ಬ್ರೇಕಿಂಗ್ ನ್ಯೂಸ್
26-03-24 12:06 pm Mangalore Correspondent ಕರಾವಳಿ
ಪುತ್ತೂರು, ಮಾ.26: ಕುಕ್ಕೆ ಸುಬ್ರಹ್ಮಣ್ಯ ಬಳಿಯ ಐನೆಕಿದು ಗ್ರಾಮದ ಮನೆಯೊಂದಕ್ಕೆ ಶಂಕಿತ ನಕ್ಸಲರು ಭೇಟಿ ನೀಡಿದ್ದ ಅನುಮಾನದಲ್ಲಿ ಸುಬ್ರಹ್ಮಣ್ಯ ಠಾಣೆ ಪೊಲೀಸರು ನಾಲ್ವರ ವಿರುದ್ಧ ಎಫ್ಐ ಆರ್ ದಾಖಲಿಸಿದ್ದಾರೆ.
ಈ ಬಗ್ಗೆ ನಕ್ಸಲ್ ನಿಗ್ರಹ ದಳ, ಕಾರ್ಕಳ ವಿಭಾಗೀಯ ಎಸ್ ಪಿ ಜಿತೇಂದ್ರ ಮಾಹಿತಿ ನೀಡಿದ್ದಾರೆ, ರೈತ ಅಶೋಕ್ ಎಂಬವರ ಮನೆಗೆ ಬಂದಿದ್ದ ಶಂಕಿತ ನಕ್ಸಲರು ಅವರ ಮನೆಯಿಂದ ಅಕ್ಕಿ, ಮೆಣಸಿನಕಾಯಿ ಹಾಗೂ ಇನ್ನಿತರ ದಿನಸಿ ಪದಾರ್ಥಗಳನ್ನು ಕೊಂಡೊಯ್ದಿದ್ದಾರೆ ಎಂದು ಹೇಳಿದ್ದಾರೆ.
ಶನಿವಾರ ಸಂಜೆ 6.30 ಕ್ಕೆ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರು ನಮ್ಮ ಮನೆಗೆ ಬಂದಿದ್ದರು. ಓರ್ವ ಮಹಿಳೆ 30-35 ವರ್ಷದ ವಯಸ್ಸಿನವರಾಗಿದ್ದು, ಮತ್ತೋರ್ವ ಮಹಿಳೆಗೆ 40-45 ವರ್ಷ ವಯಸ್ಸಾಗಿತ್ತು. ಅವರು ತಮ್ಮ ಬಳಿ ಬಂದೂಕು ಹೊಂದಿದ್ದರು. ಕನ್ನಡ, ತುಳು ಭಾಷೆಗಳಲ್ಲಿ ಮಾತನಾಡುತ್ತಿದ್ದರು. ಅವರು ತಮ್ಮನ್ನು ನಕ್ಸಲರೆಂದು ಪರಿಚಯಿಸಿಕೊಂಡು, ಬಡವರಿಗೆ ನ್ಯಾಯ ಒದಗಿಸುವುದಕ್ಕಾಗಿ ಕೆಲಸ ಮಾಡುತ್ತಿರುವುದಾಗಿ ಹೇಳಿದರು. ಅಷ್ಟೇ ಅಲ್ಲದೇ ಆಹಾರ ಕೇಳಿಕೊಂಡ ಅವರು ಕೆಲವು ದಿನಸಿ ಪದಾರ್ಥಗಳನ್ನು ಕೇಳಿ ಪಡೆದಿದ್ದಾರೆ. ಭಯದಿಂದ ನಾವು ಅವರು ಕೇಳಿದ್ದನ್ನು ಕೊಟ್ಟೆವು. ತಮ್ಮನ್ನು ಬೆಂಬಲಿಸುವಂತೆ ಕೇಳಿದ ಅವರು ಈ ಮಾಹಿತಿಯನ್ನು ಯಾರಿಗಾದರೂ ನೀಡಿದರೆ ಕೊಲ್ಲುವುದಾಗಿ ಬಂದೂಕು ತೋರಿಸಿ ಬೆದರಿಕೆ ಹಾಕಿ ಸಂಜೆ 7:30 ವೇಳೆಗೆ ಹೊರಟುಹೋದರು ಎಂದು ಅಶೋಕ್ ಹೇಳಿದ್ದಾರೆ.
ಶಂಕಿತ ನಕ್ಸಲರ ವಿರುದ್ಧ ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ ಮತ್ತು 1967ರ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
Mangalore Naxals movement at Inakidu village in kukke subramanya, FIR lodged on four. Three unidentified persons, suspected to be cadres of the Communist Party of India-Maoist (CPI-Maoist), reportedly visited a house near Kukke Subrahmanya in Kadaba taluk (revenue unit) in Dakshina Kannada District of Karnataka on March 23.
11-08-25 11:01 pm
Bangalore Correspondent
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
Forced Marriage, Chitradurga: ನನಗಿನ್ನೂ ಹದಿನಾರ...
11-08-25 11:18 am
ಮುಸ್ಲಿಂ ಯುವತಿಯರನ್ನ ಮದುವೆಯಾದ್ರೆ 5 ಲಕ್ಷ ರೂ. ಕೊಡ...
10-08-25 09:12 pm
12-08-25 11:42 am
HK News Desk
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
ಮದುವೆಯಾಗುತ್ತೇನೆಂದು ನಂಬಿಸಿ ಮೋಸ, ಇಸ್ಲಾಮಿಗೆ ಮತಾಂ...
11-08-25 08:55 pm
Rabies Death, Supreme Court: ರಾಜಧಾನಿಯಲ್ಲಿ ರೇಬ...
11-08-25 02:48 pm
ಭಾರತದ ವಿರುದ್ಧ ಟ್ರಂಪ್ ಸುಂಕಾಸ್ತ್ರಕ್ಕೆ ಅಮೆರಿಕದ ತ...
09-08-25 11:09 pm
11-08-25 07:39 pm
Mangalore Correspondent
Padmalatha Murder Case, Dharmasthala, SIT: 19...
11-08-25 03:33 pm
Ground Penetrating Radar, Dharmasthala: ಧರ್ಮಸ...
11-08-25 11:49 am
Kudla Rampage YouTuber, Ajay Anchan Case: ಬೈಕ...
11-08-25 11:38 am
ಹೊಸ್ತಿಲು ಬರೆದು, ಪಾತ್ರೆ ತೊಳೆದು, ದೇವರ ಸ್ತೋತ್ರ ಹ...
10-08-25 04:32 pm
11-08-25 12:37 pm
Mangalore Correspondent
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm