ಬ್ರೇಕಿಂಗ್ ನ್ಯೂಸ್
10-04-24 08:56 pm Mangalore Correspondent ಕರಾವಳಿ
ಉಳ್ಳಾಲ, ಎ.10: ಯಾವುದೇ ಧರ್ಮದ ಹಬ್ಬಗಳ ಆಚರಣೆಯಿಂದ ನಮ್ಮನ್ನ ನಾವು ತಿದ್ದಿಕೊಳ್ಳುವಂತಾಗಬೇಕು. ಹಬ್ಬಗಳ ಸಂಭ್ರಮವನ್ನ ಸಮಾಜದ ಎಲ್ಲಾ ವರ್ಗದವರು ಅನುಭವಿಸುವಂತಾಗಬೇಕೆಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅಭಿಪ್ರಾಯಪಟ್ಟರು.
ತೊಕ್ಕೊಟ್ಟಿನ "ಹೆಲ್ಫ್ ಇಂಡಿಯಾ ಫೌಂಡೇಷನ್" ವತಿಯಿಂದ ಉಳ್ಳಾಲ ತಾಲೂಕಿನ ಸೋಮೇಶ್ವರದ ಪಶ್ಚಿಮ್ ರಿಹ್ಯಾಬ್ ಸೆಂಟರಿನಲ್ಲಿ ಬುಧವಾರ ನಡೆದ ಈದ್ ಹಬ್ಬದ ಸಂಭ್ರಮಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮನುಷ್ಯನಾಗಿ ಹುಟ್ಟಿದ ಪ್ರತಿಯೊಬ್ಬರೂ ಒಂದಲ್ಲ ಒಂದು ಸಮಸ್ಯೆಯಿಂದ ಬಳಲುತ್ತಿರುವವರೇ ಆಗಿದ್ದಾರೆ. ಈ ಪುನಶ್ಚೇತನ ಕೇಂದ್ರಕ್ಕೆ ಯಾವುದೋ ಚಿಂತೆ, ಸಮಸ್ಯೆಯಿಂದ ಬಂದಿರೋ ನೀವೆಲ್ಲರೂ ಶೀಘ್ರ ಗುಣಮುಖರಾಗಿ ಸಮಾಜದ ಮುಖ್ಯ ವಾಹಿನಿಯಲ್ಲಿ ಎಲ್ಲರೊಂದಿಗೆ ಬೆರೆತು ಬಾಳುವಂತಾಗಬೇಕು. ನಿಮ್ಮೊಂದಿಗೆ ಈದ್ ಹಬ್ಬದ ಸಂಭ್ರಮ ಹಂಚಲು ಅವಕಾಶ ಮಾಡಿಕೊಟ್ಟ ಹೆಲ್ಫ್ ಇಂಡಿಯಾ ಫೌಂಡೇಷನ್ ಕಾರ್ಯ ಶ್ಲಾಘನೀಯ ಎಂದರು.



ಈದ್ ಹಬ್ಬದ ಪ್ರಯುಕ್ತ ಆಶ್ರಮವಾಸಿಗಳೆಲ್ಲರಿಗೂ ಬಿರಿಯಾನಿ ಊಟವನ್ನು ಖಾದರ್ ಹಂಚಿದರು. ನಮ್ಮ ಟಿ.ವಿ ವಾಹಿನಿಯ ನಿರ್ದೇಶಕರಾದ ಡಾ.ಶಿವಶರಣ್ ಶೆಟ್ಟಿ, ಉದ್ಯಮಿ ಬಶೀರ್, ಡಾ.ಜಮಾಲ್, ಉಳ್ಳಾಲ ನಗರಸಭಾ ಸದಸ್ಯ ಅಝೀಝ್, ಪಶ್ಚಿಮ್ ರಿಹ್ಯಾಬ್ ಸೆಂಟರ್ ನ ವ್ಯವಸ್ಥಾಪಕರಾದ ರೋಹಿತ್ ಸಾಂಕ್ಟಸ್, ಹೆಲ್ಫ್ ಇಂಡಿಯಾ ಫೌಂಡೇಷನ್ ಸ್ಥಾಪಕರಾದ ರಾಝಿಕ್ ಉಳ್ಳಾಲ್, ಪ್ರಮುಖರಾದ ಝಾಕಿರ್ ಇಕ್ಲಾಸ್ ಮೊದಲಾದವರು ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ಯು.ಟಿ ಖಾದರ್ ಅವರು ದಕ್ಷಿಣದ ಅಜ್ಮೀರ್ ಖ್ಯಾತಿಯ ಉಳ್ಳಾಲ ದರ್ಗಾಕ್ಕೆ ತೆರಳಿ ಈದ್ ಹಬ್ಬದ ಪ್ರಯುಕ್ತ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಉಳ್ಳಾಲ ದರ್ಗಾ ಅಧ್ಯಕ್ಷರಾದ ಹಾಜಿ ಬಿ.ಜಿ.ಹನೀಫ್, ಉಪಾಧ್ಯಕ್ಷರಾದ ಅಶ್ರಫ್ ಅಹ್ಮದ್ ರೈಟ್ ವೇ ಅವರು ಖಾದರ್ ಅವರನ್ನ ಸ್ವಾಗತಿಸಿದರು.
Speaker mla UT Khader celebrates eid at orphanage centre at Thokottu in Mangalore.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm