ಬ್ರೇಕಿಂಗ್ ನ್ಯೂಸ್
03-04-24 04:58 pm Mangalore Correspondent ಕರಾವಳಿ
ಮಂಗಳೂರು, ಎ.3: ದೇಶದಲ್ಲಿ ಕಾನೂನಾತ್ಮಕ ರೀತಿಯಲ್ಲಿ ಭ್ರಷ್ಟಾಚಾರ ಮಾಡಿರುವುದು ಬಿಜೆಪಿ. ಅತಿ ಹೆಚ್ಚು ಭ್ರಷ್ಟಾಚಾರ ಮಾಡಿರುವ ಪಾರ್ಟಿ ಇದ್ದರೆ ಅದು ಬಿಜೆಪಿ. ಕಾನೂನನ್ನು ದುರುಪಯೋಗ ಮಾಡಿಕೊಂಡು ಬಿಜೆಪಿ 12 ಸಾವಿರ ಕೋಟಿಯನ್ನು ಲೂಟಿ ಮಾಡಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಆಗಮಿಸಿದ್ದ ಸಚಿವರು ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು. ಐಟಿ, ಇಡಿಯಂತಹ ತನಿಖಾ ಸಂಸ್ಥೆಗಳನ್ನು ಮುಂದಿಟ್ಟು ನೀವು ಹಣ ಕೊಡದೇ ಇದ್ದರೆ ರೈಡ್ ಮಾಡ್ತೀವಿ ಎಂದು ಹೇಳಿ ಕೇಸು ಹಾಕಿಸಿ, ಬಳಿಕ ಹಣ ಕೊಟ್ಟ ಮೇಲೆ ಕೇಸನ್ನು ಮುಚ್ಚಿ ಹಾಕಿದ್ದಾರೆ. ಇದನ್ನೆಲ್ಲ ದೇಶದ ಜನರು ನೋಡುತ್ತಿದ್ದು, ಈ ಬಾರಿ ಉತ್ತರ ನೀಡಲಿದ್ದಾರೆ. ಈ ಸಲದ ಚುನಾವಣೆ ಅತ್ಯಂತ ಅಸಮಂಜಸ ಸ್ಥಿತಿಯಲ್ಲಿ ನಡೆಯುತ್ತಿದ್ದು, ಈ ಹಿಂದೆ ಯಾವತ್ತೂ ಈ ರೀತಿ ಆಗಿದ್ದು ಇಲ್ಲ.
ಕಾಂಗ್ರೆಸಿಗೆ ರಾಜ್ಯದಲ್ಲಿ ಸಿದ್ದರಾಮಯ್ಯ ಸರಕಾರದ ಕೆಲಸಗಳು ಮತ್ತು ಗ್ಯಾರಂಟಿ ಯೋಜನೆಗಳೇ ಶ್ರೀರಕ್ಷೆ. ಗ್ಯಾರಂಟಿ ಯೋಜನೆಯ ಲಾಭ ಪಡೆದವರು ನಮ್ಮ ಕೈಹಿಡಿಯಲಿದ್ದಾರೆ. ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಮೇಲೆ ವಿಶ್ವಾಸ, ನಂಬಿಕೆ ಬಂದಿದೆ. ಬಿಜೆಪಿಯವರು ಗ್ಯಾರಂಟಿ ಭರವಸೆಗಳನ್ನು ಹೇಳಿದ್ದು ಬಿಟ್ಟರೆ ಉಳಿಸಿಕೊಂಡಿಲ್ಲ.
ವರ್ಷಕ್ಕೆ ಎರಡು ಕೋಟಿ ಉದ್ಯೋಗ ಎಂದಿದ್ದನ್ನು ಮಾಡಿದ್ದಾರೆಯೇ.. ಡಾಲರಿಗೆ 45 ರೂಪಾಯಿ ಮಾಡ್ತೀವಿ ಎಂದಿದ್ದರು, ಈಗ ಡಾಲರಿಗೆ 83 ರೂ. ಆಗಿದೆ. ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಎಂದಿದ್ದರು. ರೈತರ ಸ್ಥಿತಿ ಏನಾಗಿದೆ, ಇವರು ಯಾವ್ದಾದ್ರೂ ಹೇಳಿದ್ದನ್ನು ಮಾಡಿದ್ದು ಇದೆಯೇ.. ಬಿಜೆಪಿ ಗ್ಯಾರಂಟಿಗೆ ಬೆಲೆ ಇಲ್ಲ, ಕಾಂಗ್ರೆಸ್ ಗ್ಯಾರಂಟಿಗೆ ಬೆಲೆ ಇದೆ ಎಂದು ಹೇಳಿದರು. ನಿನ್ನೆ ಅಮಿತ್ ಷಾ ಬಂದು ಸುಳ್ಳನ್ನೇ ಹೇಳಿಕೊಂಡು ಹೋಗಿದ್ದಾರೆ. ಬರ ಪರಿಹಾರ ಕೊಡದೆ ಸುಳ್ಳು ಹೇಳಿ ನಂಬಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.
Mangalore Dinesh Gundu Rao says no guarantee works of BJP, no worth BJP gaurnatees in state, only congress gaurnatees are worth he slammed speaking to media persons in Mangalore.
09-06-25 12:35 pm
Bangalore Correspondent
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm