ಬ್ರೇಕಿಂಗ್ ನ್ಯೂಸ್
28-03-24 07:12 pm Mangalore Correspondent ಕರಾವಳಿ
ಬಂಟ್ವಾಳ, ಮಾ.28: ಸರಕಾರಿ ಉದ್ಯೋಗ ತೆಗೆಸಿ ಕೊಡುವುದಾಗಿ ಹೇಳಿ ಯುವಕನೊರ್ವನಿಗೆ ಲಕ್ಷಾಂತರ ರೂ. ಹಣ ಪಡೆದು ವಂಚಿಸಿದ ಆರೋಪದಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡನ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ನಿವಾಸಿ ಕಾರ್ತಿಕ್ ಎಂಬವರು ವಾಮದಪದವು ನಿವಾಸಿ, ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಉಪಾಧ್ಯಕ್ಷ ಪದ್ಮನಾಭ ಸಾಮಂತ್ ಎಂಬವರು ಲಕ್ಷಾಂತರ ರೂ. ವಂಚನೆ ಮಾಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಕುಕ್ಕಿಪಾಡಿ ನಿವಾಸಿ ಕಾರ್ತಿಕ್ ಬಡ ಕುಟುಂಬದ ಯುವಕನಾಗಿದ್ದು, ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ಮಾಡುತ್ತಿದ್ದ. ಸರಕಾರಿ ಉದ್ಯೋಗದ ಕನಸು ಹೊಂದಿದ್ದ ಈತನಿಗೆ ಪರಿಚಯದ ಪದ್ಮನಾಭ ಸಾಮಂತ ಸರಕಾರಿ ಉದ್ಯೋಗ ನೀಡುವ ಭರವಸೆ ನೀಡಿದ್ದು ಬೆಂಗಳೂರಿನ ಕಾವೇರಿ ಭವನದಲ್ಲಿರುವ ನೀರಾವರಿ ನಿಗಮದಲ್ಲಿ ಗುಮಾಸ್ತ ಉದ್ಯೋಗ ತೆಗೆಸಿಕೊಡುವುದಾಗಿ ಹೇಳಿದ್ದ.
ಸರಕಾರಿ ಉದ್ಯೋಗ ತೆಗೆಸಿಕೊಡಲು 2 ಲಕ್ಷ ಹಣ ನೀಡುವಂತೆ ತಿಳಿಸಿದ್ದಲ್ಲದೆ, ನಂಬಿಕೆಯನ್ನು ಮೂಡಿಸಲು ನೀರಾವರಿ ನಿಗಮದ ಹೆಸರಿನಲ್ಲಿ ಛಾಪ ಕಾಗದವನ್ನು ತೋರಿಸಿದ್ದ. ಉದ್ಯೋಗ ಸಿಕ್ಕಿದ ಮೇಲೆ ತಂದೆ, ತಾಯಿಗೆ ಇ.ಎಸ್.ಐ ಸೌಲಭ್ಯಕ್ಕಾಗಿ ಇಬ್ಬರ ಬ್ಯಾಂಕ್ ಪಾಸ್ ಪುಸ್ತಕ, ಜೆರಾಕ್ಸ್ ಪ್ರತಿ ಹಾಗೂ ಕಾರ್ತಿಕ್ ನ ಬ್ಯಾಂಕ್ ಜೆರಾಕ್ಸ್ ಪಾಸ್ ಪುಸ್ತಕ ಪಡೆದಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಜೊತೆಗೆ ನಿಗಮದ ಎಂ.ಡಿ. ಅವರಿಗೆ ಹಣ ನೀಡುವ ನೆಪದಲ್ಲಿ ಹಂತ ಹಂತವಾಗಿ ರೂ. 1,51,750 ಲಕ್ಷ ರೂ. ಪಡೆದಿದ್ದ. ಆದರೆ ಕೆಲಸ ಸಿಗುವುದು ಕಂಡುಬರದ ಹಿನ್ನೆಲೆಯಲ್ಲಿ ವಿಚಾರಿಸಿದಾಗ ಇನ್ನೂ ಒಂದು ಲಕ್ಷ ಹಣವನ್ನು ನೀಡುವಂತೆ ಬೇಡಿಕೆ ಇಟ್ಟಿದ್ದ.
ಇದರಿಂದ ಸಂಶಯಗೊಂಡ ಕಾರ್ತಿಕ್ ಬೆಂಗಳೂರಿನ ಕಾವೇರಿ ನಿಗಮದಲ್ಲಿರುವ ನೀರಾವರಿ ಇಲಾಖೆಯನ್ನು ವಿಚಾರಿಸಿದಾಗ ಅಲ್ಲಿ ಯಾವುದೇ ಉದ್ಯೋಗದ ಅವಕಾಶ ಇಲ್ಲದಿರುವುದು ಮತ್ತು ಈತನ ಅರ್ಜಿ ಹೋಗದಿರುವುದು ತಿಳಿದುಬಂತು. ವಂಚನೆ ವಿಚಾರ ತಿಳಿದು, ಸಾಮಾಜಿಕ ಜಾಲತಾಣದಲ್ಲಿ ಅನ್ಯಾಯವನ್ನು ಹೇಳಿಕೊಂಡಿದ್ದ. ಇದೀಗ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾನೆ.
A youth was duped of lakhs of rupees on the pretext of getting him a government job. A complaint has been registered against the district Congress leader at Punjalakatte police station for allegedly duping him of money.
05-02-26 01:15 pm
Bangalore Correspondent
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm