ಬ್ರೇಕಿಂಗ್ ನ್ಯೂಸ್
28-03-24 03:25 pm Mangalore Correspondent ಕರಾವಳಿ
ಪುತ್ತೂರು, ಮಾ.28: ಕೊಡಗಿನ ಗಡಿಭಾಗ ಸುಳ್ಯ ತಾಲೂಕಿನ ಕಲ್ಮಕಾರು ಸಮೀಪದ ಕೂಜಿಮಲೆ ಎಸ್ಟೇಟ್ ನಲ್ಲಿ ಮತ್ತೆ ಶಂಕಿತ ನಕ್ಸಲರ ಚಲನವಲನ ಕಂಡುಬಂದಿದೆ. ಅಪರಿಚಿತ ಮಹಿಳೆಯೊಬ್ಬರು ರಬ್ಬರ್ ಎಸ್ಟೇಟ್ ನಲ್ಲಿ ಕಾಣಿಸಿಕೊಂಡಿದ್ದು ನಕ್ಸಲ್ ನಿಗ್ರಹ ದಳಕ್ಕೆ ಮಾಹಿತಿ ನೀಡಲಾಗಿದೆ.
ಕೂಜಿಮಲೆ ಎಸ್ಟೆಟ್ ಕೊಡಗು ಜಿಲ್ಲೆಯ ವ್ಯಾಪ್ತಿಗೆ ಸೇರಿದ್ದು ಬುಧವಾರ ಅಪರಾಹ್ನ ಅಪರಿಚಿತ ಮಹಿಳೆ ಎಸ್ಟೇಟಿನ ರಬ್ಬರ್ ತೋಟದಲ್ಲಿ ಸಂಚರಿಸುತ್ತಿರುವುದನ್ನು ಸಿಬಂದಿ ನೋಡಿದ್ದಾರೆ. ಬಳಿಕ ನಕ್ಸಲ್ ನಿಗ್ರಹ ಪಡೆಗೆ ಸ್ಥಳೀಯರು ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದು ಶೋಧ ನಡೆಸಿದ್ದಾರೆ. ಶಂಕಿತ ಮಹಿಳೆ ರಬ್ಬರ್ ತೋಟದಿಂದ ಅರಣ್ಯ ಭಾಗದತ್ತ ತೆರಳಿದ್ದಾಳೆ ಎನ್ನಲಾಗಿದೆ.
ನಕ್ಸಲ್ ನಿಗ್ರಹ ಪಡೆಯ ಸಿಬಂದಿ ಕಳೆದ ಒಂದು ವಾರದಿಂದ ಐನೆಕಿದು, ಕೂಜಿಮಲೆ ಆಸುಪಾಸಿನಲ್ಲೇ ಶೋಧ ಕಾರ್ಯ ನಡೆಸುತ್ತಿದ್ದಾರೆ. ಶಂಕಿತ ಮಹಿಳೆ ಕಾಣಿಸಿಕೊಂಡ ಮಾಹಿತಿ ಲಭ್ಯವಾದ ಕೂಡಲೇ ಎಎನ್ಎಫ್ ತಂಡ ಎಸ್ಟೇಟ್ ಪ್ರದೇಶಕ್ಕೆ ತೆರಳಿ ಶೋಧ ಕಾರ್ಯ ಆರಂಭಿಸಿದೆ. ಮಾರ್ಚ್ 16ರಂದು ನಾಲ್ವರು ಶಂಕಿತ ನಕ್ಸಲರು ಕೂಜಿಮಲೆ ಎಸ್ಟೇಟ್ ಬಳಿಯ ಅಂಗಡಿಯೊಂದಕ್ಕೆ ಭೇಟಿ ನೀಡಿ ಸಾಮಗ್ರಿ ಖರೀದಿಸಿ ಅರಣ್ಯದತ್ತ ತೆರಳಿದ್ದರು. ಆನಂತರ, ಮಾ.23ರಂದು ನಾಲ್ವರು ಶಂಕಿತರು ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾ.ಪಂ. ವ್ಯಾಪ್ತಿಯ ಐನೆಕಿದು ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಭೇಟಿ ನೀಡಿ ಊಟ, ಆಹಾರ ಸಾಮಗ್ರಿ ಪಡೆದು ತೆರಳಿದ್ದರು.
ಮಾ.27ರಂದು ಮತ್ತೆ ಕೂಜಿಮಲೆ ಎಸ್ಟೇಟ್ ಪ್ರದೇಶದಲ್ಲಿ ಅಪರಿಚಿತ ಮಹಿಳೆ ಕಾಣಿಸಿಕೊಂಡಿದ್ದಾಳೆ. ಮಾ.18ರಿಂದ ವಿವಿಧೆಡೆ ನಕ್ಸಲ್ ನಿಗ್ರಹ ಪಡೆ ನಿರಂತರ ಶೋಧ ನಡೆಸುತ್ತಿದ್ರೂ ನಕ್ಸಲರ ಬಗ್ಗೆ ಯಾವುದೇ ಸುಳಿವು ದೊರಕಿಲ್ಲ.
An unidentified woman was reportedly spotted multiple times in the Koojimale estate area on Wednesday, prompting a search amid suspicions that she may be affiliated with Naxalites.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm