ಬ್ರೇಕಿಂಗ್ ನ್ಯೂಸ್
28-03-24 07:12 pm Mangalore Correspondent ಕರಾವಳಿ
ಬಂಟ್ವಾಳ, ಮಾ.28: ಸರಕಾರಿ ಉದ್ಯೋಗ ತೆಗೆಸಿ ಕೊಡುವುದಾಗಿ ಹೇಳಿ ಯುವಕನೊರ್ವನಿಗೆ ಲಕ್ಷಾಂತರ ರೂ. ಹಣ ಪಡೆದು ವಂಚಿಸಿದ ಆರೋಪದಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡನ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ನಿವಾಸಿ ಕಾರ್ತಿಕ್ ಎಂಬವರು ವಾಮದಪದವು ನಿವಾಸಿ, ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಉಪಾಧ್ಯಕ್ಷ ಪದ್ಮನಾಭ ಸಾಮಂತ್ ಎಂಬವರು ಲಕ್ಷಾಂತರ ರೂ. ವಂಚನೆ ಮಾಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಕುಕ್ಕಿಪಾಡಿ ನಿವಾಸಿ ಕಾರ್ತಿಕ್ ಬಡ ಕುಟುಂಬದ ಯುವಕನಾಗಿದ್ದು, ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ಮಾಡುತ್ತಿದ್ದ. ಸರಕಾರಿ ಉದ್ಯೋಗದ ಕನಸು ಹೊಂದಿದ್ದ ಈತನಿಗೆ ಪರಿಚಯದ ಪದ್ಮನಾಭ ಸಾಮಂತ ಸರಕಾರಿ ಉದ್ಯೋಗ ನೀಡುವ ಭರವಸೆ ನೀಡಿದ್ದು ಬೆಂಗಳೂರಿನ ಕಾವೇರಿ ಭವನದಲ್ಲಿರುವ ನೀರಾವರಿ ನಿಗಮದಲ್ಲಿ ಗುಮಾಸ್ತ ಉದ್ಯೋಗ ತೆಗೆಸಿಕೊಡುವುದಾಗಿ ಹೇಳಿದ್ದ.
ಸರಕಾರಿ ಉದ್ಯೋಗ ತೆಗೆಸಿಕೊಡಲು 2 ಲಕ್ಷ ಹಣ ನೀಡುವಂತೆ ತಿಳಿಸಿದ್ದಲ್ಲದೆ, ನಂಬಿಕೆಯನ್ನು ಮೂಡಿಸಲು ನೀರಾವರಿ ನಿಗಮದ ಹೆಸರಿನಲ್ಲಿ ಛಾಪ ಕಾಗದವನ್ನು ತೋರಿಸಿದ್ದ. ಉದ್ಯೋಗ ಸಿಕ್ಕಿದ ಮೇಲೆ ತಂದೆ, ತಾಯಿಗೆ ಇ.ಎಸ್.ಐ ಸೌಲಭ್ಯಕ್ಕಾಗಿ ಇಬ್ಬರ ಬ್ಯಾಂಕ್ ಪಾಸ್ ಪುಸ್ತಕ, ಜೆರಾಕ್ಸ್ ಪ್ರತಿ ಹಾಗೂ ಕಾರ್ತಿಕ್ ನ ಬ್ಯಾಂಕ್ ಜೆರಾಕ್ಸ್ ಪಾಸ್ ಪುಸ್ತಕ ಪಡೆದಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಜೊತೆಗೆ ನಿಗಮದ ಎಂ.ಡಿ. ಅವರಿಗೆ ಹಣ ನೀಡುವ ನೆಪದಲ್ಲಿ ಹಂತ ಹಂತವಾಗಿ ರೂ. 1,51,750 ಲಕ್ಷ ರೂ. ಪಡೆದಿದ್ದ. ಆದರೆ ಕೆಲಸ ಸಿಗುವುದು ಕಂಡುಬರದ ಹಿನ್ನೆಲೆಯಲ್ಲಿ ವಿಚಾರಿಸಿದಾಗ ಇನ್ನೂ ಒಂದು ಲಕ್ಷ ಹಣವನ್ನು ನೀಡುವಂತೆ ಬೇಡಿಕೆ ಇಟ್ಟಿದ್ದ.
ಇದರಿಂದ ಸಂಶಯಗೊಂಡ ಕಾರ್ತಿಕ್ ಬೆಂಗಳೂರಿನ ಕಾವೇರಿ ನಿಗಮದಲ್ಲಿರುವ ನೀರಾವರಿ ಇಲಾಖೆಯನ್ನು ವಿಚಾರಿಸಿದಾಗ ಅಲ್ಲಿ ಯಾವುದೇ ಉದ್ಯೋಗದ ಅವಕಾಶ ಇಲ್ಲದಿರುವುದು ಮತ್ತು ಈತನ ಅರ್ಜಿ ಹೋಗದಿರುವುದು ತಿಳಿದುಬಂತು. ವಂಚನೆ ವಿಚಾರ ತಿಳಿದು, ಸಾಮಾಜಿಕ ಜಾಲತಾಣದಲ್ಲಿ ಅನ್ಯಾಯವನ್ನು ಹೇಳಿಕೊಂಡಿದ್ದ. ಇದೀಗ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾನೆ.
A youth was duped of lakhs of rupees on the pretext of getting him a government job. A complaint has been registered against the district Congress leader at Punjalakatte police station for allegedly duping him of money.
22-09-25 03:31 pm
HK News Desk
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
22-09-25 10:50 am
HK News Desk
ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್...
20-09-25 11:03 pm
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
22-09-25 04:09 pm
Mangalore Correspondent
ದೋಷಯುಕ್ತ ಇಲೆಕ್ಟ್ರಿಕ್ ವಾಹನ ; ಓಲಾ ಕಂಪನಿ ವಿರುದ್...
22-09-25 01:51 pm
ಸೆ.22ರಿಂದ ಮಂಗಳೂರು ದಸರಾ ವೈಭವ ; ಸಾಂಸ್ಕೃತಿಕ ಕಲಾವ...
20-09-25 10:39 pm
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm