ಬ್ರೇಕಿಂಗ್ ನ್ಯೂಸ್
30-11-20 07:16 pm Mangaluru Correspondent ಕರಾವಳಿ
ಮಂಗಳೂರು, ನ.30: ಸ್ಮಾರ್ಟ್ ಸಿಟಿ ಯೋಜನೆಯಡಿ 17 ಕೋಟಿ ರೂ. ವೆಚ್ಚದಲ್ಲಿ ರಥಬೀದಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳು ಬಹುತೇಕ ಪೂರ್ಣಗೊಂಡಿದೆ. ಹಾಗಾಗಿ (ಡಿ.1) ನಾಳೆಯಿಂದ ದ್ವಿಚಕ್ರ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.
ಸ್ಮಾರ್ಟ್ ಸಿಟಿ ಅಧಿಕಾರಿಗಳೊಂದಿಗೆ ಕಾಮಗಾರಿ ವೀಕ್ಷಣೆಗೆ ಮಾಡಿದ ಅವರು, ರಸ್ತೆ ಕಾಂಕ್ರೀಟೀಕರಣ ಬಹುತೇಕ ಪೂರ್ಣಗೊಂಡಿದೆ. ಚರಂಡಿ ಹಾಗೂ ಮೆಸ್ಕಾಂ ಸಂಬಂಧಪಟ್ಟ ಕಾಮಗಾರಿಗಳು ಪೂರ್ಣಗೊಳಿಸುವುದು ಬಾಕಿಯುಳಿದಿದೆ. ಹಾಗಾಗಿ ಸಾರ್ವಜನಿಕರು ಹಾಗೂ ಸ್ಥಳೀಯ ವ್ಯಾಪಾರಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ದ್ವಿಚಕ್ರ ವಾಹನಗಳ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗುವುದು ಎಂದರು.

ಪರಿಸರದ ಜನರು ಕಾಮಗಾರಿ ವೇಳೆ ಮುಕ್ತ ಮನಸ್ಸಿನಿಂದ ಸಹಕರಿಸಿದ್ದಾರೆ. ಸಾರ್ವಜನಿಕರ ಸಹಕಾರದಿಂದ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಸಾಧ್ಯವಾಗಿದೆ. ಬಾಕಿ ಉಳಿದಿರುವ ಮೆಸ್ಕಾಂ ಹಾಗೂ ಚರಂಡಿ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ಆದಷ್ಟು ಬೇಗ ಉಳಿದ ಕಾಮಗಾರಿ ಪೂರ್ಣಗೊಳಿಸಿ ಒಂದು ವಾರದೊಳಗೆ ಎಲ್ಲಾ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಈ ವೇಳೆ ಸ್ಥಳೀಯ ಮನಪಾ ಸದಸ್ಯೆ ಹಾಗೂ ಆರೋಗ್ಯ ಸ್ಥಾಯಿ ಸಮಿತಿ ಅದ್ಯಕ್ಷೆ ಪೂರ್ಣಿಮಾ, ಬಿಜೆಪಿ ಮುಖಂಡರಾದ ಮುರಲೀಧರ್ ನಾಯಕ್, ರಮೇಶ್ ಹೆಗ್ಡೆ, ಹರಿ ಪ್ರಸಾದ್, ನಾಗರಿಕ ಹಿತ ರಕ್ಷಣಾ ಸಮಿಯ ಅಧ್ಯಕ್ಷ ಹನುಮಂತ ಕಾಮತ್, ಸ್ಮಾರ್ಟಿ ಸಿಟಿ ಅಧಿಕಾರಿಗಳಾದ ಲಿಂಗೇಗೌಡ, ಅರುಣ ಪ್ರಭಾ ಉಪಸ್ಥಿತರಿದ್ದರು.
Two-wheeler movement allowed in Car Street, Mangalore from Dec 1 and all kinds of vehicular movement will be allowed within a week said MLA Vedavyasa Kamath.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm