ಬ್ರೇಕಿಂಗ್ ನ್ಯೂಸ್
02-04-24 11:18 am Mangalore Correspondent ಕರಾವಳಿ
ಬಂಟ್ವಾಳ, ಏ 2: ಮನೆಯ ಮೇಲಿಂದ ಕೆಳಗೆಬಿದ್ದು 15 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬಂಟ್ವಾಳದಲ್ಲಿ ಕಳೆದ ರಾತ್ರಿ ನಡೆದಿದೆ. ಬಂಟ್ವಾಳದ ಜಕ್ರಿಬೆಟ್ಟು ನಿವಾಸಿ ದಿನೇಶ್ ಪೂಜಾರಿ ಪುತ್ರ ಆದಿಶ್, ಮೃತ ಬಾಲಕ.
ಬಾಲಕನಿಗೆ ಮೊಬೈಲ್ ಗೀಳು ಇತ್ತು. ಯಾವಾಗಲೂ ಮೊಬೈಲ್ನಲ್ಲೇ ಮುಳುಗಿರುತ್ತಿದ್ದನಂತೆ. ರಾತ್ರಿ ವೇಳೆ ಮೊಬೈಲ್ ನೋಡುತ್ತ ಹೋಗುವಾಗ ಆಯತಪ್ಪಿ ಮನೆಯ ಮೇಲಿಂದ ಕೆಳಗೆ ಬಿದ್ದು ಬಾಲಕ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಮನೆಯವರಿಗೆ ಗೊತ್ತಿಲ್ಲದಂತೆ ಮೊಬೈಲ್ ಹಿಡಿದುಕೊಂಡು ಮನೆ ಮೇಲೆ ಹೋಗಿದ್ದ ವೇಳೆ ಕೆಳಗೆ ಬಿದ್ದಿದ್ದಾನೆ. ಘಟನೆಯಲ್ಲಿ ಬಾಲಕನ ತಲೆಗೆ ಗಂಭೀರ ಗಾಯವಾಗಿದ್ದು, ತೀವ್ರ ರಕ್ತಸ್ರಾವವಾಗಿತ್ತು. ಬಾಲಕನ ತಂದೆ ಬೆಳಗ್ಗೆ ಎದ್ದು ಹೊರಗೆ ಬಂದಾಗ ಆತ ಕೆಳಗೆ ಬಿದ್ದಿರುವುದು ಗಮನಕ್ಕೆ ಬಂದಿದೆ. ಮನೆ ಮೇಲಿಂದ ಬಟ್ಟೆ ತೊಳೆಯುವ ಕಲ್ಲಿನ ಮೇಲೆ ಬಾಲಕ ಬಿದ್ದಿರುವುದು ಕಂಡುಬಂದಿದೆ.
ಬಾಲಕನಿಗೆ ರಾತ್ರಿ ವೇಳೆಯೂ ಮೊಬೈಲ್ ಬಳಕೆ ಹಾಗೂ ಟಿವಿ ನೋಡುವ ಅಭ್ಯಾಸ ಇತ್ತು. ಮನೆ ತಗ್ಗು ಪ್ರದೇಶದಲ್ಲಿರುವ ಕಾರಣಕ್ಕೆ ಪಿಲ್ಲರ್ ಹಾಕಿ ಮೇಲೆ ಮನೆ ನಿರ್ಮಿಸಿದ್ದರು.
ಬಾಲಕನ ತಂದೆ ದಿನೇಶ್ ಹೋಟೆಲ್ ನಡೆಸುತ್ತಿದ್ದು, ಅವರ ಪತ್ನಿ ಬೆಳಗ್ಗೆ ಹೋಟೆಲ್ನಲ್ಲಿ ಕೆಲಸವಿದೆ ಎಂದು ಅಲ್ಲೇ ಮಲಗಿದ್ದರು. ಬಾಲ್ಯದಿಂದಲೂ ಒಬ್ಬನೇ ಮಲಗುವ ಅಭ್ಯಾಸವಿದ್ದ ಬಾಲಕ, ರಾತ್ರಿ ವೇಳೆ ಎದ್ದರೂ ತಂದೆ, ತಾಯಿ ಗಮನಕ್ಕೆ ಬರುತ್ತಿರಲಿಲ್ಲ. ಬಂಟ್ವಾಳ ಖಾಸಗಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿಯಾಗಿದ್ದ ಆದಿಶ್ಗೆ ಇತ್ತೀಚಿಗಷ್ಟೇ ಪರೀಕ್ಷೆಗಳು ಮುಗಿದಿದ್ದವು.
ನಮ್ಮ ಮಗ ಯಾವಾಗಲೂ ಮೊಬೈಲ್ಅನ್ನು ಹಿಡಿದುಕೊಂಡೇ ಇರುತ್ತಿದ್ದ. ಮೊಬೈಲ್ನಲ್ಲಿ ಗೇಮ್ ಆಡುತ್ತಿದ್ದನೇ ಅಥವಾ ಏನನ್ನು ನೋಡುತ್ತಿದ್ದ ಎಂಬುದು ಗೊತ್ತಿಲ್ಲ ಎಂದು ಹೆತ್ತವರು ತಿಳಿಸಿದ್ದಾರೆ.
15 year old boy falls from house top and dies while using mobile at Bantwal in Mangalore. The deceased has been identified as Adish. It is said he was highly addicted to mobile phone.
22-09-25 03:31 pm
HK News Desk
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
22-09-25 10:50 am
HK News Desk
ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್...
20-09-25 11:03 pm
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
22-09-25 01:51 pm
Mangalore Correspondent
ಸೆ.22ರಿಂದ ಮಂಗಳೂರು ದಸರಾ ವೈಭವ ; ಸಾಂಸ್ಕೃತಿಕ ಕಲಾವ...
20-09-25 10:39 pm
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm