ಬ್ರೇಕಿಂಗ್ ನ್ಯೂಸ್
12-04-24 10:35 pm Mangaluru Correspondent ಕರಾವಳಿ
ಮಂಗಳೂರು, ಎ.12: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಪೊಳಲಿ ರಾಜರಾಜೇಶ್ವರಿ ದೇವಿಯ ಅಭಯ ಸಿಕ್ಕಿದೆ. ಇದಕ್ಕೆ ಸಾಕ್ಷಿಯೆಂಬಂತೆ, ದೇವರ ಗರ್ಭಗುಡಿಯ ಮುಂದೆ ಪ್ರಾರ್ಥನೆ ನೆರವೇರಿಸುತ್ತಿದ್ದಾಗ ಅಕಸ್ಮಾತ್ ಮೇಲಿನಿಂದ ಹೂವೊಂದು ಬ್ರಿಜೇಶ್ ಚೌಟ ಹಿಡಿದುಕೊಂಡಿದ್ದ ಪ್ರಸಾದದ ತಟ್ಟೆಗೆ ಬಿದ್ದಿರುವ ವಿಡಿಯೋ ಈಗ ಭಾರೀ ವೈರಲ್ ಆಗುತ್ತಿದೆ.
ಪೊಳಲಿ ದೇವಸ್ಥಾನದಲ್ಲಿ ತಿಂಗಳ ಪರ್ಯಂತ ನಡೆದ ವಾರ್ಷಿಕ ಉತ್ಸವದ ಕೊನೆಯಲ್ಲಿ ರಥೋತ್ಸವ ನಡೆಯುತ್ತದೆ. ಎಪ್ರಿಲ್ 11ರಂದು ರಥೋತ್ಸವ ನಡೆಯುವುದಕ್ಕೂ ಮುನ್ನ ಬ್ರಿಜೇಶ್ ಚೌಟ ದೇವಿಯ ಸನ್ನಿಧಿಗೆ ತೆರಳಿದ್ದು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಜೊತೆಗೆ ನಿಂತು ದೇವರಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ವೇಳೆ, ಅರ್ಚಕರು ಹೂವಿನ ಪೂಜೆಗೆ ಪ್ರತಿಯಾಗಿ ಪ್ರಸಾದವನ್ನು ತಟ್ಟೆಯಲ್ಲಿ ಹಾಕಿ ಕೊಟ್ಟಿದ್ದಾರೆ.
ಪ್ರಸಾದ ಪಡೆದು ಹಣೆಗೆ ತಿಲಕವಿಡುತ್ತಲೇ ಮೇಲಿನಿಂದ ಹೂವೊಂದು ಚೌಟರು ಕೈಯಲ್ಲಿ ಹಿಡಿದುಕೊಂಡಿದ್ದ ತಟ್ಟೆಗೆ ಬಂದು ಬಿದ್ದಿದ್ದು ಅಚ್ಚರಿ ಎನ್ನುವಂತೆ ರಾಜೇಶ್ ನಾಯ್ಕ್ ಮತ್ತು ಬ್ರಿಜೇಶ್ ಚೌಟ ಮೇಲೆ ನೋಡಿದ್ದಾರೆ. ಗರ್ಭಗುಡಿಯ ಮುಂದೆ ಮೇಲ್ಭಾಗದಲ್ಲಿ ಅಲಂಕಾರಕ್ಕೆ ಇಡಲಾಗಿದ್ದ ಹೂವು ಅಕಸ್ಮಾತ್ ಪ್ರಸಾದ ತಟ್ಟೆಗೆ ಬಿದ್ದಿರುವುದು ಅಲ್ಲಿ ವಿಡಿಯೋ ಮಾಡುತ್ತಿದ್ದಾಗ ಸೆರೆಯಾಗಿದೆ. ಆಮೂಲಕ ಪೊಳಲಿ ದೇವಿಯ ಅಭಯವೇ ಬ್ರಿಜೇಶ್ ಚೌಟರಿಗೆ ಸಿಕ್ಕಂತಾಗಿದೆ ಎನ್ನುವ ರೀತಿ ಅಭಿಮಾನಿಗಳು ವಿಡಿಯೋ ಷೇರ್ ಮಾಡುತ್ತಿದ್ದಾರೆ.
ಎರಡು ದಿನಗಳಲ್ಲಿ ಜಾಲತಾಣದಲ್ಲಿ ಈ ವಿಡಿಯೋ ಭಾರೀ ವೈರಲ್ ಆಗಿದ್ದು, ಸುರಥ ರಾಜನ ಭಕ್ತಿಗೆ ರಾಜ್ಯವನ್ನೇ ಕರುಣಿಸಿದ ಪೊಳಲಿ ಜಗನ್ಮಾತೆಯ ಅನುಗ್ರಹ ದೇಶ ಕಾಯೋ ಯೋಧನಿಗೆ ಸಿಕ್ಕಿದ ಘಳಿಗೆ, ವಿಜಯೀಭವ ಎಂದು ಅಭಿಮಾನಿಗಳು ಹಂಚಿಕೊಂಡಿದ್ದಾರೆ. ಈ ವಿಡಿಯೋವನ್ನು ಮೊದಲ ಬಾರಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ತಮ್ಮ ಫೇಸ್ಬುಕ್ ಪೇಜ್ ನಲ್ಲಿ ಹಂಚಿಕೊಂಡಿದ್ದರು.
BJP #Brijeshchowta #Polali temple visit video goes viral in #Mangalore @CaptBrijesh pic.twitter.com/awxniZvOyx
— Headline Karnataka (@hknewsonline) April 12, 2024
BJP Brijesh chowta Polali temple visit video goes viral in Mangalore. She looks grander and even more powerful during her annual jatre. May she bless all of us with health and happiness esp through this pandemic says Chowta twitter post
14-01-26 02:54 pm
Bangalore Correspondent
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm