ಬ್ರೇಕಿಂಗ್ ನ್ಯೂಸ್
18-04-24 05:57 pm Mangalore Correspondent ಕರಾವಳಿ
ಮಂಗಳೂರು, ಎ.18: ನಗರದ ಉರ್ವಾ ಚಿಲಿಂಬಿಯ ಸಾಯಿಮಂದಿರದ ಬಳಿ ಚುನಾವಣೆ ಪ್ರಚಾರ ನಡೆಸುವ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಪರಸ್ಪರ ಘೋಷಣೆ ಕೂಗಿದ್ದಲ್ಲದೆ, ವಾಗ್ವಾದ ನಡೆಸಿದ ಘಟನೆ ನಡೆದಿದೆ.
ರಾಮನವಮಿ ಪ್ರಯುಕ್ತ ಸಾಯಿ ಮಂದಿರದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಹೀಗಾಗಿ ಭಕ್ತರ ಸಂಖ್ಯೆಯೂ ಹೆಚ್ಚಿತ್ತು. ಇದೇ ವೇಳೆ, ಮಂದಿರದ ಎದುರಿನ ರಸ್ತೆಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರಚಾರ ನಡೆಸುತ್ತ ತೆರಳುತ್ತಿದ್ದರು. ಇದನ್ನು ಕಂಡ ಅಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು, ಮಂದಿರದ ಬಳಿ ಪ್ರಚಾರ ನಡೆಸಬಾರದು ಎಂದು ಹೇಳಿದ್ದು ವಾಗ್ವಾದಕ್ಕೆ ಕಾರಣವಾಯಿತು.





ಕೆಲಹೊತ್ತಿನಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ಸೇರಿದ್ದು, ಪರಸ್ಪರ ವಾಗ್ವಾದ ನಡೆಸಿದ್ದಾರೆ. ಮಂದಿರದ ಬಳಿ ಪ್ರಚಾರ ನಡೆಸಬಾರದು ಎಂದು ನೀವು ಯಾರು ಹೇಳೋಕೆ ಎಂದು ಬಿಜೆಪಿಯವರು ಪ್ರಶ್ನಿಸಿದರೆ, ಇಲ್ಲಿ ಪ್ರಚಾರ ಮಾಡಲಿಕ್ಕಿಲ್ಲ, ನಾವು ಮಾಡೋದಿಲ್ಲ. ಮಂದಿರದಲ್ಲಿ ರಾಜಕೀಯ ಇಲ್ಲ ಎಂದಿದ್ದಾರೆ. ನಾವು ಒಳಗಡೆ ಪ್ರಚಾರ ಮಾಡ್ತಾ ಇಲ್ಲ. ಹೊರಗಿನಿಂದ ನಾವು ಹೋಗ್ತಾ ಇದ್ದರೆ ನೀವು ಯಾಕೆ ಅಡ್ಡಿ ಬಂದಿದ್ದು ಎಂದು ವಾಗ್ವಾದ ಮಾಡಿದ್ದಾರೆ. ಹೊಯ್ ಕೈ ಆಗುತ್ತೆ ಎನ್ನುವಾಗ ಶಾಸಕ ವೇದವ್ಯಾಸ ಕಾಮತ್ ಮತ್ತು ಕಾಂಗ್ರೆಸ್ ಮುಖಂಡ ಮಿಥುನ್ ರೈ ಸ್ಥಳಕ್ಕಾಗಮಿಸಿ ಕಾರ್ಯಕರ್ತರನ್ನು ಸಮಾಧಾನ ಪಡಿಸಿದ್ದು, ದೂರಕ್ಕ ಕಳಿಸಿದ್ದಾರೆ.
ಉರ್ವಾ ಇನ್ಸ್ ಪೆಕ್ಟರ್ ಭಾರತೀ ಸ್ಥಳಕ್ಕೆ ಬಂದು ಸೇರಿದ್ದ ಜನರನ್ನು ಚದುರಿಸುವ ಕೆಲಸ ಮಾಡಿದ್ದಾರೆ. ಕೆಲಹೊತ್ತು ಚಿಲಿಂಬಿಯಲ್ಲಿ ಜನ ಸೇರಿದ್ದರಿಂದ ವಾಗ್ವಾದ, ಹೊಡೆದಾಟಕ್ಕೆ ಕಾರಣವಾಗುತ್ತಾ ಅನ್ನುವ ಸ್ಥಿತಿ ಉಂಟಾಗಿತ್ತು.
Congress BJP campaign turns into fight near Sai mandir Chilimbi in Mangalore. Police who arrived at the spot sent the members of both the party away.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm