ಬ್ರೇಕಿಂಗ್ ನ್ಯೂಸ್
31-03-24 04:17 pm Mangaluru Correspondent ಕರಾವಳಿ
ಬಂಟ್ವಾಳ, ಮಾ.31: ವಂಚನೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಕಾಂಗ್ರೆಸ್ ಕಾರ್ಯಕರ್ತನೊಬ್ಬನ ಶವ ಮನೆಯ ಪಕ್ಕದ ಗುಡ್ಡದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಪತ್ತೆಯಾಗಿದ್ದು, ಪುಂಜಾಲಕಟ್ಟೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಉಪಾಧ್ಯಕ್ಷ, ವಾಮದಪದವು ನಿವಾಸಿ ಪದ್ಮನಾಭ ಸಾಮಂತ (30) ಮೃತ ಯುವಕ. ಸರಕಾರಿ ಉದ್ಯೋಗ ತೆಗೆಸಿಕೊಡುವುದಾಗಿ ಹೇಳಿ ಪದ್ಮನಾಭ ಸಾಮಂತ ಯುವಕನೊಬ್ಬನಲ್ಲಿ 1.5 ಲಕ್ಷ ರೂಪಾಯಿ ಹಣ ಪಡೆದು ವಂಚಿಸಿರುವ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಈ ಬಗ್ಗೆ ಪೊಲೀಸರು ಪದ್ಮನಾಭನನ್ನು ಕರೆ ಮಾಡಿ, ವಿಚಾರಣೆಗೆ ಬರುವಂತೆ ತಿಳಿಸಿದ್ದರು.
ಎರಡು ದಿನಗಳಿಂದ ಯಾರಿಗೂ ಸಿಗದೇ, ಫೋನನ್ನೂ ಸ್ವೀಕರಿಸದೇ ಇದ್ದ ಪದ್ಮನಾಭನ ಬಗ್ಗೆ ಹುಡುಕಾಟ ನಡೆಸಲಾಗಿತ್ತು. ಭಾನುವಾರ ಬೆಳಗ್ಗೆ ಆತನ ಮನೆಯಿದ್ದ ಪಕ್ಕದ ಗುಡ್ಡದ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮೇಲ್ನೋಟಕ್ಕೆ ಪದ್ಮನಾಭ ಆತ್ಮಹತ್ಯೆ ಮಾಡಿಕೊಂಡ ರೀತಿಯಿದೆ. ಎರಡು ದಿನಗಳ ಹಿಂದೆಯೇ ಮೃತಪಟ್ಟಿದ್ದು, ಶವ ಕೊಳೆತಿದೆ ಎಂಬ ಮಾಹಿತಿ ಸಿಕ್ಕಿದೆ. ಪೊಲೀಸರು ಶವವನ್ನು ವಶಕ್ಕೆ ಪಡೆದು ಪೋಸ್ಟ್ ಮಾರ್ಟಂ ನಡೆಸಲು ವೈದ್ಯರಿಗೆ ಒಪ್ಪಿಸಿದ್ದಾರೆ. ಸ್ಥಳೀಯರು ಕೊಲೆಗೈದ ಬಗ್ಗೆಯೂ ಶಂಕೆ ವ್ಯಕ್ತಪಡಿಸಿದ್ದಾರೆ.
ಪದ್ಮನಾಭ ಸಾಮಂತ ಅವರು ಫೇಸ್ಬುಕ್ ಜಾಲತಾಣದಲ್ಲಿ ತುಂಬ ಏಕ್ಟಿವ್ ಆಗಿದ್ದರು. ಬಿಜೆಪಿ ಬಗ್ಗೆ, ಭ್ರಷ್ಟಾಚಾರದ ಬಗ್ಗೆ ಪೋಸ್ಟ್ ಗಳನ್ನು ಹಾಕುತ್ತಿದ್ದರು. ಹೀಗಾಗಿ ಪದ್ಮನಾಭ ಸಾವಿನ ಬಗ್ಗೆ ಶಂಕಿಸಿ ಕಾಂಗ್ರೆಸ್ ಕಾರ್ಯಕರ್ತರು ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿದ್ದಾರೆ.
Read; ಸರಕಾರಿ ಉದ್ಯೋಗ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ ಕಾಂಗ್ರೆಸ್ ಮುಖಂಡ ; ಪುಂಜಾಲಕಟ್ಟೆ ಠಾಣೆಗೆ ದೂರು
Congress worker facing fraud charges commits suicide. The body of a young man, facing fraud charges, was discovered hanging in Wamadapadav, suspected to be a suicide. However, comments on social media have raised doubts about the possibility of murder.The deceased, identified as Padmanabh Samantha, hailed from Timarada in Vamadapadav.
22-09-25 03:31 pm
HK News Desk
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
22-09-25 10:50 am
HK News Desk
ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್...
20-09-25 11:03 pm
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
22-09-25 04:09 pm
Mangalore Correspondent
ದೋಷಯುಕ್ತ ಇಲೆಕ್ಟ್ರಿಕ್ ವಾಹನ ; ಓಲಾ ಕಂಪನಿ ವಿರುದ್...
22-09-25 01:51 pm
ಸೆ.22ರಿಂದ ಮಂಗಳೂರು ದಸರಾ ವೈಭವ ; ಸಾಂಸ್ಕೃತಿಕ ಕಲಾವ...
20-09-25 10:39 pm
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm