ಬ್ರೇಕಿಂಗ್ ನ್ಯೂಸ್
26-03-24 09:57 pm Mangalore Correspondent ಕರಾವಳಿ
ಮಂಗಳೂರು, ಮಾ.26: ತುಮಕೂರಿನಲ್ಲಿ ಬೆಳ್ತಂಗಡಿಯ ಮೂವರನ್ನು ಕಾರಿನಲ್ಲಿ ಸುಟ್ಟು ಕೊಂದ ಪ್ರಕರಣವನ್ನು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಒತ್ತಾಯಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ನೇತೃತ್ವದ ಕಾಂಗ್ರೆಸ್ ನಿಯೋಗ ಮಂಗಳವಾರ ಜಿಲ್ಲಾ ಪೊಲೀಸ್ ಅಧೀಕ್ಷಕ ರಿಷ್ಯಂತ್ ಸಿಂಗ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
“ದುಷ್ಕರ್ಮಿಗಳ ತಂಡವೊಂದು ಮೋಸದಿಂದ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮೂವರು ಯುವಕರನ್ನು ತುಮಕೂರಿಗೆ ಕರೆಸಿ ಹಣ ದೋಚಿ ಹತ್ಯೆ ಮಾಡಿದೆ. ಪತ್ರಿಕೆ ವರದಿಗಳ ಮೂಲಕ ಹತ್ಯೆಗೀಡಾದವರು 6 ಲಕ್ಷ ರೂ. ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆದರೆ ಕೊಲೆಗಡುಕರು 60 ಲಕ್ಷದಿಂದ 1 ಕೋಟಿ ರೂ. ವರೆಗೆ ದೋಚಿದ್ದಾರೆ ಎಂದು ಮೃತರ ಕುಟುಂಬಸ್ಥರು ತಿಳಿಸಿದ್ದಾರೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಬಯಲಿಗೆಳೆಯಬೇಕು. ಮೋಸದ ಜಾಲದ ಹಿಂದಿರುವ ನೈಜ್ಯ ಆರೋಪಿಗಳನ್ನು ಬಂಧಿಸಬೇಕು. ಆ ಮೂಲಕ ಈ ಮೂರು ಕುಟುಂಬಗಳಿಗೆ ನ್ಯಾಯ ದೊರಕಿಸಿಕೊಡಬೇಕು. ಇನ್ನು ಮುಂದೆ ಜಿಲ್ಲೆಯಲ್ಲಿ ಇಂತಹ ಪ್ರಕರಣ ಮರುಕಳಿಸದಂತೆ ಸೂಕ್ತ ಕ್ರಮಕೈಗೊಳ್ಳಬೇಕು” ಎಂದು ಮನವಿಯಲ್ಲಿ ತಿಳಿಸಲಾಗಿದೆ.
ನಿಯೋಗದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಮಾಜಿ ಸಚಿವ ಅಭಯಚಂದ್ರ ಜೈನ್, ಮ.ನ.ಪಾ ವಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ, ಜಿಲ್ಲಾ ಕಾಂಗ್ರೆಸ್ ಪಂಚಾಯತ್ ರಾಜ್ ಸಂಘಟನೆ ಅಧ್ಯಕ್ಷ ಶುಭಾಷ್ಚಂದ್ರ ಶೆಟ್ಟಿ ಇದ್ದರು.
ಇದಕ್ಕೂ ಮುನ್ನ ಕೊಲೆಯಾದ ಬೆಳ್ತಂಗಡಿಯ ಮೂವರು ಯುವಕರ ಮನೆಗೆ ಭೇಟಿ ನೀಡಿದ ನಿಯೋಗ, ರಾಜ್ಯ ಸರ್ಕಾರದಿಂದ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿತು.
Tumkuru three from Belthangady killed in car burnt case, Congress leaders visit sp demand for strict action.
11-08-25 11:01 pm
Bangalore Correspondent
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
Forced Marriage, Chitradurga: ನನಗಿನ್ನೂ ಹದಿನಾರ...
11-08-25 11:18 am
ಮುಸ್ಲಿಂ ಯುವತಿಯರನ್ನ ಮದುವೆಯಾದ್ರೆ 5 ಲಕ್ಷ ರೂ. ಕೊಡ...
10-08-25 09:12 pm
12-08-25 11:42 am
HK News Desk
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
ಮದುವೆಯಾಗುತ್ತೇನೆಂದು ನಂಬಿಸಿ ಮೋಸ, ಇಸ್ಲಾಮಿಗೆ ಮತಾಂ...
11-08-25 08:55 pm
Rabies Death, Supreme Court: ರಾಜಧಾನಿಯಲ್ಲಿ ರೇಬ...
11-08-25 02:48 pm
ಭಾರತದ ವಿರುದ್ಧ ಟ್ರಂಪ್ ಸುಂಕಾಸ್ತ್ರಕ್ಕೆ ಅಮೆರಿಕದ ತ...
09-08-25 11:09 pm
11-08-25 07:39 pm
Mangalore Correspondent
Padmalatha Murder Case, Dharmasthala, SIT: 19...
11-08-25 03:33 pm
Ground Penetrating Radar, Dharmasthala: ಧರ್ಮಸ...
11-08-25 11:49 am
Kudla Rampage YouTuber, Ajay Anchan Case: ಬೈಕ...
11-08-25 11:38 am
ಹೊಸ್ತಿಲು ಬರೆದು, ಪಾತ್ರೆ ತೊಳೆದು, ದೇವರ ಸ್ತೋತ್ರ ಹ...
10-08-25 04:32 pm
11-08-25 12:37 pm
Mangalore Correspondent
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm