ಬ್ರೇಕಿಂಗ್ ನ್ಯೂಸ್
01-12-20 05:16 pm Mangalore Correspondent ಕರಾವಳಿ
ಮಂಗಳೂರು, ಡಿ.1: ಆಯುಷ್ ಇಲಾಖೆಯ ‘ಸೃಷ್ಟಿ ಕ್ರಿಯೆ’ಯ ಯೋಜನೆ ಫಲ ನೀಡಿದೆ. ಮದುವೆಯಾಗಿ 9 ವರ್ಷಗಳಾದರೂ ಮಕ್ಕಳಾಗದೆ ಬೇಸತ್ತಿದ್ದ ಮಹಿಳೆ ಗರ್ಭಿಣಿಯಾಗಿ ಆರೋಗ್ಯವಂತ ಮಗುವಿಗೆ ಜನ್ಮ ನೀಡಿದ್ದಾರೆ.
ಹಾಸನ ಜಿಲ್ಲೆಯ ತರೀಕೆರೆ ಮೂಲದ ರಮೇಶ್ – ಶಶಿಕಲಾ ದಂಪತಿಗೆ ಮದುವೆಯಾಗಿ 9 ವರ್ಷಗಳಾದರೂ ಮಗು ಆಗಿರಲಿಲ್ಲ. ಅಲೋಪತಿ ಮತ್ತು ಆಯುರ್ವೇದ ಪ್ರಕಾರ ಹಲವೆಡೆ ಔಷಧಿಯನ್ನೂ ಮಾಡಿದ್ದರು. ಕಳೆದ ಬಾರಿಯ 2019ರ ಡಿಸೆಂಬರ್ ತಿಂಗಳಲ್ಲಿ ದಂಪತಿ ಆಯುಷ್ ಇಲಾಖೆಯಡಿ ಆರಂಭಗೊಂಡ ಸೃಷ್ಟಿ ಯೋಜನೆಯ ವಿಚಾರ ತಿಳಿದು ಪರೀಕ್ಷೆಗೆ ಬಂದಿದ್ದರು. ಅದರಂತೆ, ದಂಪತಿ ಅಲೋಪತಿ ಮತ್ತು ಆಯುರ್ವೇದ ಔಷಧ ನಿಲ್ಲಿಸಿ, ಹೋಮಿಯೋಪತಿ ಔಷಧಿ ಆರಂಭಿಸಿದ್ದರು.
ಎರಡೇ ತಿಂಗಳಲ್ಲಿ ಶಶಿಕಲಾ ಸಹಜ ಎನ್ನುವಂತೆ ಗರ್ಭ ಧರಿಸಿದ್ದರು. ಫೆಬ್ರವರಿಯಲ್ಲಿ ಗರ್ಭಿಣಿಯಾಗಿದ್ದ ಮಹಿಳೆ ಇದೀಗ ನವೆಂಬರ್ 28ರಂದು ಮಗುವಿಗೆ ಜನ್ಮ ನೀಡಿದ್ದಾರೆ. ಮಗು 3.3 ಕೆಜಿ ಭಾರ ಹೊಂದಿದ್ದು ಆರೋಗ್ಯವಾಗಿದೆ ಎಂದು ಚಿಕಿತ್ಸೆ ನೀಡಿರುವ ಯೇನಪೋಯ ಆಸ್ಪತ್ರೆಯ ಹೋಮಿಯೋಪತಿ ವಿಭಾಗದ ವೈದ್ಯ ಡಾ.ಕಿರಣ್ ಶಶಿಕಾಂತ್ ಹೇಳಿದ್ದಾರೆ. ಆಯುಷ್ ಸಂಯೋಜನೆಯಡಿ ಆರಂಭಗೊಂಡ ಸೃಷ್ಟಿ ಯೋಜನೆಯಲ್ಲಿ ಮಗುವಾಗಿದ್ದು ರಾಜ್ಯದಲ್ಲಿ ಇದೇ ಮೊದಲು.

ಜಿಲ್ಲಾ ಆಯುಷ್ ಇಲಾಖೆಯಡಿ ಯೇನಪೋಯ ಹೋಮಿಯೋಪತಿಕ್ ಮೆಡಿಕಲ್ ಕಾಲೇಜಿನ ಸಹಯೋಗದಲ್ಲಿ ಸೃಷ್ಟಿ ಯೋಜನೆ ಆರಂಭಿಸಲಾಗಿತ್ತು. ಮಕ್ಕಳಾಗದವರಿಗೆ ನವೀನ ತೆರನಾದ ಚಿಕಿತ್ಸೆ ನೀಡುವ ಮೂಲಕ ಗರ್ಭಿಣಿಯಾಗಿಸುವ ಯೋಜನೆಗೆ 2019ರ ಆಗಸ್ಟ್ 29ರಂದು ಆಯುಷ್ ಇಲಾಖೆ ಸಚಿವ ಶ್ರೀಪಾದ್ ನಾಯ್ಕ್ ಚಾಲನೆ ನೀಡಿದ್ದರು.
ಸೃಷ್ಟಿ ಹೋಮಿಯೋಪತಿಕ್ ಫರ್ಟಿಲಿಟಿ ಕೇರ್ ಸೆಂಟರ್ ಎನ್ನುವ ವಿಭಾಗವನ್ನು ಆಯುಷ್ ಇಲಾಖೆಯಡಿ ವೆನ್ಲಾಕ್ ಆಸ್ಪತ್ರೆಯಲ್ಲಿ ಆರಂಭಿಸಲಾಗಿದ್ದು 42 ಮಂದಿ ಮಕ್ಕಳಾಗದವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಮಕ್ಕಳಾಗದೆ ನೋವು ಅನುಭವಿಸುವ ದಂಪತಿಗೆ ಇದೊಂದು ಆಶಾಕಿರಣ ಎಂದು ಆಯುಷ್ ವೈದ್ಯ ಡಾ.ಮೊಹಮ್ಮದ್ ಇಕ್ಬಾಲ್ ತಿಳಿಸಿದ್ದಾರೆ.
An experiment undertaken under ambitious 'Srishti' scheme introduced by the Ayush department of Dakshina Kannada district to help childless couples to have children, has borne fruits perhaps for the first time in the state. A baby has been born out of homeopathy fertility treatment.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 08:14 pm
Mangalore Correspondent
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am