ಬ್ರೇಕಿಂಗ್ ನ್ಯೂಸ್
28-03-24 03:25 pm Mangalore Correspondent ಕರಾವಳಿ
ಪುತ್ತೂರು, ಮಾ.28: ಕೊಡಗಿನ ಗಡಿಭಾಗ ಸುಳ್ಯ ತಾಲೂಕಿನ ಕಲ್ಮಕಾರು ಸಮೀಪದ ಕೂಜಿಮಲೆ ಎಸ್ಟೇಟ್ ನಲ್ಲಿ ಮತ್ತೆ ಶಂಕಿತ ನಕ್ಸಲರ ಚಲನವಲನ ಕಂಡುಬಂದಿದೆ. ಅಪರಿಚಿತ ಮಹಿಳೆಯೊಬ್ಬರು ರಬ್ಬರ್ ಎಸ್ಟೇಟ್ ನಲ್ಲಿ ಕಾಣಿಸಿಕೊಂಡಿದ್ದು ನಕ್ಸಲ್ ನಿಗ್ರಹ ದಳಕ್ಕೆ ಮಾಹಿತಿ ನೀಡಲಾಗಿದೆ.
ಕೂಜಿಮಲೆ ಎಸ್ಟೆಟ್ ಕೊಡಗು ಜಿಲ್ಲೆಯ ವ್ಯಾಪ್ತಿಗೆ ಸೇರಿದ್ದು ಬುಧವಾರ ಅಪರಾಹ್ನ ಅಪರಿಚಿತ ಮಹಿಳೆ ಎಸ್ಟೇಟಿನ ರಬ್ಬರ್ ತೋಟದಲ್ಲಿ ಸಂಚರಿಸುತ್ತಿರುವುದನ್ನು ಸಿಬಂದಿ ನೋಡಿದ್ದಾರೆ. ಬಳಿಕ ನಕ್ಸಲ್ ನಿಗ್ರಹ ಪಡೆಗೆ ಸ್ಥಳೀಯರು ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದು ಶೋಧ ನಡೆಸಿದ್ದಾರೆ. ಶಂಕಿತ ಮಹಿಳೆ ರಬ್ಬರ್ ತೋಟದಿಂದ ಅರಣ್ಯ ಭಾಗದತ್ತ ತೆರಳಿದ್ದಾಳೆ ಎನ್ನಲಾಗಿದೆ.
ನಕ್ಸಲ್ ನಿಗ್ರಹ ಪಡೆಯ ಸಿಬಂದಿ ಕಳೆದ ಒಂದು ವಾರದಿಂದ ಐನೆಕಿದು, ಕೂಜಿಮಲೆ ಆಸುಪಾಸಿನಲ್ಲೇ ಶೋಧ ಕಾರ್ಯ ನಡೆಸುತ್ತಿದ್ದಾರೆ. ಶಂಕಿತ ಮಹಿಳೆ ಕಾಣಿಸಿಕೊಂಡ ಮಾಹಿತಿ ಲಭ್ಯವಾದ ಕೂಡಲೇ ಎಎನ್ಎಫ್ ತಂಡ ಎಸ್ಟೇಟ್ ಪ್ರದೇಶಕ್ಕೆ ತೆರಳಿ ಶೋಧ ಕಾರ್ಯ ಆರಂಭಿಸಿದೆ. ಮಾರ್ಚ್ 16ರಂದು ನಾಲ್ವರು ಶಂಕಿತ ನಕ್ಸಲರು ಕೂಜಿಮಲೆ ಎಸ್ಟೇಟ್ ಬಳಿಯ ಅಂಗಡಿಯೊಂದಕ್ಕೆ ಭೇಟಿ ನೀಡಿ ಸಾಮಗ್ರಿ ಖರೀದಿಸಿ ಅರಣ್ಯದತ್ತ ತೆರಳಿದ್ದರು. ಆನಂತರ, ಮಾ.23ರಂದು ನಾಲ್ವರು ಶಂಕಿತರು ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾ.ಪಂ. ವ್ಯಾಪ್ತಿಯ ಐನೆಕಿದು ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಭೇಟಿ ನೀಡಿ ಊಟ, ಆಹಾರ ಸಾಮಗ್ರಿ ಪಡೆದು ತೆರಳಿದ್ದರು.
ಮಾ.27ರಂದು ಮತ್ತೆ ಕೂಜಿಮಲೆ ಎಸ್ಟೇಟ್ ಪ್ರದೇಶದಲ್ಲಿ ಅಪರಿಚಿತ ಮಹಿಳೆ ಕಾಣಿಸಿಕೊಂಡಿದ್ದಾಳೆ. ಮಾ.18ರಿಂದ ವಿವಿಧೆಡೆ ನಕ್ಸಲ್ ನಿಗ್ರಹ ಪಡೆ ನಿರಂತರ ಶೋಧ ನಡೆಸುತ್ತಿದ್ರೂ ನಕ್ಸಲರ ಬಗ್ಗೆ ಯಾವುದೇ ಸುಳಿವು ದೊರಕಿಲ್ಲ.
An unidentified woman was reportedly spotted multiple times in the Koojimale estate area on Wednesday, prompting a search amid suspicions that she may be affiliated with Naxalites.
11-08-25 11:01 pm
Bangalore Correspondent
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
Forced Marriage, Chitradurga: ನನಗಿನ್ನೂ ಹದಿನಾರ...
11-08-25 11:18 am
ಮುಸ್ಲಿಂ ಯುವತಿಯರನ್ನ ಮದುವೆಯಾದ್ರೆ 5 ಲಕ್ಷ ರೂ. ಕೊಡ...
10-08-25 09:12 pm
11-08-25 08:55 pm
HK News Desk
Rabies Death, Supreme Court: ರಾಜಧಾನಿಯಲ್ಲಿ ರೇಬ...
11-08-25 02:48 pm
ಭಾರತದ ವಿರುದ್ಧ ಟ್ರಂಪ್ ಸುಂಕಾಸ್ತ್ರಕ್ಕೆ ಅಮೆರಿಕದ ತ...
09-08-25 11:09 pm
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
11-08-25 07:39 pm
Mangalore Correspondent
Padmalatha Murder Case, Dharmasthala, SIT: 19...
11-08-25 03:33 pm
Ground Penetrating Radar, Dharmasthala: ಧರ್ಮಸ...
11-08-25 11:49 am
Kudla Rampage YouTuber, Ajay Anchan Case: ಬೈಕ...
11-08-25 11:38 am
ಹೊಸ್ತಿಲು ಬರೆದು, ಪಾತ್ರೆ ತೊಳೆದು, ದೇವರ ಸ್ತೋತ್ರ ಹ...
10-08-25 04:32 pm
11-08-25 12:37 pm
Mangalore Correspondent
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm