ಬ್ರೇಕಿಂಗ್ ನ್ಯೂಸ್
28-11-20 02:52 pm Udupi Correspondent ಕರಾವಳಿ
ಉಡುಪಿ, ನ.28 : ಆಳಸಮುದ್ರ ಮೀನುಗಾರಿಕೆ ತೆರಳಿದ್ದ ಮಲ್ಪೆಯ ಬೋಟ್ ಮಹಾರಾಷ್ಟ್ರದ ಸಮೀಪದ ಸಮುದ್ರದಲ್ಲಿ ದುರಂತಕ್ಕೀಡಾಗಿದೆ.
ಈ ವೇಳೆ ಬೋಟ್ನಲ್ಲಿದ್ದ ಏಳು ಮೀನುಗಾರರನ್ನು ರಕ್ಷಿಸಲಾಗಿದೆ. ಮಲ್ಪೆ ಹನುಮಾನ್ ನಗರದ ತಾರಾನಾಥ ಕುಂದರ್ ಎಂಬವರಿಗೆ ಸೇರಿದ ‘ಮಥುರಾ’ ಹೆಸರಿನ ಆಳಸಮುದ್ರ ಬೋಟು ನ.17ರಂದು ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. ಹಿಂತಿರುಗಿ ಬರುತ್ತಿದ್ದಾಗ, ಗೋವಾ- ಮಹಾರಾಷ್ಟ್ರ ಮಧ್ಯೆ ಸುಮಾರು 22 ಮೈಲ್ ದೂರದ ಸಮುದ್ರದಲ್ಲಿ ಬೋಟಿನ ತಳಭಾಗಕ್ಕೆ ವಸ್ತುವೊಂದು ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ಬೋಟ್ ಒಡೆದು ಸ್ಟೋರೇಜ್ ಒಳಗೆ ಸಮುದ್ರದ ನೀರು ತುಂಬಿಕೊಂಡಿದೆ. ಅಪಾಯದ ಮುನ್ನೆಚ್ಚರಿಕೆಯಿಂದ ಅದರಲ್ಲಿದ್ದ ಮೀನುಗಾರರು, ಕೂಡಲೇ ಸಮೀಪದಲ್ಲಿದ್ದ ಮಾಹೂರ್ ಬೋಟಿನವರಿಗೆ ಮಾಹಿತಿ ನೀಡಿದರು. ಕೂಡಲೇ ಆಗಮಿಸಿದ ಮಾಹೂರ್ ಬೋಟಿನ ಸಿಬಂದಿ ಮುಳುಗುತ್ತಿದ್ದ ಬೋಟನ್ನು ಗೋವಾ ಬಂದರಿಗೆ ಎಳೆದು ತರುವ ಪ್ರಯತ್ನ ಮಾಡಿದರು.
ಆದರೆ ಬೋಟಿನೊಳಗೆ ಸಂಪೂರ್ಣ ನೀರು ನುಗಿದ್ದರಿಂದ ತಡರಾತ್ರಿ ವೇಳೆ ಬೋಟು ಸಮುದ್ರ ಮಧ್ಯೆ ಮುಳುಗಡೆಯಾಯಿತು ಎಂದು ತಿಳಿದು ಬಂದಿದೆ. ಬೋಟಿನಲ್ಲಿದ್ದ ಏಳು ಮೀನುಗಾರರನ್ನು ಮಹೂರ್ ಬೋಟು ಮೂಲಕ ರಕ್ಷಿಸಲಾಗಿದೆ.
ಮುಳುಗಡೆಯಾದ ಬೋಟಿನಲ್ಲಿದ್ದ ಬಲೆ, ಡಿಸೇಲ್, ಮೀನು ಸೇರಿದಂತೆ ಸುಮಾರು 65 ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.
A deep-sea boat from Malpe which was conducting fishing operations near the Goa-Maharashtra border drowned on Thursday, November 27. All the seven fishermen aboard have been rescued, while the boat, fish stock, nets etc totally valued at Rs 65 lac, drowned.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm