ಬ್ರೇಕಿಂಗ್ ನ್ಯೂಸ್
28-03-24 03:25 pm Mangalore Correspondent ಕರಾವಳಿ
ಪುತ್ತೂರು, ಮಾ.28: ಕೊಡಗಿನ ಗಡಿಭಾಗ ಸುಳ್ಯ ತಾಲೂಕಿನ ಕಲ್ಮಕಾರು ಸಮೀಪದ ಕೂಜಿಮಲೆ ಎಸ್ಟೇಟ್ ನಲ್ಲಿ ಮತ್ತೆ ಶಂಕಿತ ನಕ್ಸಲರ ಚಲನವಲನ ಕಂಡುಬಂದಿದೆ. ಅಪರಿಚಿತ ಮಹಿಳೆಯೊಬ್ಬರು ರಬ್ಬರ್ ಎಸ್ಟೇಟ್ ನಲ್ಲಿ ಕಾಣಿಸಿಕೊಂಡಿದ್ದು ನಕ್ಸಲ್ ನಿಗ್ರಹ ದಳಕ್ಕೆ ಮಾಹಿತಿ ನೀಡಲಾಗಿದೆ.
ಕೂಜಿಮಲೆ ಎಸ್ಟೆಟ್ ಕೊಡಗು ಜಿಲ್ಲೆಯ ವ್ಯಾಪ್ತಿಗೆ ಸೇರಿದ್ದು ಬುಧವಾರ ಅಪರಾಹ್ನ ಅಪರಿಚಿತ ಮಹಿಳೆ ಎಸ್ಟೇಟಿನ ರಬ್ಬರ್ ತೋಟದಲ್ಲಿ ಸಂಚರಿಸುತ್ತಿರುವುದನ್ನು ಸಿಬಂದಿ ನೋಡಿದ್ದಾರೆ. ಬಳಿಕ ನಕ್ಸಲ್ ನಿಗ್ರಹ ಪಡೆಗೆ ಸ್ಥಳೀಯರು ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದು ಶೋಧ ನಡೆಸಿದ್ದಾರೆ. ಶಂಕಿತ ಮಹಿಳೆ ರಬ್ಬರ್ ತೋಟದಿಂದ ಅರಣ್ಯ ಭಾಗದತ್ತ ತೆರಳಿದ್ದಾಳೆ ಎನ್ನಲಾಗಿದೆ.
ನಕ್ಸಲ್ ನಿಗ್ರಹ ಪಡೆಯ ಸಿಬಂದಿ ಕಳೆದ ಒಂದು ವಾರದಿಂದ ಐನೆಕಿದು, ಕೂಜಿಮಲೆ ಆಸುಪಾಸಿನಲ್ಲೇ ಶೋಧ ಕಾರ್ಯ ನಡೆಸುತ್ತಿದ್ದಾರೆ. ಶಂಕಿತ ಮಹಿಳೆ ಕಾಣಿಸಿಕೊಂಡ ಮಾಹಿತಿ ಲಭ್ಯವಾದ ಕೂಡಲೇ ಎಎನ್ಎಫ್ ತಂಡ ಎಸ್ಟೇಟ್ ಪ್ರದೇಶಕ್ಕೆ ತೆರಳಿ ಶೋಧ ಕಾರ್ಯ ಆರಂಭಿಸಿದೆ. ಮಾರ್ಚ್ 16ರಂದು ನಾಲ್ವರು ಶಂಕಿತ ನಕ್ಸಲರು ಕೂಜಿಮಲೆ ಎಸ್ಟೇಟ್ ಬಳಿಯ ಅಂಗಡಿಯೊಂದಕ್ಕೆ ಭೇಟಿ ನೀಡಿ ಸಾಮಗ್ರಿ ಖರೀದಿಸಿ ಅರಣ್ಯದತ್ತ ತೆರಳಿದ್ದರು. ಆನಂತರ, ಮಾ.23ರಂದು ನಾಲ್ವರು ಶಂಕಿತರು ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾ.ಪಂ. ವ್ಯಾಪ್ತಿಯ ಐನೆಕಿದು ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಭೇಟಿ ನೀಡಿ ಊಟ, ಆಹಾರ ಸಾಮಗ್ರಿ ಪಡೆದು ತೆರಳಿದ್ದರು.
ಮಾ.27ರಂದು ಮತ್ತೆ ಕೂಜಿಮಲೆ ಎಸ್ಟೇಟ್ ಪ್ರದೇಶದಲ್ಲಿ ಅಪರಿಚಿತ ಮಹಿಳೆ ಕಾಣಿಸಿಕೊಂಡಿದ್ದಾಳೆ. ಮಾ.18ರಿಂದ ವಿವಿಧೆಡೆ ನಕ್ಸಲ್ ನಿಗ್ರಹ ಪಡೆ ನಿರಂತರ ಶೋಧ ನಡೆಸುತ್ತಿದ್ರೂ ನಕ್ಸಲರ ಬಗ್ಗೆ ಯಾವುದೇ ಸುಳಿವು ದೊರಕಿಲ್ಲ.
An unidentified woman was reportedly spotted multiple times in the Koojimale estate area on Wednesday, prompting a search amid suspicions that she may be affiliated with Naxalites.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm