ಬ್ರೇಕಿಂಗ್ ನ್ಯೂಸ್
17-04-24 02:16 pm Mangalore Correspondent ಕರಾವಳಿ
ಮಂಗಳೂರು, ಎ.17: ಕಾರು ಡಿಕ್ಕಿಯಾಗಿ ಬೈಕ್ ಸವಾರ, ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಡ್ಯಾರ್ ನಲ್ಲಿ ನಡೆದಿದೆ.
ಬೆಳ್ತಂಗಡಿ ಮೂಲದ, ಅಡ್ಯಾರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಸಾವಿಯೊ ಮಹೇಶ್ (21) ಮೃತರು. ಅವರ ಜೊತೆಗಿದ್ದ ಸಹ ಸವಾರ, ಬೆಳ್ತಂಗಡಿ ಲಾಯ್ಲ ನಿವಾಸಿ ಪ್ರಣಮ್ ಶೆಟ್ಟಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರಿಬ್ಬರೂ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಹಾಸ್ಟೆಲ್ ನಲ್ಲಿದ್ದುಕೊಂಡು ಓದುತ್ತಿದ್ದರು.

ಸೋಮವಾರ ಸಂಜೆ ಹೊರಗಡೆ ಟ್ಯೂಶನ್ ಮುಗಿಸಿ ಬೈಕಿನಲ್ಲಿ ರಾತ್ರಿ 9 ಗಂಟೆ ವೇಳೆಗೆ ಹಿಂತಿರುಗಿ ಸಹ್ಯಾದ್ರಿ ಕಾಲೇಜಿನತ್ತ ಬರುತ್ತಿದ್ದರು. ಅಡ್ಯಾರಿನ ಸಹ್ಯಾದ್ರಿ ಕಾಲೇಜಿನ ಎದುರಿನ ರಸ್ತೆಯಿಂದ ಗೇಟಿನತ್ತ ತಿರುವು ಪಡೆಯುತ್ತಿದ್ದಾಗ ಬಿ.ಸಿ.ರೋಡ್ ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಆಡಿ ಕಾರು ವೇಗವಾಗಿ ಬಂದು ಬೈಕಿಗೆ ಡಿಕ್ಕಿ ಹೊಡೆದಿತ್ತು. ಅಪಘಾತದ ತೀವ್ರತೆಗೆ ಇಬ್ಬರೂ ಗಂಭೀರ ಗಾಯಗೊಂಡಿದ್ದಾರೆ. ಮಹೇಶ್ ಅವರ ಮುಖ ಮತ್ತು ತಲೆಯ ಹಿಂಭಾಗಕ್ಕೆ ತೀವ್ರ ಗಾಯಗೊಂಡಿದ್ದು ಅವರನ್ನು ಕೂಡಲೇ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆಸ್ಪತ್ರೆಗೆ ತಲುಪುವಷ್ಟರಲ್ಲಿ ಮಹೇಶ್ ಸಾವನ್ನಪ್ಪಿದ್ದರು.
ಗಾಯಾಳುಗಳನ್ನು ಆಟೋ ಚಾಲಕ ನಾಸಿರ್ ಕೂಡಲೇ ಆಸ್ಪತ್ರೆಗೆ ಒಯ್ದಿದ್ದು ನಾಸಿರ್ ದೂರಿನನ್ವಯ ಕಾರು ಚಾಲಕ ಶ್ಯಾಮ್ ಸುಧೀರ್ ವಿರುದ್ಧ ನಗರ ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರಿನಿಂದ ಬಿಸಿ ರೋಡ್ ರಾಷ್ಟ್ರೀಯ ಹೆದ್ದಾರಿ ರಸ್ತೆ ಅವೈಜ್ಞಾನಿಕ ರೀತಿಯಲ್ಲಿದ್ದು ರಸ್ತೆ ವಿಭಜಕದ ನಡುವೆ ಜಾಗ ಇಲ್ಲ. ಯು ಟರ್ನ್ ಪಡೆಯುವಲ್ಲಿ ಎಲ್ಲ ಕಡೆಯೂ ಸಮಸ್ಯೆ ಇದ್ದು ಅಪಘಾತಕ್ಕೆ ಕಾರಣವಾಗುತ್ತಿದೆ. ಇತ್ತೀಚೆಗೆ ಅರ್ಕುಳದಲ್ಲಿ ಇದೇ ರೀತಿ ಹಲವಾರು ಅಪಘಾತಗಳಾಗಿದ್ದು ನಡುವೆ ನಿಲ್ಲುವುದಕ್ಕೂ ಜಾಗ ಇಲ್ಲದೆ ದ್ವಿಚಕ್ರ ವಾಹನ ಸವಾರರು ಬಲಿಯಾಗುತ್ತಿದ್ದಾರೆ.
Mangalore accident at Adyar, 21 year old engineering student dies after audi car rams bike. He was a engineering student of Shyadri college. The deceased has been identified as Savio Mahesh from Belthangady.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm