ಬ್ರೇಕಿಂಗ್ ನ್ಯೂಸ್
26-03-24 08:45 pm Mangalore Correspondent ಕರಾವಳಿ
ಮಂಗಳೂರು, ಮಾ.26: 2014ರ ನಂತರ ದೇಶದಲ್ಲಿ ಶಾಂತಿ ಸುವ್ಯವಸ್ಥೆ ಹಾಗೂ ಭಯಮುಕ್ತ ವಾತಾವರಣವನ್ನು ನಿರ್ಮಾಣ ಮಾಡಿರುವುದು ಮೋದಿ ಸರ್ಕಾರದ ಆಡಳಿತದ ಹೆಗ್ಗಳಿಕೆಯಾಗಿದೆ. ಇಂತಹ ಆಡಳಿತ ಅವರಿಂದ ಮಾತ್ರ ಸಾಧ್ಯ ಎಂದು ದ.ಕ. ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಹೇಳಿದರು.
ಬಂಟ್ವಾಳ ತಾಲೂಕಿನಲ್ಲಿ ಮತ ಯಾಚನೆಗೆ ಪ್ರವಾಸ ಕೈಗೊಂಡ ಸಂದರ್ಭ ಕಾರ್ಯಕರ್ತರು ಹಾಗೂ ಮತದಾರರನ್ನು ಉದ್ದೇಶಿಸಿ ಮಾತನಾಡಿದರು. ನರೇಂದ್ರ ಮೋದಿ ಸರಕಾರ ಅಧಿಕಾರಕ್ಕೆ ಬರುವ ಮೊದಲು ದೇಶದ್ರೋಹಿಗಳ ಅಟ್ಟಹಾಸ ಎಲ್ಲೆ ಮೀರಿತ್ತು. ದೇಶದಲ್ಲಿ ಭಯದ ವಾತಾವರಣ ನೆಲೆಸಿತ್ತು. 2014ರ ನಂತರ ಮೊದಲ ಬಾರಿಗೆ ಬದಲಾವಣೆಯ ಅಲೆ ಸೈನ್ಯ ವ್ಯವಸ್ಥೆಯಲ್ಲಿ ಕಾಣಿಸಿಕೊಂಡಿತ್ತು. ಆಧುನಿಕ ಆಯುಧಗಳು, ಸೈನಿಕರಿಗೆ ದೊರೆತ ಸುರಕ್ಷಾ ಸಾಮಗ್ರಿಗಳು, ಉನ್ನತ ಗುಣಮಟ್ಟದ ಯುದ್ಧ ಸಾಮಗ್ರಿಗಳಿಂದ ನಮ್ಮ ದೇಶದ ಸೈನ್ಯ ವ್ಯವಸ್ಥೆಯು ಈಗ ಅತ್ಯಂತ ಸುರಕ್ಷಿತ ಹಾಗೂ ಸಮರ್ಥವಾಗಿದೆ ಎಂದರು.
ಉಗ್ರರ ದಾಳಿ, ಬಾಂಬ್ ಬ್ಲಾಸ್ಟ್ ನಂತಹ ದೇಶ ವಿರೋಧಿ ಕೃತ್ಯಗಳು ದೇಶದಲ್ಲಿ ಸಂಪೂರ್ಣವಾಗಿ ನಿಂತಿವೆ. ಇದಕ್ಕೆಲ್ಲ ಕಾರಣ, ಗಟ್ಟಿಯಾದ ಆಡಳಿತ, ಸುಭದ್ರ ಸರ್ಕಾರವಾಗಿದೆ. ನಮ್ಮ ದೇಶಕ್ಕೆ ಶತ್ರುಗಳಿಲ್ಲ ಅಂತ ಅಲ್ಲ. ದೇಶದ ಹೊರಗೂ, ಒಳಗೂ ಶತ್ರುಗಳಿದ್ದಾರೆ. ಅಂಥವರನ್ನು ಹದ್ದುಬಸ್ತಿನಲ್ಲಿಡಲು ಮೋದಿಯಂತಹ ಸಮರ್ಥ ನಾಯಕತ್ವದ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಬೇಕಿದೆ ಎಂದರು.
ಪ್ರಸ್ತುತ 2024ರ ಲೋಕಸಭೆ ಚುನಾವಣೆಯಲ್ಲಿ ನಾವೆಲ್ಲ ಬಿಜೆಪಿಯನ್ನು ಸಂಪೂರ್ಣವಾಗಿ ಬೆಂಬಲಿಸುವ ಮೂಲಕ, ಸಮರ್ಥ ನಾಯಕತ್ವದ ಮೋದಿ ಸರ್ಕಾರವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರೋಣ. ನಮ್ಮ ದೇಶವನ್ನು ಮತ್ತಷ್ಟು ಸಮೃದ್ಧಗೊಳಿಸೋಣ ಎಂದು ಎಲ್ಲರ ಸಹಕಾರವನ್ನು ಕೋರಿದರು.
ನಾನು ಸೈನ್ಯದಲ್ಲಿ ಕೆಲಸ ಮಾಡಿದವನು. ಅಲ್ಲಿನ ಕಠಿಣ ಪರಿಸ್ಥಿತಿಗಳು ನನಗೆ ಗೊತ್ತು. ಒಂದು ಬಾಂಬ್ ಬ್ಲಾಸ್ಟ್ ಆದ ನಂತರದ ಪರಿಸ್ಥಿತಿಗಳು ನಮಗೆಲ್ಲ ತಿಳಿದಿರುತ್ತವೆ. ಆದರೆ, ಬ್ಲಾಸ್ಟ್ ಆಗದೇ ಇರುವಂತೆ ನೋಡಿಕೊಳ್ಳುವುದಕ್ಕೆ ಬೇಕಾದ ಆಡಳಿತ ವ್ಯವಸ್ಥೆ, ಸುರಕ್ಷಾ ವ್ಯವಸ್ಥೆ ಹಾಗೂ ಇಂಟಲಿಜೆನ್ಸ್ ವ್ಯವಸ್ಥೆಗಳನ್ನು ಸಮರ್ಥವಾಗಿಟ್ಟು ದೇಶ ಮುನ್ನಡೆಸುವುದು ಸಮರ್ಥ ಆಡಳಿತ ನಡೆಸುವವರಿಗೆ ಮಾತ್ರ ಗೊತ್ತು ಎಂದರು.
ಮಂಗಳೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಅವರು ಬಂಟ್ವಾಳ ಮಂಡಲದ ಪ್ರವಾಸವನ್ನು ಸಂಗಬೆಟ್ಟು ಶ್ರೀ ವೀರಭದ್ರ ಮಹಮ್ಮಾಯಿ ದೇವರ ದರ್ಶನ ಪಡೆದು ಪ್ರಾರಂಭಿಸಿದರು. ಬಳಿಕ ಕಾವಳಪಡ್ನೂರು ಮಹಾಶಕ್ತಿಕೇಂದ್ರ, ನಾವೂರು ಮಹಾ ಶಕ್ತಿಕೇಂದ್ರ, ನರಿಕೊಂಬು ಮಹಾಶಕ್ತಿ ಕೇಂದ್ರದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
After 2014, the Modi government has created a peace, order and fear-free atmosphere in the country. Such governance is possible only through them," said Bjp's Dakshina Kannada Lok Sabha candidate K Sudhakaran Brijesh Chowta said.
22-09-25 03:31 pm
HK News Desk
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
22-09-25 10:50 am
HK News Desk
ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್...
20-09-25 11:03 pm
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
22-09-25 04:09 pm
Mangalore Correspondent
ದೋಷಯುಕ್ತ ಇಲೆಕ್ಟ್ರಿಕ್ ವಾಹನ ; ಓಲಾ ಕಂಪನಿ ವಿರುದ್...
22-09-25 01:51 pm
ಸೆ.22ರಿಂದ ಮಂಗಳೂರು ದಸರಾ ವೈಭವ ; ಸಾಂಸ್ಕೃತಿಕ ಕಲಾವ...
20-09-25 10:39 pm
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm