ಬ್ರೇಕಿಂಗ್ ನ್ಯೂಸ್
01-12-20 05:16 pm Mangalore Correspondent ಕರಾವಳಿ
ಮಂಗಳೂರು, ಡಿ.1: ಆಯುಷ್ ಇಲಾಖೆಯ ‘ಸೃಷ್ಟಿ ಕ್ರಿಯೆ’ಯ ಯೋಜನೆ ಫಲ ನೀಡಿದೆ. ಮದುವೆಯಾಗಿ 9 ವರ್ಷಗಳಾದರೂ ಮಕ್ಕಳಾಗದೆ ಬೇಸತ್ತಿದ್ದ ಮಹಿಳೆ ಗರ್ಭಿಣಿಯಾಗಿ ಆರೋಗ್ಯವಂತ ಮಗುವಿಗೆ ಜನ್ಮ ನೀಡಿದ್ದಾರೆ.
ಹಾಸನ ಜಿಲ್ಲೆಯ ತರೀಕೆರೆ ಮೂಲದ ರಮೇಶ್ – ಶಶಿಕಲಾ ದಂಪತಿಗೆ ಮದುವೆಯಾಗಿ 9 ವರ್ಷಗಳಾದರೂ ಮಗು ಆಗಿರಲಿಲ್ಲ. ಅಲೋಪತಿ ಮತ್ತು ಆಯುರ್ವೇದ ಪ್ರಕಾರ ಹಲವೆಡೆ ಔಷಧಿಯನ್ನೂ ಮಾಡಿದ್ದರು. ಕಳೆದ ಬಾರಿಯ 2019ರ ಡಿಸೆಂಬರ್ ತಿಂಗಳಲ್ಲಿ ದಂಪತಿ ಆಯುಷ್ ಇಲಾಖೆಯಡಿ ಆರಂಭಗೊಂಡ ಸೃಷ್ಟಿ ಯೋಜನೆಯ ವಿಚಾರ ತಿಳಿದು ಪರೀಕ್ಷೆಗೆ ಬಂದಿದ್ದರು. ಅದರಂತೆ, ದಂಪತಿ ಅಲೋಪತಿ ಮತ್ತು ಆಯುರ್ವೇದ ಔಷಧ ನಿಲ್ಲಿಸಿ, ಹೋಮಿಯೋಪತಿ ಔಷಧಿ ಆರಂಭಿಸಿದ್ದರು.
ಎರಡೇ ತಿಂಗಳಲ್ಲಿ ಶಶಿಕಲಾ ಸಹಜ ಎನ್ನುವಂತೆ ಗರ್ಭ ಧರಿಸಿದ್ದರು. ಫೆಬ್ರವರಿಯಲ್ಲಿ ಗರ್ಭಿಣಿಯಾಗಿದ್ದ ಮಹಿಳೆ ಇದೀಗ ನವೆಂಬರ್ 28ರಂದು ಮಗುವಿಗೆ ಜನ್ಮ ನೀಡಿದ್ದಾರೆ. ಮಗು 3.3 ಕೆಜಿ ಭಾರ ಹೊಂದಿದ್ದು ಆರೋಗ್ಯವಾಗಿದೆ ಎಂದು ಚಿಕಿತ್ಸೆ ನೀಡಿರುವ ಯೇನಪೋಯ ಆಸ್ಪತ್ರೆಯ ಹೋಮಿಯೋಪತಿ ವಿಭಾಗದ ವೈದ್ಯ ಡಾ.ಕಿರಣ್ ಶಶಿಕಾಂತ್ ಹೇಳಿದ್ದಾರೆ. ಆಯುಷ್ ಸಂಯೋಜನೆಯಡಿ ಆರಂಭಗೊಂಡ ಸೃಷ್ಟಿ ಯೋಜನೆಯಲ್ಲಿ ಮಗುವಾಗಿದ್ದು ರಾಜ್ಯದಲ್ಲಿ ಇದೇ ಮೊದಲು.

ಜಿಲ್ಲಾ ಆಯುಷ್ ಇಲಾಖೆಯಡಿ ಯೇನಪೋಯ ಹೋಮಿಯೋಪತಿಕ್ ಮೆಡಿಕಲ್ ಕಾಲೇಜಿನ ಸಹಯೋಗದಲ್ಲಿ ಸೃಷ್ಟಿ ಯೋಜನೆ ಆರಂಭಿಸಲಾಗಿತ್ತು. ಮಕ್ಕಳಾಗದವರಿಗೆ ನವೀನ ತೆರನಾದ ಚಿಕಿತ್ಸೆ ನೀಡುವ ಮೂಲಕ ಗರ್ಭಿಣಿಯಾಗಿಸುವ ಯೋಜನೆಗೆ 2019ರ ಆಗಸ್ಟ್ 29ರಂದು ಆಯುಷ್ ಇಲಾಖೆ ಸಚಿವ ಶ್ರೀಪಾದ್ ನಾಯ್ಕ್ ಚಾಲನೆ ನೀಡಿದ್ದರು.
ಸೃಷ್ಟಿ ಹೋಮಿಯೋಪತಿಕ್ ಫರ್ಟಿಲಿಟಿ ಕೇರ್ ಸೆಂಟರ್ ಎನ್ನುವ ವಿಭಾಗವನ್ನು ಆಯುಷ್ ಇಲಾಖೆಯಡಿ ವೆನ್ಲಾಕ್ ಆಸ್ಪತ್ರೆಯಲ್ಲಿ ಆರಂಭಿಸಲಾಗಿದ್ದು 42 ಮಂದಿ ಮಕ್ಕಳಾಗದವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಮಕ್ಕಳಾಗದೆ ನೋವು ಅನುಭವಿಸುವ ದಂಪತಿಗೆ ಇದೊಂದು ಆಶಾಕಿರಣ ಎಂದು ಆಯುಷ್ ವೈದ್ಯ ಡಾ.ಮೊಹಮ್ಮದ್ ಇಕ್ಬಾಲ್ ತಿಳಿಸಿದ್ದಾರೆ.
An experiment undertaken under ambitious 'Srishti' scheme introduced by the Ayush department of Dakshina Kannada district to help childless couples to have children, has borne fruits perhaps for the first time in the state. A baby has been born out of homeopathy fertility treatment.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm