ಬ್ರೇಕಿಂಗ್ ನ್ಯೂಸ್
28-03-24 03:25 pm Mangalore Correspondent ಕರಾವಳಿ
ಪುತ್ತೂರು, ಮಾ.28: ಕೊಡಗಿನ ಗಡಿಭಾಗ ಸುಳ್ಯ ತಾಲೂಕಿನ ಕಲ್ಮಕಾರು ಸಮೀಪದ ಕೂಜಿಮಲೆ ಎಸ್ಟೇಟ್ ನಲ್ಲಿ ಮತ್ತೆ ಶಂಕಿತ ನಕ್ಸಲರ ಚಲನವಲನ ಕಂಡುಬಂದಿದೆ. ಅಪರಿಚಿತ ಮಹಿಳೆಯೊಬ್ಬರು ರಬ್ಬರ್ ಎಸ್ಟೇಟ್ ನಲ್ಲಿ ಕಾಣಿಸಿಕೊಂಡಿದ್ದು ನಕ್ಸಲ್ ನಿಗ್ರಹ ದಳಕ್ಕೆ ಮಾಹಿತಿ ನೀಡಲಾಗಿದೆ.
ಕೂಜಿಮಲೆ ಎಸ್ಟೆಟ್ ಕೊಡಗು ಜಿಲ್ಲೆಯ ವ್ಯಾಪ್ತಿಗೆ ಸೇರಿದ್ದು ಬುಧವಾರ ಅಪರಾಹ್ನ ಅಪರಿಚಿತ ಮಹಿಳೆ ಎಸ್ಟೇಟಿನ ರಬ್ಬರ್ ತೋಟದಲ್ಲಿ ಸಂಚರಿಸುತ್ತಿರುವುದನ್ನು ಸಿಬಂದಿ ನೋಡಿದ್ದಾರೆ. ಬಳಿಕ ನಕ್ಸಲ್ ನಿಗ್ರಹ ಪಡೆಗೆ ಸ್ಥಳೀಯರು ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದು ಶೋಧ ನಡೆಸಿದ್ದಾರೆ. ಶಂಕಿತ ಮಹಿಳೆ ರಬ್ಬರ್ ತೋಟದಿಂದ ಅರಣ್ಯ ಭಾಗದತ್ತ ತೆರಳಿದ್ದಾಳೆ ಎನ್ನಲಾಗಿದೆ.
ನಕ್ಸಲ್ ನಿಗ್ರಹ ಪಡೆಯ ಸಿಬಂದಿ ಕಳೆದ ಒಂದು ವಾರದಿಂದ ಐನೆಕಿದು, ಕೂಜಿಮಲೆ ಆಸುಪಾಸಿನಲ್ಲೇ ಶೋಧ ಕಾರ್ಯ ನಡೆಸುತ್ತಿದ್ದಾರೆ. ಶಂಕಿತ ಮಹಿಳೆ ಕಾಣಿಸಿಕೊಂಡ ಮಾಹಿತಿ ಲಭ್ಯವಾದ ಕೂಡಲೇ ಎಎನ್ಎಫ್ ತಂಡ ಎಸ್ಟೇಟ್ ಪ್ರದೇಶಕ್ಕೆ ತೆರಳಿ ಶೋಧ ಕಾರ್ಯ ಆರಂಭಿಸಿದೆ. ಮಾರ್ಚ್ 16ರಂದು ನಾಲ್ವರು ಶಂಕಿತ ನಕ್ಸಲರು ಕೂಜಿಮಲೆ ಎಸ್ಟೇಟ್ ಬಳಿಯ ಅಂಗಡಿಯೊಂದಕ್ಕೆ ಭೇಟಿ ನೀಡಿ ಸಾಮಗ್ರಿ ಖರೀದಿಸಿ ಅರಣ್ಯದತ್ತ ತೆರಳಿದ್ದರು. ಆನಂತರ, ಮಾ.23ರಂದು ನಾಲ್ವರು ಶಂಕಿತರು ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾ.ಪಂ. ವ್ಯಾಪ್ತಿಯ ಐನೆಕಿದು ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಭೇಟಿ ನೀಡಿ ಊಟ, ಆಹಾರ ಸಾಮಗ್ರಿ ಪಡೆದು ತೆರಳಿದ್ದರು.
ಮಾ.27ರಂದು ಮತ್ತೆ ಕೂಜಿಮಲೆ ಎಸ್ಟೇಟ್ ಪ್ರದೇಶದಲ್ಲಿ ಅಪರಿಚಿತ ಮಹಿಳೆ ಕಾಣಿಸಿಕೊಂಡಿದ್ದಾಳೆ. ಮಾ.18ರಿಂದ ವಿವಿಧೆಡೆ ನಕ್ಸಲ್ ನಿಗ್ರಹ ಪಡೆ ನಿರಂತರ ಶೋಧ ನಡೆಸುತ್ತಿದ್ರೂ ನಕ್ಸಲರ ಬಗ್ಗೆ ಯಾವುದೇ ಸುಳಿವು ದೊರಕಿಲ್ಲ.
An unidentified woman was reportedly spotted multiple times in the Koojimale estate area on Wednesday, prompting a search amid suspicions that she may be affiliated with Naxalites.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm