ಬ್ರೇಕಿಂಗ್ ನ್ಯೂಸ್
10-04-24 07:23 pm Mangalore Correspondent ಕರಾವಳಿ
ಮಂಗಳೂರು, ಎ.10: ಎಪ್ರಿಲ್ 14ರಂದು ಪ್ರಧಾನಿ ಮೋದಿ ಮಂಗಳೂರಿಗೆ ಆಗಮಿಸಲಿದ್ದು, ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಮಂಗಳೂರು ನಗರದ ನಾರಾಯಣ ಗುರು ಸರ್ಕಲ್ ನಿಂದ ಲಾಲ್ ಬಾಗ್, ಪಿವಿಎಸ್ ವೃತ್ತದ ಮೂಲಕ ನವಭಾರತ್ ಸರ್ಕಲ್ ಆಗಿ ಹಂಪನಕಟ್ಟೆಯ ವರೆಗೆ ರೋಡ್ ಶೋ ನಡೆಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ.
ಕುಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಮೋದಿ ಸಮಾವೇಶ ನಡೆಸುವುದೆಂದು ಈ ಹಿಂದೆ ನಿರ್ಧರಿಸಲಾಗಿತ್ತು. ಆದರೆ ಕೊನೆಕ್ಷಣದಲ್ಲಿ ಸಮಾವೇಶ ರದ್ದುಪಡಿಸಿದ್ದು ಮಂಗಳೂರಿನಲ್ಲಿ ರೋಡ್ ಶೋ ನಡೆಸಲು ನಿರ್ಧರಿಸಲಾಗಿದೆ. ಮಂಗಳೂರು ನಗರದ ಉರ್ವಾ ಬಳಿಯ ನಾರಾಯಣ ಗುರು ಸರ್ಕಲ್ ನಲ್ಲಿ ನಾರಾಯಣ ಗುರುಗಳ ಪ್ರತಿಮೆಗೆ ಅಂದು ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಮಾಲಾರ್ಪಣೆ ಮಾಡಲಿದ್ದಾರೆ. ಆನಂತರ, ತೆರೆದ ವಾಹನದಲ್ಲಿ ರೋಡ್ ಶೋ ನಡೆಸಲಿದ್ದಾರೆ ಎಂದು ಸತೀಶ್ ಕುಂಪಲ ತಿಳಿಸಿದ್ದಾರೆ.
ಎರಡೂವರೆ ಕಿಮೀ ಉದ್ದಕ್ಕೆ ರೋಡ್ ಶೋ ನಡೆಸುವ ಬಗ್ಗೆ ನಾವು ಕೇಂದ್ರ ಬಿಜೆಪಿ ಕಮಿಟಿಗೆ ಅಹವಾಲು ಕಳಿಸಿದ್ದೇವೆ. ಎಸ್ ಪಿಜಿ ಭದ್ರತಾ ವಿಭಾಗವು ಇಲ್ಲಿನ ಪರಿಸ್ಥಿತಿ ನೋಡಿಕೊಂಡು ಎಷ್ಟು ಉದ್ದಕ್ಕೆ ರೋಡ್ ಶೋ ನಡೆಸುವುದೆಂದು ನಿರ್ಧರಿಸಲಿದ್ದಾರೆ ಎಂದು ಸತೀಶ್ ಕುಂಪಲ ಹೇಳಿದ್ದಾರೆ. ಲಾಲ್ ಬಾಗ್, ಬಳ್ಳಾಲ್ ಬಾಗ್ ರಸ್ತೆಯಲ್ಲಿ ರೋಡ್ ಶೋ ನಡೆಸಿದರೆ ಅತಿ ಹೆಚ್ಚು ಜನ ಸೇರುವುದಕ್ಕೆ ಅವಕಾಶ ಇರಲಿದ್ದು ಭಾರೀ ಸಂಖ್ಯೆಯಲ್ಲಿ ಜನರನ್ನು ಸೇರಿಸಲು ಬಿಜೆಪಿ ಪ್ಲಾನ್ ಮಾಡಿಕೊಂಡಿದೆ.
Modi road show on April 14 at 5 pm in mangalore. Initially, it was planned to hold Vijaya Sankalpa Samavesha at Gold Finch City at Kuloor. However, the convention has been cancelled and a road show will be organised in the city.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm