed for touching his leg in bar, #video goes viral #BREAKING_NEWS pic.twitter.com/4mce0NkEUz
— Headline Karnataka (@hknewsonline) March 25, 2024
Udupi Manipal student thrashed for touching strangers leg in bar, video goes viral
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am