ಬ್ರೇಕಿಂಗ್ ನ್ಯೂಸ್
01-12-20 11:06 am Mangalore Correspondent ಕರಾವಳಿ
ಮಂಗಳೂರು, ಡಿ.1: ಉಳ್ಳಾಲ ಬಳಿಯ ಅಳಿವೆಬಾಗಿಲು ಬಳಿ ಸಮುದ್ರ ಮಧ್ಯೆ ಮೀನುಗಾರಿಕಾ ಬೋಟ್ ಮುಳುಗಡೆಯಾಗಿದ್ದು ಆರು ಜನ ನಾಪತ್ತೆಯಾಗಿದ್ದಾರೆ.
22 ಜನರಿದ್ದ ಪರ್ಸಿನ್ ಮೀನುಗಾರಿಕೆ ಬೋಟ್ ನಸುಕಿನಲ್ಲಿ ಹಿಂತಿರುಗುತ್ತಿದ್ದಾಗ ಭಾರೀ ಅಲೆಗಳ ಹೊಡೆತಕ್ಕೆ ಮುಳುಗಡೆಯಾಗಿದೆ. ಉಳ್ಳಾಲದ ಅಳಿವೆಬಾಗಿಲಿನ ಸಮೀಪದಲ್ಲಿ ನೇತ್ರಾವತಿ ನದಿ ಸಮುದ್ರ ಸೇರುವುದಕ್ಕಿಂತ ಸ್ವಲ್ಪ ದೂರದಲ್ಲಿ ದುರಂತ ನಡೆದಿದೆ ಎನ್ನಲಾಗುತ್ತಿದೆ. ಬೋಟಿನಲ್ಲಿದ್ದ 22 ಜನ ಮೀನುಗಾರರಲ್ಲಿ 6 ಮಂದಿ ನಾಪತ್ತೆಯಾಗಿದ್ದಾರೆ.



ಮಂಗಳೂರಿನ ಬೋಳಾರದ ಶ್ರೀರಕ್ಷಾ ಹೆಸರಿನ ಮೀನುಗಾರಿಕಾ ಬೋಟ್ ದುರಂತಕ್ಕೀಡಾಗಿದ್ದು ಮಂಗಳೂರು, ಉಳ್ಳಾಲದವರು ಸೇರಿ ತಮಿಳುನಾಡು ಮೂಲದ ಕಾರ್ಮಿಕರು ಬೋಟಿನಲ್ಲಿದ್ದರು. ಈ ಪೈಕಿ ಮಂಗಳೂರಿನ ಪಾಂಡುರಂಗ ಸುವರ್ಣ (58), ಪ್ರೀತಮ್ (25), ಚಿಂತನ್(21), ಜಿಯಾವುಲ್ಲಾ (32), ಅನ್ಸಾರ್ (31), ಹಸೈನಾರ್ (25) ಸಮುದ್ರದಲ್ಲಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಬೋಟಿನಲ್ಲಿ ಭಾರೀ ಪ್ರಮಾಣದಲ್ಲಿ ಮೀನುಗಳ ಸಂಗ್ರಹ ಇತ್ತು. ಹಿಂತಿರುಗಿ ಬರುತ್ತಿದ್ದಾಗ ಅಲೆಗಳ ಹೊಡೆತಕ್ಕೆ ಬೋಟ್ ಮಗುಚಿದೆ ಎನ್ನಲಾಗುತ್ತಿದೆ. ಇನ್ನೊಂದು ಮೂಲದ ಪ್ರಕಾರ, ಮತ್ತಷ್ಟು ಮೀನು ಬಲೆಗೆ ಬಿದ್ದಿದ್ದು ಬೋಟಿಗೆ ಎಳೆದು ಹಾಕುವ ವೇಳೆ ಒಂದು ಬದಿಗೆ ಇಡೀ ಬೋಟ್ ಮಗುಚಿದೆ ಎನ್ನಲಾಗುತ್ತಿದೆ. ಕೂಡಲೇ ಇತರೇ ಮೀನುಗಾರಿಕಾ ದೋಣಿಗಳ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. 16 ಮಂದಿ ಡಿಂಗಿ ಮೂಲಕ ಈಜಿ ಬೇರೆ ದೋಣಿಗಳ ಮೂಲಕ ಪಾರಾಗಿದ್ದಾರೆ.
Video:
Six fishermen go missing In a tragic boat accident near Ullal. The boat, named 'Shree Raksha' from Bolar had left bolar for fishing on Monday. As many as 22 fishermen were in the boat. Fourteen out of the 22 managed to rescue themselves with the help of lifeboats.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 08:14 pm
Mangalore Correspondent
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am