ಬ್ರೇಕಿಂಗ್ ನ್ಯೂಸ್
05-04-24 01:53 pm Mangalore Correspondent ಕರಾವಳಿ
ಮಂಗಳೂರು, ಏ.5 : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು ದಕ್ಷಿಣ ಕನ್ನಡ ಜಿಲ್ಲೆಗೆ ಚುನಾವಣಾ ವೀಕ್ಷಕರಾಗಿ ಐಎಎಸ್ ಅಧಿಕಾರಿ ಕು. ಆಕಾಂಕ್ಷಾ ರಂಜನ್ ಅವರನ್ನು ನೇಮಿಸಿದ್ದು ಅವರು ಜಿಲ್ಲೆಗೆ ಆಗಮಿಸಿದ್ದಾರೆ.
ಚುನಾವಣಾ ಸಾಮಾನ್ಯ ವೀಕ್ಷಕರು, ಅಭ್ಯರ್ಥಿ ಹಾಗೂ ರಾಜಕೀಯ ಪಕ್ಷಗಳ ಚುನಾವಣಾ ಪ್ರಕ್ರಿಯೆ ಮೇಲೆ ನಿಗಾ ಇಡಲಿದ್ದು, ಅಭ್ಯರ್ಥಿ ಹಾಗೂ ರಾಜಕೀಯ ಪಕ್ಷಗಳ ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ದೂರು ಅಥವಾ ಅಹವಾಲು ಇದ್ದಲ್ಲಿ ಸಾರ್ವಜನಿಕರು ಸಾಮಾನ್ಯ ವೀಕ್ಷಕರಿಗೆ ಸಲ್ಲಿಸಬಹುದಾಗಿದೆ.

ಅವರ ಸಂಪರ್ಕ ವಿವರ ಇಂತಿದೆ: ಅವರ ಮೊಬೈಲ್ ಸಂಖ್ಯೆ- 9482698817. ಸ್ಥಿರ ದೂರವಾಣಿ- 0824-2001594. ಇಮೇಲ್ ವಿಳಾಸ: generalobserverdk17@gmail.com ಆಗಿದ್ದು ಚುನಾವಣಾ ಸಾಮಾನ್ಯ ವೀಕ್ಷಕರು ಕೇಂದ್ರ ಸ್ಥಾನದಲ್ಲಿ ಇರುವ ಸಂದರ್ಭದಲ್ಲಿ ಬೆಳಿಗ್ಗೆ 10 ರಿಂದ 11 ಗಂಟೆಯ ವರೆಗೆ ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಸಾರ್ವಜನಿಕರ ಸೇವೆಗೆ ಲಭ್ಯವಿರುತ್ತಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಮಾನ್ಯ ವೀಕ್ಷಕರಾದ ಕು. ಆಕಾಂಕ್ಷಾ ರಂಜನ್ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣಾ ಸಮಿತಿ ಹಾಗೂ ಸಾಮಾಜಿಕ ಜಾಲತಾಣ ನಿರ್ವಹಣಾ ಸಮಿತಿ ಕಚೇರಿಗೆ ಭೇಟಿ ನೀಡಿ, ಅಲ್ಲಿನ ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸಿ, ಕೆಲವು ಸಲಹೆ ಸೂಚನೆಗಳನ್ನು ನೀಡಿದರು.
ಪೊಲೀಸ್ ವೀಕ್ಷಕರಾಗಿ ಬಿನಿತಾ ಠಾಕೂರ್
ಇದೇ ವೇಳೆ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಪೊಲೀಸ್ ವೀಕ್ಷಕರಾಗಿ ಶ್ರೀಮತಿ ಬಿನಿತಾ ಠಾಕೂರ್ ಅವರನ್ನು ಕೇಂದ್ರ ಚುನಾವಣಾ ಆಯೋಗ ನಿಯೋಜಿಸಿದೆ. ಅವರನ್ನು ಸಾರ್ವಜನಿಕರು ಮೊಬೈಲ್ ಸಂಖ್ಯೆ: 9483651817, ಸ್ಥಿರ ದೂರವಾಣಿ ಸಂಖ್ಯೆ 0824- 2001597.
ಇ-ಮೇಲ್: policeobserverdk17@gmail.com ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Dakshina Kannada Akanksha Ranjan appointed as Election Observer, Binita Thakur as Police Observer in Mangalore
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm