ಸುಬ್ರಹ್ಮಣ್ಯ ಭಾಗದಲ್ಲಿ ನಕ್ಸಲ್ ಚಟುವಟಿಕೆ ; ಡೀಸಿ, ಎಸ್ಪಿಯಿಂದ ಮಾಹಿತಿ ಪಡೆದಿದ್ದೇನೆ, ಅಧಿಕಾರಿಗಳು ಕ್ರಮ ಕೈಗೊಳ್ತಾರೆ ಎಂದ ಡಿಸಿಎಂ ಡಿಕೆಶಿ 

26-03-24 07:23 pm       Mangalore Correspondent   ಕರಾವಳಿ

ಸುಬ್ರಹ್ಮಣ್ಯ ಭಾಗದಲ್ಲಿ ನಕ್ಸಲ್ ಚಟುವಟಿಕೆ ಕಂಡುಬಂದ ಕುರಿತು ಡಿಸಿಎಂ ಡಿಕೆಶಿ ಪ್ರತಿಕ್ರಿಯೆ ನೀಡಿದ್ದು ಈ ಕುರಿತು ಮಾಹಿತಿ ಸಂಗ್ರಹಿಸಿದ್ದೇನೆ. ನಕ್ಸಲ್ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಿಂದ ಮಾಹಿತಿ ಪಡೆದಿದ್ದೇನೆ ಎಂದಿದ್ದಾರೆ. 

ಪುತ್ತೂರು, ಮಾ.26: ಸುಬ್ರಹ್ಮಣ್ಯ ಭಾಗದಲ್ಲಿ ನಕ್ಸಲ್ ಚಟುವಟಿಕೆ ಕಂಡುಬಂದ ಕುರಿತು ಡಿಸಿಎಂ ಡಿಕೆಶಿ ಪ್ರತಿಕ್ರಿಯೆ ನೀಡಿದ್ದು ಈ ಕುರಿತು ಮಾಹಿತಿ ಸಂಗ್ರಹಿಸಿದ್ದೇನೆ. ನಕ್ಸಲ್ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಿಂದ ಮಾಹಿತಿ ಪಡೆದಿದ್ದೇನೆ ಎಂದಿದ್ದಾರೆ. 

ಚುನಾವಣೆ ಹಿನ್ನೆಲೆಯಲ್ಲಿ ಕೋವಿ ಹೊಂದಿದವರಿಗೆ ಸೆರಂಡರ್ ಮಾಡಬೇಕೆಂದು ಆದೇಶ ಇದೆ. ಅದು ಹಿಂದಿನಿಂದಲೂ ಇರುವ ಆದೇಶ. ಹೊಸತೇನಲ್ಲ. ಈ ಭಾಗದಲ್ಲಿ ಯಾರು ಕೋವಿ ಹೊಂದಿರುತ್ತಾರೋ ಅದರ ಬಗ್ಗೆ ತಿಳಿಯಲು ಅಧಿಕಾರಿಗಳು ದಾಳಿ ನಡೆಸಲಿದ್ದಾರೆ. ನಕ್ಸಲರ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ. 

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇವರ ದರ್ಶನಕ್ಕೆ ಬಂದಿದ್ದೇನೆ. ಏನೇ ಶುಭ ಕಾರ್ಯ ಇರಲಿ, ಹೋರಾಟ ಮಾಡಿ ಗೆಲ್ಲುವುದಕ್ಕೂ ಭಗವಂತನ ಕೃಪೆ ಬೇಕು. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿಯೂ ಈ ಭಾಗಕ್ಕೆ ಬಂದು ದೇವರ ಆಶೀರ್ವಾದ ಪಡೆದಿದ್ದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಂಪೂರ್ಣ ಜಯ ಸಿಕ್ಕಿದೆ. ದೇವರ ಬಗ್ಗೆ, ನಮ್ಮ ಧರ್ಮದ ಬಗ್ಗೆ ನಂಬಿಕೆ ಇದೆ.

ಧರ್ಮ ಯಾವುದೇ ಆದರೂ ತತ್ವ ಒಂದೇ ಇರುತ್ತೆ.‌ ಸುಬ್ರಹ್ಮಣ್ಯನಲ್ಲಿ ಪ್ರಾರ್ಥನೆ ಮಾಡಿದ್ದೇನೆ. ನನಗೆ ನಂಬಿಕೆ ಇದೆ, ರಾಜ್ಯದಲ್ಲಿ ಹೆಚ್ಚಿನ ಸೀಟು ನಮಗೆ ಬರುತ್ತೆ ಅಂತ ಎಂದು ಹೇಳಿದರು. ‌ಚುನಾವಣೆ ಪ್ರಚಾರ ಆರಂಭಕ್ಕೂ ಮುನ್ನ ಧರ್ಮಸ್ಥಳ, ಸುಬ್ರಹ್ಮಣ್ಯಕ್ಕೆ ಆಗಮಿಸಿದ ಡಿಕೆ ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸಿದ್ದಾರೆ.

Naxals in Mangalore, DK shivakumar says instructions given to DC and SP to control situation.