ಬ್ರೇಕಿಂಗ್ ನ್ಯೂಸ್
10-04-24 08:56 pm Mangalore Correspondent ಕರಾವಳಿ
ಉಳ್ಳಾಲ, ಎ.10: ಯಾವುದೇ ಧರ್ಮದ ಹಬ್ಬಗಳ ಆಚರಣೆಯಿಂದ ನಮ್ಮನ್ನ ನಾವು ತಿದ್ದಿಕೊಳ್ಳುವಂತಾಗಬೇಕು. ಹಬ್ಬಗಳ ಸಂಭ್ರಮವನ್ನ ಸಮಾಜದ ಎಲ್ಲಾ ವರ್ಗದವರು ಅನುಭವಿಸುವಂತಾಗಬೇಕೆಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅಭಿಪ್ರಾಯಪಟ್ಟರು.
ತೊಕ್ಕೊಟ್ಟಿನ "ಹೆಲ್ಫ್ ಇಂಡಿಯಾ ಫೌಂಡೇಷನ್" ವತಿಯಿಂದ ಉಳ್ಳಾಲ ತಾಲೂಕಿನ ಸೋಮೇಶ್ವರದ ಪಶ್ಚಿಮ್ ರಿಹ್ಯಾಬ್ ಸೆಂಟರಿನಲ್ಲಿ ಬುಧವಾರ ನಡೆದ ಈದ್ ಹಬ್ಬದ ಸಂಭ್ರಮಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮನುಷ್ಯನಾಗಿ ಹುಟ್ಟಿದ ಪ್ರತಿಯೊಬ್ಬರೂ ಒಂದಲ್ಲ ಒಂದು ಸಮಸ್ಯೆಯಿಂದ ಬಳಲುತ್ತಿರುವವರೇ ಆಗಿದ್ದಾರೆ. ಈ ಪುನಶ್ಚೇತನ ಕೇಂದ್ರಕ್ಕೆ ಯಾವುದೋ ಚಿಂತೆ, ಸಮಸ್ಯೆಯಿಂದ ಬಂದಿರೋ ನೀವೆಲ್ಲರೂ ಶೀಘ್ರ ಗುಣಮುಖರಾಗಿ ಸಮಾಜದ ಮುಖ್ಯ ವಾಹಿನಿಯಲ್ಲಿ ಎಲ್ಲರೊಂದಿಗೆ ಬೆರೆತು ಬಾಳುವಂತಾಗಬೇಕು. ನಿಮ್ಮೊಂದಿಗೆ ಈದ್ ಹಬ್ಬದ ಸಂಭ್ರಮ ಹಂಚಲು ಅವಕಾಶ ಮಾಡಿಕೊಟ್ಟ ಹೆಲ್ಫ್ ಇಂಡಿಯಾ ಫೌಂಡೇಷನ್ ಕಾರ್ಯ ಶ್ಲಾಘನೀಯ ಎಂದರು.
ಈದ್ ಹಬ್ಬದ ಪ್ರಯುಕ್ತ ಆಶ್ರಮವಾಸಿಗಳೆಲ್ಲರಿಗೂ ಬಿರಿಯಾನಿ ಊಟವನ್ನು ಖಾದರ್ ಹಂಚಿದರು. ನಮ್ಮ ಟಿ.ವಿ ವಾಹಿನಿಯ ನಿರ್ದೇಶಕರಾದ ಡಾ.ಶಿವಶರಣ್ ಶೆಟ್ಟಿ, ಉದ್ಯಮಿ ಬಶೀರ್, ಡಾ.ಜಮಾಲ್, ಉಳ್ಳಾಲ ನಗರಸಭಾ ಸದಸ್ಯ ಅಝೀಝ್, ಪಶ್ಚಿಮ್ ರಿಹ್ಯಾಬ್ ಸೆಂಟರ್ ನ ವ್ಯವಸ್ಥಾಪಕರಾದ ರೋಹಿತ್ ಸಾಂಕ್ಟಸ್, ಹೆಲ್ಫ್ ಇಂಡಿಯಾ ಫೌಂಡೇಷನ್ ಸ್ಥಾಪಕರಾದ ರಾಝಿಕ್ ಉಳ್ಳಾಲ್, ಪ್ರಮುಖರಾದ ಝಾಕಿರ್ ಇಕ್ಲಾಸ್ ಮೊದಲಾದವರು ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ಯು.ಟಿ ಖಾದರ್ ಅವರು ದಕ್ಷಿಣದ ಅಜ್ಮೀರ್ ಖ್ಯಾತಿಯ ಉಳ್ಳಾಲ ದರ್ಗಾಕ್ಕೆ ತೆರಳಿ ಈದ್ ಹಬ್ಬದ ಪ್ರಯುಕ್ತ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಉಳ್ಳಾಲ ದರ್ಗಾ ಅಧ್ಯಕ್ಷರಾದ ಹಾಜಿ ಬಿ.ಜಿ.ಹನೀಫ್, ಉಪಾಧ್ಯಕ್ಷರಾದ ಅಶ್ರಫ್ ಅಹ್ಮದ್ ರೈಟ್ ವೇ ಅವರು ಖಾದರ್ ಅವರನ್ನ ಸ್ವಾಗತಿಸಿದರು.
Speaker mla UT Khader celebrates eid at orphanage centre at Thokottu in Mangalore.
11-08-25 11:01 pm
Bangalore Correspondent
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
Forced Marriage, Chitradurga: ನನಗಿನ್ನೂ ಹದಿನಾರ...
11-08-25 11:18 am
ಮುಸ್ಲಿಂ ಯುವತಿಯರನ್ನ ಮದುವೆಯಾದ್ರೆ 5 ಲಕ್ಷ ರೂ. ಕೊಡ...
10-08-25 09:12 pm
11-08-25 08:55 pm
HK News Desk
Rabies Death, Supreme Court: ರಾಜಧಾನಿಯಲ್ಲಿ ರೇಬ...
11-08-25 02:48 pm
ಭಾರತದ ವಿರುದ್ಧ ಟ್ರಂಪ್ ಸುಂಕಾಸ್ತ್ರಕ್ಕೆ ಅಮೆರಿಕದ ತ...
09-08-25 11:09 pm
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
11-08-25 07:39 pm
Mangalore Correspondent
Padmalatha Murder Case, Dharmasthala, SIT: 19...
11-08-25 03:33 pm
Ground Penetrating Radar, Dharmasthala: ಧರ್ಮಸ...
11-08-25 11:49 am
Kudla Rampage YouTuber, Ajay Anchan Case: ಬೈಕ...
11-08-25 11:38 am
ಹೊಸ್ತಿಲು ಬರೆದು, ಪಾತ್ರೆ ತೊಳೆದು, ದೇವರ ಸ್ತೋತ್ರ ಹ...
10-08-25 04:32 pm
11-08-25 12:37 pm
Mangalore Correspondent
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm