ಬ್ರೇಕಿಂಗ್ ನ್ಯೂಸ್
10-04-24 12:49 pm Mangalore Correspondent ಕರಾವಳಿ
ಮಂಗಳೂರು, ಎ.10: ಎಪ್ರಿಲ್ 14ರಂದು ಮಂಗಳೂರಿನಲ್ಲಿ ಆಯೋಜಿಸಿದ್ದ ಪ್ರಧಾನಿ ಮೋದಿಯವರ ಬೃಹತ್ ಸಮಾವೇಶವನ್ನು ಕೊನೆಕ್ಷಣದಲ್ಲಿ ರದ್ದು ಪಡಿಸಲಾಗಿದೆ. ಅದರ ಬದಲು ಮಂಗಳೂರು ನಗರದಲ್ಲಿ ಕೇವಲ ರೋಡ್ ಶೋ ನಡೆಸುವುದಕ್ಕೆ ಸಿದ್ಧತೆ ನಡೆಸಲಾಗಿದೆ.
ಕುಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸುವುದಕ್ಕೆ ಸಿದ್ಧತೆ ನಡೆಸಲಾಗಿತ್ತು. ಇಂದು ಬೆಳಗ್ಗೆ ಮೈದಾನದಲ್ಲಿ ಚಪ್ಪರ ಮುಹೂರ್ತವನ್ನೂ ನಡೆಸಲಾಗಿತ್ತು. ಜರ್ಮನ್ ನಿರ್ಮಿತ ಬೃಹತ್ ಪೆಂಡಾಲ್ ಹಾಕಲು ಸಿದ್ಧತೆ ನಡೆಸಲಾಗಿತ್ತು. ಇದರ ಬೆನ್ನಲ್ಲೇ ತಾಂತ್ರಿಕ ಕಾರಣದಿಂದಾಗಿ ಬೃಹತ್ ಸಮಾವೇಶ ನಡೆಸುವುದನ್ನು ರದ್ದು ಪಡಿಸಲಾಗಿದೆ.

ಸಮಾವೇಶ ನಡೆಸುವ ಬದಲು ಕೇವಲ ರೋಡ್ ಶೋ ನಡೆಸುವುದಕ್ಕೆ ಆದ್ಯತೆ ನೀಡಲಾಗಿದೆ. ಮಂಗಳೂರಿನಲ್ಲಿ ರೋಡ್ ಶೋ ನಡೆಸುವುದಕ್ಕೆ ಎಸ್ ಪಿಜಿ ಭದ್ರತೆ ಪರಿಶೀಲಿಸಿದ ನಂತರವೇ ಯಾವ ರಸ್ತೆಯಲ್ಲಿ ರೋಡ್ ಶೋ ನಡೆಸುವುದೆಂದು ನಿರ್ಧಾರ ಮಾಡಬೇಕಾಗುತ್ತದೆ. ಏರ್ಪೋರ್ಟ್ ರಸ್ತೆಯಲ್ಲೇ ಮಂಗಳೂರು ನಗರದ ವರೆಗೆ ರೋಡ್ ಶೋ ನಡೆಸುತ್ತಾರೆಯೇ ಅಥವಾ ಮಂಗಳೂರು ನಗರದ ಒಳಭಾಗದ ನೆಹರು ಮೈದಾನದ ಆಸುಪಾಸಿನಲ್ಲಿ ರೋಡ್ ಶೋ ನಡೆಸುತ್ತಾರೆಯೇ ಅನ್ನುವುದು ನಿರ್ಧಾರ ಆಗಿಲ್ಲ.
ಭದ್ರತೆಯ ಕಾರಣಕ್ಕೆ ಪ್ರಧಾನಿ ಮೋದಿ ಆಯಕಟ್ಟಿನ ರಸ್ತೆಗಳಲ್ಲಿ ಬರುವುದಕ್ಕೆ ಎಸ್ ಪಿಜಿ ಅವಕಾಶ ನೀಡುವುದಿಲ್ಲ. ರಾಷ್ಟ್ರೀಯ ಹೆದ್ದಾರಿಯಲ್ಲಿ ರೋಡ್ ಶೋ ನಡೆಸುವುದಕ್ಕೂ ಅವಕಾಶ ಇರುವುದಿಲ್ಲ. ಹೀಗಾಗಿ ರೋಡ್ ಶೋವನ್ನು ಯಾವ ರಸ್ತೆಯಲ್ಲಿ ಮತ್ತು ಎಷ್ಟು ಹೊತ್ತಿಗೆ ಮಾಡಲಿದ್ದಾರೆ ಎನ್ನುವುದು ಇನ್ನೂ ನಿರ್ಧಾರವಾಗಿಲ್ಲ. ಸದ್ಯಕ್ಕೆ ಕುಳೂರು ಮೈದಾನದಲ್ಲಿ ನಡೆಯುವ ಸಮಾವೇಶ ರದ್ದುಪಡಿಸಲಾಗಿದೆ ಎನ್ನುವ ಮಾಹಿತಿ ಬಿಜೆಪಿ ಮೂಲಗಳಿಂದ ತಿಳಿದುಬಂದಿದೆ.
PM Modi Public program cancelled in Mangalore, only road show to be held on April 14th. Road show place yet to be decided by the SGP team who will arrive to Mangalore.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm