Mangalore Panambur beach: ಪಣಂಬೂರು ಕಡಲ ಕಿನಾರೆಯಲ್ಲಿ ಮತದಾನ ಜಾಗೃತಿ ; ಜಿಪಂ ಸಿಇಓ, ಎಸ್ಪಿ, ಪಾಲಿಕೆ ಕಮಿಷನರ್ ಪ್ಯಾರಾಸೈಲಿಂಗ್, ಬೋಟ್ ರೈಡ್ ! 

10-04-24 09:28 pm       Mangalore Correspondent   ಕರಾವಳಿ

ಇದೇ ಎ.26ರಂದು ನಡೆಯುವ ಲೋಕಸಭೆ ಸಾರ್ವತ್ರಿಕ ಚುನಾವಣೆಯನ್ನು ಹಬ್ಬದ ರೀತಿಯಲ್ಲಿ ಸಂಭ್ರಮದಿಂದ ಆಚರಿಸುವಂತೆ ಚುನಾವಣಾ ಆಯೋಗ ನೀಡಿರುವ ಸಲಹೆಯಂತೆ ಮಂಗಳೂರಿನ ಪಣಂಬೂರು ಬೀಚ್ ನಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಿದರು.

ಮಂಗಳೂರು, ಏ.10: ಇದೇ ಎ.26ರಂದು ನಡೆಯುವ ಲೋಕಸಭೆ ಸಾರ್ವತ್ರಿಕ ಚುನಾವಣೆಯನ್ನು ಹಬ್ಬದ ರೀತಿಯಲ್ಲಿ ಸಂಭ್ರಮದಿಂದ ಆಚರಿಸುವಂತೆ ಚುನಾವಣಾ ಆಯೋಗ ನೀಡಿರುವ ಸಲಹೆಯಂತೆ ಮಂಗಳೂರಿನ ಪಣಂಬೂರು ಬೀಚ್ ನಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಿದರು. ‌

ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮಂಗಳೂರಿನ ಪಣಂಬೂರ್ ಬೀಚ್ ನಲ್ಲಿ ಮತದಾನ ಜಾಗೃತಿ ಕುರಿತು ಆಯೋಜಿಸಿದ್ದ ಪಾರಾಸೈಲಿಂಗ್, ಜಟ್ ಸ್ಕೀ ರೈಡ್, ಪಾರಾಸೈಲಿಂಗ್ ಡೀಪಿಂಗ್ ಬೋಟ್ ರೈಡ್, ಬನಾನಾ ರೈಡ್ ಅನ್ನು ಸ್ವತಃ ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ತಂಡದ ನೋಡಲ್ ಅಧಿಕಾರಿಯೂ‌‌ ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆನಂದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ., ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಕಡಲ ಕಿನಾರೆಯಲ್ಲಿ ಮತದಾನದ ಫಲಕ ಹಿಡಿದು ಜಾಗೃತಿ ಮೂಡಿಸಿದರು. ಪ್ರೊಬೇಷನರಿ ಐಎಎಸ್ ಅಧಿಕಾರಿ ಮುಕುಲ್ ಜೈನ್ ಸಹ ಇದ್ದರು.

ರಜೆ ನಿಮಿತ್ತ ಬೀಚ್ ನಲ್ಲಿ ಸೇರಿದ್ದ 1000 ಕ್ಕೂ ಅಧಿಕ ಮಂದಿ ಕಾರ್ಯಕ್ರಮ ವೀಕ್ಷಿಸಿದರು. ಕಾರ್ಯಕ್ರಮದಲ್ಲಿ ಮತದಾನ ಜಾಗೃತಿ ಫಲಕಗಳನ್ನು ಅಳವಡಿಸಲಾಗಿತ್ತು, ನನ್ನ ಮತ ನನ್ನ ಹೆಮ್ಮೆ , ಚುನಾವಣಾ ಪರ್ವ ದೇಶದ ಗರ್ವ ಸ್ಲೋಗನ್ ಗಳನ್ನು ಕೂಗಲಾಯಿತು. ಜಿಲ್ಲೆಯ ಬುದ್ಧಿವಂತ ಮತದಾರರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ಬರಬೇಕು ಎನ್ನುವ ಉದ್ದೇಶದಿಂದ ಭಿನ್ನ ರೀತೀಯಲ್ಲಿ ಮತದಾರರನ್ನು ಸೆಳೆಯುವ ಸಲುವಾಗಿ ಭಿನ್ನ ಭಿನ್ನ ಆಲೋಚನೆಗಳ ಮೂಲಕ ಮತದಾನದ ಅರಿವು ಮೂಡಿಸಲಾಗುತ್ತಿದೆ ಎಂದು ಜಿ.ಪಂ. ಸಿಇಓ‌ ಡಾ. ಆನಂದ ಕೆ. ಅವರು ತಿಳಿಸಿದರು.

Election campaign at panambur beach in Mangalore, SP Dakshina Kannada Rishyanth Makes boat ride along with Mangalore City corporation commissioner.