ಬ್ರೇಕಿಂಗ್ ನ್ಯೂಸ್
16-04-24 08:32 pm Mangalore Correspondent ಕರಾವಳಿ
ಮಂಗಳೂರು, ಎ.16: ಪ್ರಧಾನಿ ಮೋದಿಯವರು ಮಂಗಳೂರಿನಲ್ಲಿ ನಾರಾಯಣ ಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡಿರುವುದರಿಂದ ನಾರಾಯಣ ಗುರು ಸರ್ಕಲನ್ನು ರಾಷ್ಟ್ರ ಮಟ್ಟದಲ್ಲಿ ಜನರು ನೋಡುವಂತಾಗಿದೆ. ನಾರಾಯಣ ಗುರು ಇಡೀ ಜಗತ್ತಿನಲ್ಲಿ ಅತಿ ದೊಡ್ಡ ಮಾನವತಾವಾದಿ. ಗುರುಗಳ ಪ್ರತಿಮೆಗೆ ಮಾಲಾರ್ಪಣೆ ವಿಚಾರದಲ್ಲಿ ಯಾರೂ ಮತ್ಸರ ಪಡುವ ಅಗತ್ಯವಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.
ಸುದ್ದಿಗೋಷ್ಟಿ ನಡೆಸಿದ ಅವರು, ಪ್ರಧಾನಿ ಮೋದಿಯವರನ್ನು ನಮ್ಮ ಜಿಲ್ಲೆಯ ಜನರು ಆದರದಿಂದ ಬರಮಾಡಿಕೊಂಡಿದ್ದಾರೆ. ರೋಡ್ ಶೋ ನಡೆದ ರಸ್ತೆಯ ಅಲ್ಲಲ್ಲಿ ಸ್ವಯಂಪ್ರೇರಿತವಾಗಿ ಕಲಾತಂಡಗಳು ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಿದ್ದಾರೆ. ಎಲ್ಲರಿಗೂ ಜಿಲ್ಲಾ ಬಿಜೆಪಿ ವತಿಯಿಂದ ಅಭಿನಂದನೆ ಹೇಳುತ್ತೇನೆ. ಲೇಡಿಹಿಲ್ ಸರ್ಕಲ್ ನಲ್ಲಿ ನಾರಾಯಣ ಗುರು ಸರ್ಕಲ್ ಮಾಡುವಂತಾಗಲು ಶಾಸಕ, ಸಂಸದರಿಂದ ಹಿಡಿದು ಪಾಲಿಕೆಯಲ್ಲಿ ಅಧಿಕಾರಿಗಳು, ಮೇಯರ್ ಪ್ರೇಮಾನಂದ ಶೆಟ್ಟಿ ಸೇರಿ ಎಲ್ಲರೂ ಬಹಳಷ್ಟು ಶ್ರಮ ವಹಿಸಿದ್ದಾರೆ. ಈಗ ಪ್ರಧಾನಿ ಮೋದಿ ಬಂದು ಮಾಲಾರ್ಪಣೆ ಮಾಡಿದ್ದರಿಂದ ದೇಶದ ಮಟ್ಟಕ್ಕೆ ಸರ್ಕಲ್ ಗೆ ಹೆಸರು ಬಂದಿದೆ ಎಂದರು.
![]()
ಮೋದಿ ಅವರನ್ನು ಸ್ವಾಗತಿಸಲು ಮಂಗಳೂರು ಮೇಯರ್ ಗೆ ಅವಕಾಶ ನೀಡಿಲ್ಲವೇ ಎಂಬ ಪ್ರಶ್ನೆಗೆ, ನಾವು ಎಸ್ ಪಿಜಿಗೆ ಕಳಿಸಿಕೊಟ್ಟ ಪಟ್ಟಿಯಲ್ಲಿ ಮೇಯರ್ ಹೆಸರು ಇತ್ತು. ಆದರೆ ಕೊನೆಕ್ಷಣದಲ್ಲಿ ಅವರ ಹೆಸರು ಬಿಟ್ಟು ಹೋಗಿತ್ತು. ಆ ರೀತಿಯ ಎಡವಟ್ಟು ಆಗಿದ್ದಕ್ಕೆ ನಮಗೆ ವಿಷಾದವಿದೆ ಎಂದರು. ಬಿರುವೆರ್ ಕುಡ್ಲ ತಂಡಕ್ಕೆ ಅವಕಾಶ ನೀಡಬೇಕಿತ್ತು ಎಂಬ ಅಭಿಪ್ರಾಯ ಕೇಳಿಬರುತ್ತಿದೆ ಎಂಬ ಪ್ರಶ್ನೆಗೆ, ನಾವು ಎಲ್ಲರನ್ನೂ ಜೊತೆಗೆ ಜೋಡಿಸಿಕೊಂಡು ಹೋಗುತ್ತಿದ್ದೇವೆ. ಮೂರು ದಿನದಲ್ಲಿ ಕಾರ್ಯಕ್ರಮ ಆಗಿದ್ದರಿಂದ ಕೆಲವೊಂದು ಎಡವಟ್ಟು ಆಗಿರಬಹುದು. ಅದನ್ನು ಸರಿ ಮಾಡುತ್ತೇವೆ ಎಂದಿದ್ದಾರೆ.
ವಿನಯ ಕುಮಾರ್ ಸೊರಕೆಯವರು ನಾರಾಯಣ ಗುರುಗಳ ಬಗ್ಗೆ ಮೋದಿಗೆ ಈಗ ನೆನಪಾಗಿದೆ ಎಂದು ಟೀಕಿಸಿದ್ದಕ್ಕೆ, ಗುರುಗಳ ಪ್ರತಿಮೆಗೆ ಪ್ರಧಾನಿ ಮಾಲಾರ್ಪಣೆ ಮಾಡಿದ್ದಕ್ಕೆ ಯಾರೂ ಮತ್ಸರ ಪಡಬಾರದು. ಇವರು ಬೇಕಿದ್ದರೆ ಸಿಎಂ ಸಿದ್ದರಾಮಯ್ಯ ಅವರನ್ನು ಕರೆಸಿ ಮಾಲಾರ್ಪಣೆ ಮಾಡಬಹುದಿತ್ತು. ಯಾಕೆ ಮಾಡಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.
Mangalore PM offers Floral Tributes To Sri Narayana Guru, Kumpala slams those mocking.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm