ಬ್ರೇಕಿಂಗ್ ನ್ಯೂಸ್
30-03-24 10:42 am Bangalore Correspondent ಕರಾವಳಿ
ಉಳ್ಳಾಲ, ಮಾ.29: ಅಡ್ಯಾರ್ ಪದವಿನಿಂದ ನಾಪತ್ತೆಯಾಗಿದ್ದ ತಾಯಿ, ಮಗು ಹರೇಕಳ ಗ್ರಾಮದ ಕಡವಿನಬಳಿ ಸಮೀಪದ ನೇತ್ರಾವತಿ ನದಿಯಲ್ಲಿ ಶುಕ್ರವಾರ ರಾತ್ರಿ ಶವವಾಗಿ ಪತ್ತೆಯಾಗಿದ್ದು, ಒಂದು ವರ್ಷದ ಗಂಡು ಮಗುವಿನೊಂದಿಗೆ ಗೃಹಿಣಿ ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ.
ಅಡ್ಯಾರು ಪದವಿನ ದುರ್ಗಾಪರಮೇಶ್ವರಿ ದೇವಸ್ಥಾನ ಬಳಿಯ ನಿವಾಸಿ ಚೈತ್ರಾ( 30) ಮೃತ ಗೃಹಿಣಿ. ಚೈತ್ರಾ ಶುಕ್ರವಾರ ಮಧ್ಯಾಹ್ನ ತನ್ನ ಒಂದು ವರುಷದ ಗಂಡು ಮಗು ದಿಯಾಂಶ್ ಜತೆ ಆಟೋ ರಿಕ್ಷಾ ಒಂದರಲ್ಲಿ ಹರೇಕಳ ಸೇತುವೆಯ ಮೂಲಕ ಹರೇಕಳ ಕಡವಿನಬಳಿ ಬಂದಿದ್ದರಂತೆ. ಈ ಬಗ್ಗೆ ಸಿಸಿಟಿವಿಯಲ್ಲೂ ದಾಖಲೆ ದೊರೆತಿದೆ. ನದಿ ತೀರದಲ್ಲಿ ಚೈತ್ರಾ ಮಗುವನ್ನ ಎತ್ತಿಕೊಂಡು ಸಾಗುತ್ತಿರುವುದನ್ನ ಸ್ಥಳೀಯರೂ ನೋಡಿದ್ದರು.
ಮಧ್ಯಾಹ್ನದ ಬಳಿಕ ಚೈತ್ರಾಳ ಕುಟುಂಬಸ್ಥರು ಹರೇಕಳಕ್ಕೆ ಬಂದು ವಿಚಾರಿಸಿದ್ದು, ಚೈತ್ರಾ ನಾಪತ್ತೆಯಾಗಿರುವ ಬಗ್ಗೆ ತಿಳಿದಿತ್ತು. ರಾತ್ರಿ 8.30 ರ ವೇಳೆಗೆ ಹರೇಕಳ ನೇತ್ರಾವತಿ ನದಿಯಲ್ಲಿ ಚೈತ್ರ ಮತ್ತು ಆಕೆಯ ಮಗುವಿನ ಶವ ಪತ್ತೆಯಾಗಿದೆ. ಮಹಿಳೆಯು ಮಗುವಿನೊಂದಿಗೆ ಆತ್ಮಹತ್ಯೆಗೈದಿರಬಹುದೆಂದು ಶಂಕಿಸಲಾಗಿದೆ. ಕೊಣಾಜೆ ಪೊಲೀಸರು ಸ್ಥಳಕ್ಕೆ ತೆರಳಿ ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಚೈತ್ರಾಳ ಪತಿ ನಾಗರಾಜ್ ಅವರು ದಿನಗೂಲಿ ನೌಕರನಾಗಿದ್ದು ಪತ್ನಿ, ಮಗುವನ್ನ ಚೆನ್ನಾಗಿಯೇ ನೋಡಿ ಕೊಳ್ಳುತ್ತಿದ್ದರೆಂದು ಕುಟುಂಬವನ್ನ ಹತ್ತಿರದಿಂದ ಬಲ್ಲವರು ತಿಳಿಸಿದ್ದಾರೆ. ಕಳೆದ ಹತ್ತು ದಿವಸಗಳ ಹಿಂದಷ್ಟೆ ನಾಗರಾಜ್, ಚೈತ್ರಾ ದಂಪತಿ ತಮ್ಮ ಮಗುವಿನ ಪ್ರಥಮ ವರ್ಷದ ಹುಟ್ಟುಹಬ್ಬವನ್ನ ದೇರಳಕಟ್ಟೆಯ ವೃದ್ಧಾಶ್ರಮವೊಂದರಲ್ಲಿ ಆಚರಿಸಿ ಸಂಭ್ರಮಿಸಿದ್ದರು.
The lifeless bodies of Chaitra and her one-year-old child, Diyansh, both residents of Adyar Padavu, were discovered near Harekala Bridge. The mother and child were reported missing on the afternoon of Friday, March 29.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm