ಬ್ರೇಕಿಂಗ್ ನ್ಯೂಸ್
18-04-24 05:57 pm Mangalore Correspondent ಕರಾವಳಿ
ಮಂಗಳೂರು, ಎ.18: ನಗರದ ಉರ್ವಾ ಚಿಲಿಂಬಿಯ ಸಾಯಿಮಂದಿರದ ಬಳಿ ಚುನಾವಣೆ ಪ್ರಚಾರ ನಡೆಸುವ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಪರಸ್ಪರ ಘೋಷಣೆ ಕೂಗಿದ್ದಲ್ಲದೆ, ವಾಗ್ವಾದ ನಡೆಸಿದ ಘಟನೆ ನಡೆದಿದೆ.
ರಾಮನವಮಿ ಪ್ರಯುಕ್ತ ಸಾಯಿ ಮಂದಿರದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಹೀಗಾಗಿ ಭಕ್ತರ ಸಂಖ್ಯೆಯೂ ಹೆಚ್ಚಿತ್ತು. ಇದೇ ವೇಳೆ, ಮಂದಿರದ ಎದುರಿನ ರಸ್ತೆಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರಚಾರ ನಡೆಸುತ್ತ ತೆರಳುತ್ತಿದ್ದರು. ಇದನ್ನು ಕಂಡ ಅಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು, ಮಂದಿರದ ಬಳಿ ಪ್ರಚಾರ ನಡೆಸಬಾರದು ಎಂದು ಹೇಳಿದ್ದು ವಾಗ್ವಾದಕ್ಕೆ ಕಾರಣವಾಯಿತು.





ಕೆಲಹೊತ್ತಿನಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ಸೇರಿದ್ದು, ಪರಸ್ಪರ ವಾಗ್ವಾದ ನಡೆಸಿದ್ದಾರೆ. ಮಂದಿರದ ಬಳಿ ಪ್ರಚಾರ ನಡೆಸಬಾರದು ಎಂದು ನೀವು ಯಾರು ಹೇಳೋಕೆ ಎಂದು ಬಿಜೆಪಿಯವರು ಪ್ರಶ್ನಿಸಿದರೆ, ಇಲ್ಲಿ ಪ್ರಚಾರ ಮಾಡಲಿಕ್ಕಿಲ್ಲ, ನಾವು ಮಾಡೋದಿಲ್ಲ. ಮಂದಿರದಲ್ಲಿ ರಾಜಕೀಯ ಇಲ್ಲ ಎಂದಿದ್ದಾರೆ. ನಾವು ಒಳಗಡೆ ಪ್ರಚಾರ ಮಾಡ್ತಾ ಇಲ್ಲ. ಹೊರಗಿನಿಂದ ನಾವು ಹೋಗ್ತಾ ಇದ್ದರೆ ನೀವು ಯಾಕೆ ಅಡ್ಡಿ ಬಂದಿದ್ದು ಎಂದು ವಾಗ್ವಾದ ಮಾಡಿದ್ದಾರೆ. ಹೊಯ್ ಕೈ ಆಗುತ್ತೆ ಎನ್ನುವಾಗ ಶಾಸಕ ವೇದವ್ಯಾಸ ಕಾಮತ್ ಮತ್ತು ಕಾಂಗ್ರೆಸ್ ಮುಖಂಡ ಮಿಥುನ್ ರೈ ಸ್ಥಳಕ್ಕಾಗಮಿಸಿ ಕಾರ್ಯಕರ್ತರನ್ನು ಸಮಾಧಾನ ಪಡಿಸಿದ್ದು, ದೂರಕ್ಕ ಕಳಿಸಿದ್ದಾರೆ.
ಉರ್ವಾ ಇನ್ಸ್ ಪೆಕ್ಟರ್ ಭಾರತೀ ಸ್ಥಳಕ್ಕೆ ಬಂದು ಸೇರಿದ್ದ ಜನರನ್ನು ಚದುರಿಸುವ ಕೆಲಸ ಮಾಡಿದ್ದಾರೆ. ಕೆಲಹೊತ್ತು ಚಿಲಿಂಬಿಯಲ್ಲಿ ಜನ ಸೇರಿದ್ದರಿಂದ ವಾಗ್ವಾದ, ಹೊಡೆದಾಟಕ್ಕೆ ಕಾರಣವಾಗುತ್ತಾ ಅನ್ನುವ ಸ್ಥಿತಿ ಉಂಟಾಗಿತ್ತು.
Congress BJP campaign turns into fight near Sai mandir Chilimbi in Mangalore. Police who arrived at the spot sent the members of both the party away.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am