ಬ್ರೇಕಿಂಗ್ ನ್ಯೂಸ್
02-04-24 11:18 am Mangalore Correspondent ಕರಾವಳಿ
ಬಂಟ್ವಾಳ, ಏ 2: ಮನೆಯ ಮೇಲಿಂದ ಕೆಳಗೆಬಿದ್ದು 15 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬಂಟ್ವಾಳದಲ್ಲಿ ಕಳೆದ ರಾತ್ರಿ ನಡೆದಿದೆ. ಬಂಟ್ವಾಳದ ಜಕ್ರಿಬೆಟ್ಟು ನಿವಾಸಿ ದಿನೇಶ್ ಪೂಜಾರಿ ಪುತ್ರ ಆದಿಶ್, ಮೃತ ಬಾಲಕ.
ಬಾಲಕನಿಗೆ ಮೊಬೈಲ್ ಗೀಳು ಇತ್ತು. ಯಾವಾಗಲೂ ಮೊಬೈಲ್ನಲ್ಲೇ ಮುಳುಗಿರುತ್ತಿದ್ದನಂತೆ. ರಾತ್ರಿ ವೇಳೆ ಮೊಬೈಲ್ ನೋಡುತ್ತ ಹೋಗುವಾಗ ಆಯತಪ್ಪಿ ಮನೆಯ ಮೇಲಿಂದ ಕೆಳಗೆ ಬಿದ್ದು ಬಾಲಕ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಮನೆಯವರಿಗೆ ಗೊತ್ತಿಲ್ಲದಂತೆ ಮೊಬೈಲ್ ಹಿಡಿದುಕೊಂಡು ಮನೆ ಮೇಲೆ ಹೋಗಿದ್ದ ವೇಳೆ ಕೆಳಗೆ ಬಿದ್ದಿದ್ದಾನೆ. ಘಟನೆಯಲ್ಲಿ ಬಾಲಕನ ತಲೆಗೆ ಗಂಭೀರ ಗಾಯವಾಗಿದ್ದು, ತೀವ್ರ ರಕ್ತಸ್ರಾವವಾಗಿತ್ತು. ಬಾಲಕನ ತಂದೆ ಬೆಳಗ್ಗೆ ಎದ್ದು ಹೊರಗೆ ಬಂದಾಗ ಆತ ಕೆಳಗೆ ಬಿದ್ದಿರುವುದು ಗಮನಕ್ಕೆ ಬಂದಿದೆ. ಮನೆ ಮೇಲಿಂದ ಬಟ್ಟೆ ತೊಳೆಯುವ ಕಲ್ಲಿನ ಮೇಲೆ ಬಾಲಕ ಬಿದ್ದಿರುವುದು ಕಂಡುಬಂದಿದೆ.
ಬಾಲಕನಿಗೆ ರಾತ್ರಿ ವೇಳೆಯೂ ಮೊಬೈಲ್ ಬಳಕೆ ಹಾಗೂ ಟಿವಿ ನೋಡುವ ಅಭ್ಯಾಸ ಇತ್ತು. ಮನೆ ತಗ್ಗು ಪ್ರದೇಶದಲ್ಲಿರುವ ಕಾರಣಕ್ಕೆ ಪಿಲ್ಲರ್ ಹಾಕಿ ಮೇಲೆ ಮನೆ ನಿರ್ಮಿಸಿದ್ದರು.
ಬಾಲಕನ ತಂದೆ ದಿನೇಶ್ ಹೋಟೆಲ್ ನಡೆಸುತ್ತಿದ್ದು, ಅವರ ಪತ್ನಿ ಬೆಳಗ್ಗೆ ಹೋಟೆಲ್ನಲ್ಲಿ ಕೆಲಸವಿದೆ ಎಂದು ಅಲ್ಲೇ ಮಲಗಿದ್ದರು. ಬಾಲ್ಯದಿಂದಲೂ ಒಬ್ಬನೇ ಮಲಗುವ ಅಭ್ಯಾಸವಿದ್ದ ಬಾಲಕ, ರಾತ್ರಿ ವೇಳೆ ಎದ್ದರೂ ತಂದೆ, ತಾಯಿ ಗಮನಕ್ಕೆ ಬರುತ್ತಿರಲಿಲ್ಲ. ಬಂಟ್ವಾಳ ಖಾಸಗಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿಯಾಗಿದ್ದ ಆದಿಶ್ಗೆ ಇತ್ತೀಚಿಗಷ್ಟೇ ಪರೀಕ್ಷೆಗಳು ಮುಗಿದಿದ್ದವು.
ನಮ್ಮ ಮಗ ಯಾವಾಗಲೂ ಮೊಬೈಲ್ಅನ್ನು ಹಿಡಿದುಕೊಂಡೇ ಇರುತ್ತಿದ್ದ. ಮೊಬೈಲ್ನಲ್ಲಿ ಗೇಮ್ ಆಡುತ್ತಿದ್ದನೇ ಅಥವಾ ಏನನ್ನು ನೋಡುತ್ತಿದ್ದ ಎಂಬುದು ಗೊತ್ತಿಲ್ಲ ಎಂದು ಹೆತ್ತವರು ತಿಳಿಸಿದ್ದಾರೆ.
15 year old boy falls from house top and dies while using mobile at Bantwal in Mangalore. The deceased has been identified as Adish. It is said he was highly addicted to mobile phone.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm