ಬ್ರೇಕಿಂಗ್ ನ್ಯೂಸ್
31-03-24 08:23 pm Mangalore Correspondent ಕರಾವಳಿ
ಉಳ್ಳಾಲ, ಮಾ.31: ಮುಡಿಪು ಪೇಟೆಯ ರಾಜ್ಯ ಹೆದ್ದಾರಿಯಲ್ಲೇ ವಾಹನ ಸಂಚಾರಕ್ಕೆ ತೊಡಕುಂಟು ಮಾಡಿ ಇಫ್ತಾರ್ ಕೂಟ ನಡೆಸಿದ್ದ "ಆಟೋ ರಾಜಕನ್ಮಾರ್ " ಜಿಲ್ಲಾ ಆಟೋ ಚಾಲಕರ ಸಂಘಟನೆಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ರಾಷ್ಟ್ರೀಯವಾದಿ ಚಿಂತಕರು ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಇಫ್ತಾರ್ ಕೂಟದಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಹಿಂದೂ ಜಾಗರಣಾ ವೇದಿಕೆಯು ಸಹಾಯಕ ಚುನಾವಣಾ ಅಧಿಕಾರಿಗೆ ದೂರು ನೀಡಿದೆ.
ಮುಡಿಪು ಜಂಕ್ಷನ್ನಲ್ಲಿ ಕಳೆದ ಶುಕ್ರವಾರ ಸಂಜೆ ರಿಕ್ಷಾ ಚಾಲಕರ "ಆಟೋ ರಾಜಕನ್ಮಾರ್" ಜಿಲ್ಲಾ ಸಂಘಟನೆಯು ರಾಜ್ಯ ಹೆದ್ದಾರಿಯಲ್ಲೇ ಸೌಹಾರ್ದ ಬೃಹತ್ ಇಫ್ತಾರ್ ಕೂಟ ಆಯೋಜಿಸಿತ್ತು. ಈ ಹಿಂದೆ ಖಾಸಗಿ ಸಭಾಂಗಣದಲ್ಲಿ ನಡೆಸಲಾಗುತ್ತಿದ್ದ ಇಫ್ತಾರ್ ಕೂಟವನ್ನ ಸಾರ್ವಜನಿಕ ರಸ್ತೆಯಲ್ಲೇ ನಡೆಸಿ ವಾಹನ ಸಂಚಾರಕ್ಕೆ ತೊಡಕುಂಟು ಮಾಡಿದ್ದ "ಆಟೋ ರಾಜಕನ್ಮಾರ್" ಸಂಘಟನೆ ಮತ್ತು ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ರಾಷ್ಟ್ರೀಯವಾದಿ ಚಿಂತಕರು ಸಾಮಾಜಿಕ ಜಾಲತಾಣಗಳಲ್ಲಿ ಇಫ್ತಾರ್ ಕೂಟದ ವೀಡಿಯೋ ಹಂಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಮಧ್ಯೆ ಮುಡಿಪು ವಲಯದ ಹಿಂದೂ ಜಾಗರಣಾ ವೇದಿಕೆಯು ರಸ್ತೆ ತಡೆದು ನಡೆಸಿದ್ದ ಇಫ್ತಾರ್ ಕೂಟದಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಸಹಾಯಕ ಚುನಾವಣಾಧಿಕಾರಿ, ಮಂಗಳೂರು ಸಹಾಯಕ ಆಯುಕ್ತ ಹರ್ಷವರ್ಧನ್ ಎಸ್.ಜೆ ಅವರಿಗೆ ಲಿಖಿತ ದೂರು ನೀಡಿದೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶದೆಲ್ಲೆಡೆ ಚುನಾವಣಾ ನೀತಿಸಂಹಿತೆ ಜಾರಿಯಲ್ಲಿದ್ದರೂ ಮುಡಿಪು ಜಂಕ್ಷನ್ ನಲ್ಲಿ ರಸ್ತೆ ತಡೆದು ಸಾರ್ವಜನಿಕರಿಗೆ ತೊಂದರೆ ನೀಡಿ ಇಫ್ತಾರ್ ಕೂಟ ನಡೆಸಿದ್ದು ಇಫ್ತಾರ್ ಹೆಸರಲ್ಲಿ ಸಾರ್ವಜನಿಕರಿಗೆ ಸಹಭೋಜನದ ವ್ಯವಸ್ಥೆ ಮಾಡಿದ್ದಾರೆ. ಆಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ. ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಹಿಂ.ಜಾ.ವೇ. ಜಿಲ್ಲಾಧ್ಯಕ್ಷರಾದ ನರಸಿಂಹ ಮಾಣಿ ಹೇಳಿದ್ದಾರೆ.
ಹಿಂ.ಜಾ.ವೇ ಮಂಗಳೂರು ಸಂಪರ್ಕ ಪ್ರಮುಖ್ ಪ್ರಶಾಂತ್ ಶೆಟ್ಟಿ ಇರಾ, ತಾಲೂಕು ಸಹ ಸಂಚಾಲಕ ಪ್ರಶಾಂತ್ ಮುಡಿಪು, ಮುಡಿಪು ವಲಯ ಸಹ ಸಂಚಾಲಕ ಗುರುಕಿರಣ್, ಉಲ್ಲಾಸ್ ಮುಡಿಪು ಜತೆಯಲ್ಲಿದ್ದರು.
Iftar lunch hoisted at Mudipu junction in Mangalore goes viral, Hindu Jagrana vedike files complaint to election commision for violating election code of conduct.
11-08-25 11:01 pm
Bangalore Correspondent
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
Forced Marriage, Chitradurga: ನನಗಿನ್ನೂ ಹದಿನಾರ...
11-08-25 11:18 am
ಮುಸ್ಲಿಂ ಯುವತಿಯರನ್ನ ಮದುವೆಯಾದ್ರೆ 5 ಲಕ್ಷ ರೂ. ಕೊಡ...
10-08-25 09:12 pm
11-08-25 08:55 pm
HK News Desk
Rabies Death, Supreme Court: ರಾಜಧಾನಿಯಲ್ಲಿ ರೇಬ...
11-08-25 02:48 pm
ಭಾರತದ ವಿರುದ್ಧ ಟ್ರಂಪ್ ಸುಂಕಾಸ್ತ್ರಕ್ಕೆ ಅಮೆರಿಕದ ತ...
09-08-25 11:09 pm
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
11-08-25 07:39 pm
Mangalore Correspondent
Padmalatha Murder Case, Dharmasthala, SIT: 19...
11-08-25 03:33 pm
Ground Penetrating Radar, Dharmasthala: ಧರ್ಮಸ...
11-08-25 11:49 am
Kudla Rampage YouTuber, Ajay Anchan Case: ಬೈಕ...
11-08-25 11:38 am
ಹೊಸ್ತಿಲು ಬರೆದು, ಪಾತ್ರೆ ತೊಳೆದು, ದೇವರ ಸ್ತೋತ್ರ ಹ...
10-08-25 04:32 pm
11-08-25 12:37 pm
Mangalore Correspondent
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm