ಬ್ರೇಕಿಂಗ್ ನ್ಯೂಸ್
30-03-24 10:42 am Bangalore Correspondent ಕರಾವಳಿ
ಉಳ್ಳಾಲ, ಮಾ.29: ಅಡ್ಯಾರ್ ಪದವಿನಿಂದ ನಾಪತ್ತೆಯಾಗಿದ್ದ ತಾಯಿ, ಮಗು ಹರೇಕಳ ಗ್ರಾಮದ ಕಡವಿನಬಳಿ ಸಮೀಪದ ನೇತ್ರಾವತಿ ನದಿಯಲ್ಲಿ ಶುಕ್ರವಾರ ರಾತ್ರಿ ಶವವಾಗಿ ಪತ್ತೆಯಾಗಿದ್ದು, ಒಂದು ವರ್ಷದ ಗಂಡು ಮಗುವಿನೊಂದಿಗೆ ಗೃಹಿಣಿ ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ.
ಅಡ್ಯಾರು ಪದವಿನ ದುರ್ಗಾಪರಮೇಶ್ವರಿ ದೇವಸ್ಥಾನ ಬಳಿಯ ನಿವಾಸಿ ಚೈತ್ರಾ( 30) ಮೃತ ಗೃಹಿಣಿ. ಚೈತ್ರಾ ಶುಕ್ರವಾರ ಮಧ್ಯಾಹ್ನ ತನ್ನ ಒಂದು ವರುಷದ ಗಂಡು ಮಗು ದಿಯಾಂಶ್ ಜತೆ ಆಟೋ ರಿಕ್ಷಾ ಒಂದರಲ್ಲಿ ಹರೇಕಳ ಸೇತುವೆಯ ಮೂಲಕ ಹರೇಕಳ ಕಡವಿನಬಳಿ ಬಂದಿದ್ದರಂತೆ. ಈ ಬಗ್ಗೆ ಸಿಸಿಟಿವಿಯಲ್ಲೂ ದಾಖಲೆ ದೊರೆತಿದೆ. ನದಿ ತೀರದಲ್ಲಿ ಚೈತ್ರಾ ಮಗುವನ್ನ ಎತ್ತಿಕೊಂಡು ಸಾಗುತ್ತಿರುವುದನ್ನ ಸ್ಥಳೀಯರೂ ನೋಡಿದ್ದರು.
ಮಧ್ಯಾಹ್ನದ ಬಳಿಕ ಚೈತ್ರಾಳ ಕುಟುಂಬಸ್ಥರು ಹರೇಕಳಕ್ಕೆ ಬಂದು ವಿಚಾರಿಸಿದ್ದು, ಚೈತ್ರಾ ನಾಪತ್ತೆಯಾಗಿರುವ ಬಗ್ಗೆ ತಿಳಿದಿತ್ತು. ರಾತ್ರಿ 8.30 ರ ವೇಳೆಗೆ ಹರೇಕಳ ನೇತ್ರಾವತಿ ನದಿಯಲ್ಲಿ ಚೈತ್ರ ಮತ್ತು ಆಕೆಯ ಮಗುವಿನ ಶವ ಪತ್ತೆಯಾಗಿದೆ. ಮಹಿಳೆಯು ಮಗುವಿನೊಂದಿಗೆ ಆತ್ಮಹತ್ಯೆಗೈದಿರಬಹುದೆಂದು ಶಂಕಿಸಲಾಗಿದೆ. ಕೊಣಾಜೆ ಪೊಲೀಸರು ಸ್ಥಳಕ್ಕೆ ತೆರಳಿ ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಚೈತ್ರಾಳ ಪತಿ ನಾಗರಾಜ್ ಅವರು ದಿನಗೂಲಿ ನೌಕರನಾಗಿದ್ದು ಪತ್ನಿ, ಮಗುವನ್ನ ಚೆನ್ನಾಗಿಯೇ ನೋಡಿ ಕೊಳ್ಳುತ್ತಿದ್ದರೆಂದು ಕುಟುಂಬವನ್ನ ಹತ್ತಿರದಿಂದ ಬಲ್ಲವರು ತಿಳಿಸಿದ್ದಾರೆ. ಕಳೆದ ಹತ್ತು ದಿವಸಗಳ ಹಿಂದಷ್ಟೆ ನಾಗರಾಜ್, ಚೈತ್ರಾ ದಂಪತಿ ತಮ್ಮ ಮಗುವಿನ ಪ್ರಥಮ ವರ್ಷದ ಹುಟ್ಟುಹಬ್ಬವನ್ನ ದೇರಳಕಟ್ಟೆಯ ವೃದ್ಧಾಶ್ರಮವೊಂದರಲ್ಲಿ ಆಚರಿಸಿ ಸಂಭ್ರಮಿಸಿದ್ದರು.
The lifeless bodies of Chaitra and her one-year-old child, Diyansh, both residents of Adyar Padavu, were discovered near Harekala Bridge. The mother and child were reported missing on the afternoon of Friday, March 29.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm