ಬ್ರೇಕಿಂಗ್ ನ್ಯೂಸ್
01-12-20 05:16 pm Mangalore Correspondent ಕರಾವಳಿ
ಮಂಗಳೂರು, ಡಿ.1: ಆಯುಷ್ ಇಲಾಖೆಯ ‘ಸೃಷ್ಟಿ ಕ್ರಿಯೆ’ಯ ಯೋಜನೆ ಫಲ ನೀಡಿದೆ. ಮದುವೆಯಾಗಿ 9 ವರ್ಷಗಳಾದರೂ ಮಕ್ಕಳಾಗದೆ ಬೇಸತ್ತಿದ್ದ ಮಹಿಳೆ ಗರ್ಭಿಣಿಯಾಗಿ ಆರೋಗ್ಯವಂತ ಮಗುವಿಗೆ ಜನ್ಮ ನೀಡಿದ್ದಾರೆ.
ಹಾಸನ ಜಿಲ್ಲೆಯ ತರೀಕೆರೆ ಮೂಲದ ರಮೇಶ್ – ಶಶಿಕಲಾ ದಂಪತಿಗೆ ಮದುವೆಯಾಗಿ 9 ವರ್ಷಗಳಾದರೂ ಮಗು ಆಗಿರಲಿಲ್ಲ. ಅಲೋಪತಿ ಮತ್ತು ಆಯುರ್ವೇದ ಪ್ರಕಾರ ಹಲವೆಡೆ ಔಷಧಿಯನ್ನೂ ಮಾಡಿದ್ದರು. ಕಳೆದ ಬಾರಿಯ 2019ರ ಡಿಸೆಂಬರ್ ತಿಂಗಳಲ್ಲಿ ದಂಪತಿ ಆಯುಷ್ ಇಲಾಖೆಯಡಿ ಆರಂಭಗೊಂಡ ಸೃಷ್ಟಿ ಯೋಜನೆಯ ವಿಚಾರ ತಿಳಿದು ಪರೀಕ್ಷೆಗೆ ಬಂದಿದ್ದರು. ಅದರಂತೆ, ದಂಪತಿ ಅಲೋಪತಿ ಮತ್ತು ಆಯುರ್ವೇದ ಔಷಧ ನಿಲ್ಲಿಸಿ, ಹೋಮಿಯೋಪತಿ ಔಷಧಿ ಆರಂಭಿಸಿದ್ದರು.
ಎರಡೇ ತಿಂಗಳಲ್ಲಿ ಶಶಿಕಲಾ ಸಹಜ ಎನ್ನುವಂತೆ ಗರ್ಭ ಧರಿಸಿದ್ದರು. ಫೆಬ್ರವರಿಯಲ್ಲಿ ಗರ್ಭಿಣಿಯಾಗಿದ್ದ ಮಹಿಳೆ ಇದೀಗ ನವೆಂಬರ್ 28ರಂದು ಮಗುವಿಗೆ ಜನ್ಮ ನೀಡಿದ್ದಾರೆ. ಮಗು 3.3 ಕೆಜಿ ಭಾರ ಹೊಂದಿದ್ದು ಆರೋಗ್ಯವಾಗಿದೆ ಎಂದು ಚಿಕಿತ್ಸೆ ನೀಡಿರುವ ಯೇನಪೋಯ ಆಸ್ಪತ್ರೆಯ ಹೋಮಿಯೋಪತಿ ವಿಭಾಗದ ವೈದ್ಯ ಡಾ.ಕಿರಣ್ ಶಶಿಕಾಂತ್ ಹೇಳಿದ್ದಾರೆ. ಆಯುಷ್ ಸಂಯೋಜನೆಯಡಿ ಆರಂಭಗೊಂಡ ಸೃಷ್ಟಿ ಯೋಜನೆಯಲ್ಲಿ ಮಗುವಾಗಿದ್ದು ರಾಜ್ಯದಲ್ಲಿ ಇದೇ ಮೊದಲು.

ಜಿಲ್ಲಾ ಆಯುಷ್ ಇಲಾಖೆಯಡಿ ಯೇನಪೋಯ ಹೋಮಿಯೋಪತಿಕ್ ಮೆಡಿಕಲ್ ಕಾಲೇಜಿನ ಸಹಯೋಗದಲ್ಲಿ ಸೃಷ್ಟಿ ಯೋಜನೆ ಆರಂಭಿಸಲಾಗಿತ್ತು. ಮಕ್ಕಳಾಗದವರಿಗೆ ನವೀನ ತೆರನಾದ ಚಿಕಿತ್ಸೆ ನೀಡುವ ಮೂಲಕ ಗರ್ಭಿಣಿಯಾಗಿಸುವ ಯೋಜನೆಗೆ 2019ರ ಆಗಸ್ಟ್ 29ರಂದು ಆಯುಷ್ ಇಲಾಖೆ ಸಚಿವ ಶ್ರೀಪಾದ್ ನಾಯ್ಕ್ ಚಾಲನೆ ನೀಡಿದ್ದರು.
ಸೃಷ್ಟಿ ಹೋಮಿಯೋಪತಿಕ್ ಫರ್ಟಿಲಿಟಿ ಕೇರ್ ಸೆಂಟರ್ ಎನ್ನುವ ವಿಭಾಗವನ್ನು ಆಯುಷ್ ಇಲಾಖೆಯಡಿ ವೆನ್ಲಾಕ್ ಆಸ್ಪತ್ರೆಯಲ್ಲಿ ಆರಂಭಿಸಲಾಗಿದ್ದು 42 ಮಂದಿ ಮಕ್ಕಳಾಗದವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಮಕ್ಕಳಾಗದೆ ನೋವು ಅನುಭವಿಸುವ ದಂಪತಿಗೆ ಇದೊಂದು ಆಶಾಕಿರಣ ಎಂದು ಆಯುಷ್ ವೈದ್ಯ ಡಾ.ಮೊಹಮ್ಮದ್ ಇಕ್ಬಾಲ್ ತಿಳಿಸಿದ್ದಾರೆ.
An experiment undertaken under ambitious 'Srishti' scheme introduced by the Ayush department of Dakshina Kannada district to help childless couples to have children, has borne fruits perhaps for the first time in the state. A baby has been born out of homeopathy fertility treatment.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm