ಬ್ರೇಕಿಂಗ್ ನ್ಯೂಸ್
31-03-24 09:28 pm Mangalore Correspondent ಕರಾವಳಿ
ಮಂಗಳೂರು, ಮಾ.31: ಮೊಗವೀರ ಸಮುದಾಯದವರು ದೇಶದ ಸಾಗರ ಗಡಿಯ ನಿಜವಾದ ರಕ್ಷಕರು. ಭಾರತೀಯ ನೌಕಾಪಡೆ ರಚನೆಗೂ ಮೊದಲೇ ಜಲಪ್ರದೇಶದ ಗಡಿಯನ್ನು ರಕ್ಷಿಸುತ್ತ ಬಂದವರು. ಸಮುದಾಯದ ದೇಶಭಕ್ತಿ, ಹಿಂದುತ್ವದ ಮೇಲಿನ ನಿಷ್ಠೆ ಅಪಾರವಾದುದು ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಹೇಳಿದ್ದಾರೆ.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಯೋಜಿಸಲಾದ ಪಕ್ಷದ ಮೀನುಗಾರರ ಪ್ರಕೋಷ್ಠದ ಸಮಾವೇಶದಲ್ಲಿ ಅವರು ಮಾತನಾಡಿದರು. ಮೀನುಗಾರರು ನಿಜವಾದ ಅರ್ಥದಲ್ಲಿ ಹಿಂದೂ ಸೈನಿಕರು. ಮೊಗವೀರ ಸಮಾಜದ ಬಂಧುಗಳು ಈ ಮಣ್ಣಿದ ದೈವ-ದೇವರುಗಳನ್ನು ನಂಬಿರುವವರು ಮತ್ತು ರಾಷ್ಟ್ರಾಭಿಮಾನ ಇಟ್ಟುಕೊಂಡವರು. ಎಂತಹ ಸವಾಲು ಬಂದರೂ ದಿಟ್ಟವಾಗಿ ಎದುರಿಸುವ ಸೈನಿಕನ ಮನಸ್ಥಿತಿ ಉಳ್ಳವರು. ರಾಷ್ಟ್ರದ ಹಿತಾಸಕ್ತಿ ಕಾಪಾಡುವಲ್ಲಿ ಕಾಯಾ ವಾಚಾ ಮನಸಾ ಹೋರಾಟ ನಡೆಸುವವರು ಎಂದು ಕ್ಯಾಪ್ಟನ್ ಚೌಟ ಬಣ್ಣಿಸಿದರು.
ಪ್ರಧಾನಿ ಮೋದಿ ಮೀನುಗಾರ ಸಮುದಾಯದ ಬಗ್ಗೆ ವಿಶೇಷ ಪ್ರೀತಿ ಅಭಿಮಾನ ಇಟ್ಟುಕೊಂಡವರು. ಮೀನುಗಾರ ಸಮುದಾಯದ ಅಭಿವೃದ್ಧಿಗಾಗಿ ಅವರು ಜಾರಿಗೊಳಿಸಿದ ಮತ್ಸ್ಯ ಸಂಪದ ಯೋಜನೆ, ಬಂದರುಗಳ ಅಭಿವೃದ್ಧಿ ಯೋಜನೆಗಳೆಲ್ಲ ಲಕ್ಷಾಂತರ ಮಂದಿಗೆ ಅನುಕೂಲಗಳನ್ನು ಕಲ್ಪಿಸಿಕೊಟ್ಟಿವೆ. ಪ್ರಧಾನಿ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ 2004ರಲ್ಲಿ ವೈಬ್ರಂಟ್ ಗುಜರಾತ್ ಸಮ್ಮಿಟ್ ಆಯೋಜಿಸಿ, ಅಲ್ಲಿನ ಕರಾವಳಿಯ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಿದ್ದರು. ಹೊಸದಾಗಿ ಐದು ಬಂದರುಗಳನ್ನು ಅಭಿವೃದ್ಧಿಪಡಿಸಿದ್ದರು. ಈ ಯೋಜನೆ ಜಾರಿಗೆ ಬಂದು 20 ವರ್ಷಗಳಾದ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ವಿಶೇಷ ಸಮಾರಂಭ ಆಯೋಜಿಸಲಾಗಿತ್ತು.
ಗುಜರಾತ್ ಮಾದರಿಯಲ್ಲೇ ಕರ್ನಾಟಕದ ಕರಾವಳಿಯ ಸಮಗ್ರ ಅಭಿವೃದ್ಧಿಗೂ ಯೋಜನೆಗಳನ್ನು ರೂಪಿಸಬಹುದಾಗಿದೆ. ಇದುವರೆಗೂ ದೇಶದ ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ ಕರ್ನಾಟಕದ ಕರಾವಳಿಯ ಸಾಮರ್ಥ್ಯವನ್ನು ಸಂಪೂರ್ಣ ಬಳಸಿಕೊಳ್ಳಲಾಗಿಲ್ಲ. ಮುಂದಿನ ಹಂತದಲ್ಲಿ ಈ ಕಾರ್ಯವನ್ನು ಮಾಡಲು ನನ್ನ ಶಕ್ತಿ ಮೀರಿ ಪ್ರಯತ್ನಿಸುವೆ ಎಂದು ಕ್ಯಾ. ಚೌಟರು ಭರವಸೆ ನೀಡಿದರು.
ಸಮುದ್ರ ನಮ್ಮ ಆಸ್ತಿ. ದೇಶದ ಸರ್ವಾಂಗೀಣ ಪ್ರಗತಿಗೆ ಇದನ್ನು ಬಳಸಿಕೊಳ್ಳಬೇಕಿದೆ. ಮಂಗಳೂರು- ಬೆಂಗಳೂರು ನಡುವೆ ರಸ್ತೆ ಮತ್ತು ರೈಲು ಸಂಪರ್ಕ ಇನ್ನಷ್ಟು ಅಭಿವೃದ್ಧಿಗೊಳ್ಳಬೇಕಿದೆ. ಎಕ್ಸ್ಪ್ರೆಸ್ ಹೆದ್ದಾರಿ, ವೇಗದ ರೈಲು ಸಂಪರ್ಕ ಅರಂಭವಾಗಬೇಕಿದೆ. ಪರಿಸರಕ್ಕೆ ಹಾನಿಯಾಗದೆ ಈ ಕಾರ್ಯವನ್ನು ಸಾಧಿಸುವುದು ಹೇಗೆ ಎಂಬುದು ಯೋಜನೆ ಮಾಡಬೇಕಿದೆ. ಕರ್ನಾಟಕದ ಕರಾವಳಿ ಅಭಿವೃದ್ಧಿಯಾದರೆ ರಾಜ್ಯ, ದೇಶದ ಅಭಿವೃದ್ಧಿ ಕೂಡ ಸಾಧ್ಯ. ಇದಕ್ಕಾಗಿ ನಮ್ಮ ಜನರ ಯೋಚನೆ, ಮಾನಸಿಕತೆ ಬದಲಾಗಬೇಕಿದೆ ಎಂದು ಚೌಟ ನುಡಿದರು.
ದಕ್ಷಿಣ ಕನ್ನಡ ಕರಾವಳಿಯಲ್ಲಿ ಸಸಿಹಿತ್ಲು ಬೀಚ್ನಲ್ಲಿ ಸಾಹಸ ಜಲಕ್ರೀಡೆಗೆ (ಅಡ್ವೆಂಚರ್ ಸ್ಪೋರ್ಟ್ಸ್) ವಿಪುಲ ಅವಕಾಶಗಳಿವೆ. ಇದನ್ನು ನಾವು ಇನ್ನಷ್ಟು ವ್ಯವಸ್ಥಿತವಾಗಿ ಕೈಗೊಳ್ಳಬೇಕಿದೆ. ಬಿಜೆಪಿಯನ್ನು ಕಟ್ಟಿ ಬೆಳಸುವಲ್ಲಿ ಮೀನುಗಾರ ಸಮುದಾಯದ ಪಾತ್ರ ಅತ್ಯಂತ ಮಹತ್ವದ್ದು ಎಂದು ಹೇಳಿದ ಕ್ಯಾಪ್ಟನ್ ಚೌಟ, ಹಿಂದುತ್ವಕ್ಕೆ ತಮ್ಮ ಬದ್ಧತೆ, ಅಭಿವೃದ್ಧಿಗೆ ಆದ್ಯತೆ ಎಂದು ಸಾರಿದರು. ಏಪ್ರಿಲ್ 4ರಂದು ತಾವು ಬೃಹತ್ ಮೆರವಣಿಗೆಯೊಂದಿಗೆ ತೆರಳಿ ನಾಮಪತ್ರ ಸಲ್ಲಿಸುವುದಾಗಿ ಇದೇ ಸಂದರ್ಭದಲ್ಲಿ ಕ್ಯಾ.ಚೌಟ ತಿಳಿಸಿದರು.
ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿ, ತಮ್ಮ ಅವಧಿಯಲ್ಲಿ ಮೀನುಗಾರ ಸೊಸೈಟಿ ಮೂಲಕ ಮೀನುಗಾರ ಸಮುದಾಯಕ್ಕೆ ನೀಡಿದ್ದ ನೆರವನ್ನು ನೆನಪಿಸಿದರು. ಮೀನುಗಾರರು ಕಷ್ಟಪಟ್ಟು ಹಿಡಿದು ತಂದ ಮೀನನ್ನು ಮಾರಾಟ ಮಾಡಲು ತಮ್ಮದೇ ಆದ ವ್ಯವಸ್ಥೆಯನ್ನು ಮಾಡಬೇಕಿದೆ. ಸದ್ಯದ ಪರಿಸ್ಥಿತಿಯಲ್ಲಿ ಮೀನು ಹಿಡಿದು ತರುವವರು ಮೀನುಗಾರರು, ಅದನ್ನು ಮಾರಿ ಲಾಭ ಗಳಿಸುವವರು ಅನ್ಯರು ಎಂಬಂತಾಗಿದೆ. ಈ ಪರಿಸ್ಥಿತಿಯನ್ನು ಬದಲಾಯಿಸಬೇಕಿದೆ ಎಂದು ನಾಗರಾಜ ಶೆಟ್ಟಿ ಹೇಳಿದರು.
ರಾಷ್ಟ್ರೀಯ ಮೀನುಗಾರ ವೇದಿಕೆಯ ಸಹ ಸಂಚಾಲಕ ರಾಮಚಂದ್ರ ಬೈಕಂಪಾಡಿ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ಮೀನುಗಾರರ ಪ್ರಕೋಷ್ಠ ಅಧ್ಯಕ್ಷ ಗಿರೀಶ್ ಕರ್ಕೇರ, ಮಂಡಲ ಅಧ್ಯಕ್ಷ ಯಶವಂತ ಅಮೀನ್, ಪ್ರಮುಖರಾದ ಅನಿಲ್, ಶೋಭೇಂದ್ರ ಸಸಿಹಿತ್ಲು ಮುಂತಾದವರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ರಮೇಶ್ ಅಮೀನ್ ಮುಕ್ಕ, ಹರೀಶ್ ಹೊಸಬೆಟ್ಟು, ಸತೀಶ್ ಸುವರ್ಣ ಪಣಂಬೂರು, ರೂಪೇಶ್ ಕರ್ಕೇರ ಬೆಂಗ್ರೆ, ಪ್ರದೀಪ್ ಮೆಂಡನ್ ಬೊಕ್ಕಪಟ್ಣ ಅವರನ್ನು ಮೀನುಗಾರ ಪ್ರಕೋಷ್ಠದ ಸಹ ಸಂಚಾಲಕರನ್ನಾಗಿ ನೇಮಿಸಲಾಯಿತು.
Mp candidate BJP Brijesh Chowta speaks at Fishermen program in Mangalore, says they are the solider of the ocean.
22-09-25 03:31 pm
HK News Desk
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
22-09-25 10:50 am
HK News Desk
ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್...
20-09-25 11:03 pm
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
22-09-25 04:09 pm
Mangalore Correspondent
ದೋಷಯುಕ್ತ ಇಲೆಕ್ಟ್ರಿಕ್ ವಾಹನ ; ಓಲಾ ಕಂಪನಿ ವಿರುದ್...
22-09-25 01:51 pm
ಸೆ.22ರಿಂದ ಮಂಗಳೂರು ದಸರಾ ವೈಭವ ; ಸಾಂಸ್ಕೃತಿಕ ಕಲಾವ...
20-09-25 10:39 pm
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm