ಬ್ರೇಕಿಂಗ್ ನ್ಯೂಸ್
28-03-24 07:12 pm Mangalore Correspondent ಕರಾವಳಿ
ಬಂಟ್ವಾಳ, ಮಾ.28: ಸರಕಾರಿ ಉದ್ಯೋಗ ತೆಗೆಸಿ ಕೊಡುವುದಾಗಿ ಹೇಳಿ ಯುವಕನೊರ್ವನಿಗೆ ಲಕ್ಷಾಂತರ ರೂ. ಹಣ ಪಡೆದು ವಂಚಿಸಿದ ಆರೋಪದಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡನ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ನಿವಾಸಿ ಕಾರ್ತಿಕ್ ಎಂಬವರು ವಾಮದಪದವು ನಿವಾಸಿ, ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಉಪಾಧ್ಯಕ್ಷ ಪದ್ಮನಾಭ ಸಾಮಂತ್ ಎಂಬವರು ಲಕ್ಷಾಂತರ ರೂ. ವಂಚನೆ ಮಾಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಕುಕ್ಕಿಪಾಡಿ ನಿವಾಸಿ ಕಾರ್ತಿಕ್ ಬಡ ಕುಟುಂಬದ ಯುವಕನಾಗಿದ್ದು, ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ಮಾಡುತ್ತಿದ್ದ. ಸರಕಾರಿ ಉದ್ಯೋಗದ ಕನಸು ಹೊಂದಿದ್ದ ಈತನಿಗೆ ಪರಿಚಯದ ಪದ್ಮನಾಭ ಸಾಮಂತ ಸರಕಾರಿ ಉದ್ಯೋಗ ನೀಡುವ ಭರವಸೆ ನೀಡಿದ್ದು ಬೆಂಗಳೂರಿನ ಕಾವೇರಿ ಭವನದಲ್ಲಿರುವ ನೀರಾವರಿ ನಿಗಮದಲ್ಲಿ ಗುಮಾಸ್ತ ಉದ್ಯೋಗ ತೆಗೆಸಿಕೊಡುವುದಾಗಿ ಹೇಳಿದ್ದ.
ಸರಕಾರಿ ಉದ್ಯೋಗ ತೆಗೆಸಿಕೊಡಲು 2 ಲಕ್ಷ ಹಣ ನೀಡುವಂತೆ ತಿಳಿಸಿದ್ದಲ್ಲದೆ, ನಂಬಿಕೆಯನ್ನು ಮೂಡಿಸಲು ನೀರಾವರಿ ನಿಗಮದ ಹೆಸರಿನಲ್ಲಿ ಛಾಪ ಕಾಗದವನ್ನು ತೋರಿಸಿದ್ದ. ಉದ್ಯೋಗ ಸಿಕ್ಕಿದ ಮೇಲೆ ತಂದೆ, ತಾಯಿಗೆ ಇ.ಎಸ್.ಐ ಸೌಲಭ್ಯಕ್ಕಾಗಿ ಇಬ್ಬರ ಬ್ಯಾಂಕ್ ಪಾಸ್ ಪುಸ್ತಕ, ಜೆರಾಕ್ಸ್ ಪ್ರತಿ ಹಾಗೂ ಕಾರ್ತಿಕ್ ನ ಬ್ಯಾಂಕ್ ಜೆರಾಕ್ಸ್ ಪಾಸ್ ಪುಸ್ತಕ ಪಡೆದಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಜೊತೆಗೆ ನಿಗಮದ ಎಂ.ಡಿ. ಅವರಿಗೆ ಹಣ ನೀಡುವ ನೆಪದಲ್ಲಿ ಹಂತ ಹಂತವಾಗಿ ರೂ. 1,51,750 ಲಕ್ಷ ರೂ. ಪಡೆದಿದ್ದ. ಆದರೆ ಕೆಲಸ ಸಿಗುವುದು ಕಂಡುಬರದ ಹಿನ್ನೆಲೆಯಲ್ಲಿ ವಿಚಾರಿಸಿದಾಗ ಇನ್ನೂ ಒಂದು ಲಕ್ಷ ಹಣವನ್ನು ನೀಡುವಂತೆ ಬೇಡಿಕೆ ಇಟ್ಟಿದ್ದ.
ಇದರಿಂದ ಸಂಶಯಗೊಂಡ ಕಾರ್ತಿಕ್ ಬೆಂಗಳೂರಿನ ಕಾವೇರಿ ನಿಗಮದಲ್ಲಿರುವ ನೀರಾವರಿ ಇಲಾಖೆಯನ್ನು ವಿಚಾರಿಸಿದಾಗ ಅಲ್ಲಿ ಯಾವುದೇ ಉದ್ಯೋಗದ ಅವಕಾಶ ಇಲ್ಲದಿರುವುದು ಮತ್ತು ಈತನ ಅರ್ಜಿ ಹೋಗದಿರುವುದು ತಿಳಿದುಬಂತು. ವಂಚನೆ ವಿಚಾರ ತಿಳಿದು, ಸಾಮಾಜಿಕ ಜಾಲತಾಣದಲ್ಲಿ ಅನ್ಯಾಯವನ್ನು ಹೇಳಿಕೊಂಡಿದ್ದ. ಇದೀಗ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾನೆ.
A youth was duped of lakhs of rupees on the pretext of getting him a government job. A complaint has been registered against the district Congress leader at Punjalakatte police station for allegedly duping him of money.
26-04-24 11:17 pm
Bangalore Correspondent
ಬಿಜೆಪಿ ತನ್ನ ಭದ್ರಕೋಟೆಯಲ್ಲೂ ಗೆದ್ದೇ ಗೆಲ್ಲುತ್ತೇವೆ...
26-04-24 09:10 pm
Madikeri, election, heart attack; ಮಡಿಕೇರಿ ; ಮ...
26-04-24 06:14 pm
Chamarajanagar, villagers, Booth: ಮತದಾನ ಬಹಿಷ್...
26-04-24 04:53 pm
ಚಿತ್ರದುರ್ಗ ; ಲೋ ಬಿಪಿಯಿಂದ ಅಸ್ವಸ್ಥ , ಮತಗಟ್ಟೆಯಲ್...
26-04-24 03:04 pm
26-04-24 02:58 pm
HK News Desk
Road Accident In Telangana: ಹಾಳಾಗಿ ನಿಂತಿದ್ದ ಲ...
25-04-24 03:49 pm
Groom electrocuted in Rajasthan: ರೆಸಾರ್ಟ್ ನಲ್...
24-04-24 05:01 pm
Pm Modi, Muslims: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ...
22-04-24 10:37 pm
ಮದುವೆ ಮುಗಿಸಿ ವಾಪಾಸ್ ಆಗುವ ವೇಳೆ ಭೀಕರ ಅಪಘಾತ ; ಓ...
21-04-24 03:23 pm
26-04-24 10:45 pm
Mangalore Correspondent
Mangalore Voting, Election 2024; ದಕ್ಷಿಣ ಕನ್ನಡ...
26-04-24 10:32 pm
Karkala, Horse ride to cast his vote: ಕಾರ್ಕಳ...
26-04-24 09:28 pm
ಸುಳ್ಯ ; 18 ನಕ್ಸಲ್ ಪೀಡಿತ ಮತಗಟ್ಟೆಗಳಲ್ಲಿ ಶಸ್ತ್ರಸ...
26-04-24 08:42 pm
Mangalore live voting percentage: ದಕ್ಷಿಣ ಕನ್ನ...
26-04-24 05:56 pm
26-04-24 03:59 pm
Mangalore Correspondent
Mangalore Fraud, crime, Krishnaprasad Shetty:...
25-04-24 10:18 pm
Bangalore crime, Dacoity gang, 40 lakhs, robb...
25-04-24 03:33 pm
Gang raped in Bengaluru: ಬೆಂಗಳೂರಿನಲ್ಲಿ ಯುವತಿ...
25-04-24 12:19 pm
Glide touist bus, Mangalore, crime: ಬೆಂಗಳೂರು...
24-04-24 10:48 pm