ಬ್ರೇಕಿಂಗ್ ನ್ಯೂಸ್
01-12-20 05:16 pm Mangalore Correspondent ಕರಾವಳಿ
ಮಂಗಳೂರು, ಡಿ.1: ಆಯುಷ್ ಇಲಾಖೆಯ ‘ಸೃಷ್ಟಿ ಕ್ರಿಯೆ’ಯ ಯೋಜನೆ ಫಲ ನೀಡಿದೆ. ಮದುವೆಯಾಗಿ 9 ವರ್ಷಗಳಾದರೂ ಮಕ್ಕಳಾಗದೆ ಬೇಸತ್ತಿದ್ದ ಮಹಿಳೆ ಗರ್ಭಿಣಿಯಾಗಿ ಆರೋಗ್ಯವಂತ ಮಗುವಿಗೆ ಜನ್ಮ ನೀಡಿದ್ದಾರೆ.
ಹಾಸನ ಜಿಲ್ಲೆಯ ತರೀಕೆರೆ ಮೂಲದ ರಮೇಶ್ – ಶಶಿಕಲಾ ದಂಪತಿಗೆ ಮದುವೆಯಾಗಿ 9 ವರ್ಷಗಳಾದರೂ ಮಗು ಆಗಿರಲಿಲ್ಲ. ಅಲೋಪತಿ ಮತ್ತು ಆಯುರ್ವೇದ ಪ್ರಕಾರ ಹಲವೆಡೆ ಔಷಧಿಯನ್ನೂ ಮಾಡಿದ್ದರು. ಕಳೆದ ಬಾರಿಯ 2019ರ ಡಿಸೆಂಬರ್ ತಿಂಗಳಲ್ಲಿ ದಂಪತಿ ಆಯುಷ್ ಇಲಾಖೆಯಡಿ ಆರಂಭಗೊಂಡ ಸೃಷ್ಟಿ ಯೋಜನೆಯ ವಿಚಾರ ತಿಳಿದು ಪರೀಕ್ಷೆಗೆ ಬಂದಿದ್ದರು. ಅದರಂತೆ, ದಂಪತಿ ಅಲೋಪತಿ ಮತ್ತು ಆಯುರ್ವೇದ ಔಷಧ ನಿಲ್ಲಿಸಿ, ಹೋಮಿಯೋಪತಿ ಔಷಧಿ ಆರಂಭಿಸಿದ್ದರು.
ಎರಡೇ ತಿಂಗಳಲ್ಲಿ ಶಶಿಕಲಾ ಸಹಜ ಎನ್ನುವಂತೆ ಗರ್ಭ ಧರಿಸಿದ್ದರು. ಫೆಬ್ರವರಿಯಲ್ಲಿ ಗರ್ಭಿಣಿಯಾಗಿದ್ದ ಮಹಿಳೆ ಇದೀಗ ನವೆಂಬರ್ 28ರಂದು ಮಗುವಿಗೆ ಜನ್ಮ ನೀಡಿದ್ದಾರೆ. ಮಗು 3.3 ಕೆಜಿ ಭಾರ ಹೊಂದಿದ್ದು ಆರೋಗ್ಯವಾಗಿದೆ ಎಂದು ಚಿಕಿತ್ಸೆ ನೀಡಿರುವ ಯೇನಪೋಯ ಆಸ್ಪತ್ರೆಯ ಹೋಮಿಯೋಪತಿ ವಿಭಾಗದ ವೈದ್ಯ ಡಾ.ಕಿರಣ್ ಶಶಿಕಾಂತ್ ಹೇಳಿದ್ದಾರೆ. ಆಯುಷ್ ಸಂಯೋಜನೆಯಡಿ ಆರಂಭಗೊಂಡ ಸೃಷ್ಟಿ ಯೋಜನೆಯಲ್ಲಿ ಮಗುವಾಗಿದ್ದು ರಾಜ್ಯದಲ್ಲಿ ಇದೇ ಮೊದಲು.

ಜಿಲ್ಲಾ ಆಯುಷ್ ಇಲಾಖೆಯಡಿ ಯೇನಪೋಯ ಹೋಮಿಯೋಪತಿಕ್ ಮೆಡಿಕಲ್ ಕಾಲೇಜಿನ ಸಹಯೋಗದಲ್ಲಿ ಸೃಷ್ಟಿ ಯೋಜನೆ ಆರಂಭಿಸಲಾಗಿತ್ತು. ಮಕ್ಕಳಾಗದವರಿಗೆ ನವೀನ ತೆರನಾದ ಚಿಕಿತ್ಸೆ ನೀಡುವ ಮೂಲಕ ಗರ್ಭಿಣಿಯಾಗಿಸುವ ಯೋಜನೆಗೆ 2019ರ ಆಗಸ್ಟ್ 29ರಂದು ಆಯುಷ್ ಇಲಾಖೆ ಸಚಿವ ಶ್ರೀಪಾದ್ ನಾಯ್ಕ್ ಚಾಲನೆ ನೀಡಿದ್ದರು.
ಸೃಷ್ಟಿ ಹೋಮಿಯೋಪತಿಕ್ ಫರ್ಟಿಲಿಟಿ ಕೇರ್ ಸೆಂಟರ್ ಎನ್ನುವ ವಿಭಾಗವನ್ನು ಆಯುಷ್ ಇಲಾಖೆಯಡಿ ವೆನ್ಲಾಕ್ ಆಸ್ಪತ್ರೆಯಲ್ಲಿ ಆರಂಭಿಸಲಾಗಿದ್ದು 42 ಮಂದಿ ಮಕ್ಕಳಾಗದವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಮಕ್ಕಳಾಗದೆ ನೋವು ಅನುಭವಿಸುವ ದಂಪತಿಗೆ ಇದೊಂದು ಆಶಾಕಿರಣ ಎಂದು ಆಯುಷ್ ವೈದ್ಯ ಡಾ.ಮೊಹಮ್ಮದ್ ಇಕ್ಬಾಲ್ ತಿಳಿಸಿದ್ದಾರೆ.
An experiment undertaken under ambitious 'Srishti' scheme introduced by the Ayush department of Dakshina Kannada district to help childless couples to have children, has borne fruits perhaps for the first time in the state. A baby has been born out of homeopathy fertility treatment.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm